AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಜ. 27, 28ರಂದು ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್, ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ನಗರದ ಕುಸುಗಲ್ ರಸ್ತೆಯಲ್ಲಿ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 15 ದೇಶದ 23 ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ದೇಸಿ ಕ್ರೀಡೆಗಳಿಗೆ ಆದ್ಯತೆ ನೀಡಲು ಆಯೋಜನೆ ಮಾಡಲಾಗಿದೆ ಎಂದಿದ್ದಾರೆ.

ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಜ. 27, 28ರಂದು ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ
ಗಾಳಿಪಟ ಉತ್ಸವ
ಶಿವಕುಮಾರ್ ಪತ್ತಾರ್
| Edited By: |

Updated on: Jan 23, 2024 | 8:07 PM

Share

ಹುಬ್ಬಳ್ಳಿ, ಜನವರಿ 23: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ನಗರದ ಕುಸುಗಲ್ ರಸ್ತೆಯಲ್ಲಿ ಗಾಳಿಪಟ ಉತ್ಸವ (Kite festival) ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಳಿಪಟ ಉತ್ಸವದಲ್ಲಿ 15 ದೇಶದ 23 ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ಜೊತೆಗೆ ಕುಸ್ತಿ, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ದೇಸಿ ಕ್ರೀಡೆಗಳಿಗೆ ಆದ್ಯತೆ ನೀಡಲು ಆಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ನವರು ಇಟಲಿ ತಳಿಗಳು: ​ಅರವಿಂದ ಬೆಲ್ಲದ್

ಕಾಂಗ್ರೆಸ್​ನವರು ಇಟಲಿ ತಳಿಗಳು.​ ಕಾಂಗ್ರೆಸ್ಸಿಗರು ಪೋಪ್​, ಚರ್ಚ್​ ಬಗ್ಗೆ ಮಾತಾಡಿದರೆ ಖುಷಿಯಾಗುತ್ತಿದ್ದರು. ರಾಮ, ವಿಶ್ವನಾಥ ಬಗ್ಗೆ ಮಾತಾಡಿದರೆ ಇಟಲಿ ತಳಿಗಳಿಗೆ ಎಲ್ಲಿ ತಿಳಿಯುತ್ತೆ. ಕಾಂಗ್ರೆಸ್ಸಿಗರು ಕುಡಿದು ಹೇಗೆ ಜೀವಂತ ಇರ್ತಾರೆ ಅನ್ನೋದೆ ಪವಾಡ. ಕಾಂಗ್ರೆಸ್​ನವರ ಪವಾಡವೇ ನಮಗೆ ತಿಳಿಯುತ್ತಿಲ್ಲ ಎಂದಿದ್ದಾರೆ.

ಕಾಂಗ್ರೆಸ್​ನವರು ಏನು ಕುಡೀತಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಇಟಲಿ ತಳಿಗಳಿಂದ ನಾವೇನೂ ನಿರೀಕ್ಷೆ​ ಮಾಡುವುದಕ್ಕೆ ಆಗುವುದಿಲ್ಲ. ರಾಹುಲ್ ಗಾಂಧಿ ಮುತ್ತಜ್ಜ ನಮ್ಮ ದೇಶದ ಮೊದಲ ಪ್ರಧಾನಮಂತ್ರಿ. ನಮ್ಮ ದೇಶದ ಗೌರವ, ಅಭಿಮಾನ, ಧರ್ಮ ಬಗ್ಗೆ ಯಾವ ಕಲ್ಪನೆ ಇಲ್ಲ. ದೇಶದಲ್ಲಿ ರಾಮ ಒಬ್ಬನೇ, ಗಾಂಧಿಗೂ ಅದೇ ರಾಮ, ನಮಗೂ ಅದೇ ರಾಮ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ವ್ರತದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ವೀರಪ್ಪ ಮೊಯ್ಲಿಗೆ ತಿವಿದ ಲೆಹರ್‌ ಸಿಂಗ್‌

ವೀರಪ್ಪ ಮೊಯ್ಲಿ ಅವರು ಪ್ರಭುದ್ಧ ರಾಜಕಾರಣಿ. ಅವರು ಈ ರೀತಿ ಟೀಕೆ ಮಾಡುತ್ತಾರೆ ಅಂತ ನಿರೀಕ್ಷೆ ಮಾಡಿರಲಿಲ್ಲ. ಜಗದೀಶ್ ಶೆಟ್ಟರ್ ಬಿಜೆಪಿಗೆ ಬರೋದು ಗೊತ್ತಿಲ್ಲ. ತಳಬುಡ ಇಲ್ಲದ ಚರ್ಚೆ, ಊಹಾಪೋಹದ ಬಗ್ಗೆ ಮಾತನಾಡಲ್ಲ ಎಂದಿದ್ದಾರೆ.

ಕಾಂಗ್ರೆಸ್​ನವರು ಮೊಸರಿನಲ್ಲಿ ಕಲ್ಲು ಹುಡುಕುವುದನ್ನು ಬಿಡಬೇಕು: ಶಾಸಕ ಮಹೇಶ್ ಟೆಂಗಿನಕಾಯಿ

ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿಕೆ ನೀಡಿದ್ದು, ಕಾಂಗ್ರೆಸ್​​ನವರು ಎಲ್ಲಾ ವಿಷಯದಲ್ಲೂ ರಾಜಕಾರಣ ಬೆರೆಸಬಾರದು. ಕಾಂಗ್ರೆಸ್​ನವರು ಮೊಸರಿನಲ್ಲಿ ಕಲ್ಲು ಹುಡುಕುವುದನ್ನು ಬಿಡಬೇಕು. ನಿನ್ನೆ ಜಗತ್ತಿನಲ್ಲಿ ಎಲ್ಲರೂ ಒಟ್ಟಾಗಿ ದೀಪೋತ್ಸವ ಆಚರಣೆ ಮಾಡಿದ್ದಾರೆ. ಖುಷಿ ಸಮಯದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬೇಡ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ: ಡಿಕೆಶಿ ವಾಗ್ದಾಳಿ

ನವರಾತ್ರಿಯಲ್ಲಿ ಬರೀ ನೀರು ಕುಡಿದು ಉಪವಾಸ ಮಾಡುತ್ತೇನೆ. ಊಟ, ಉಪಹಾರ ಇಲ್ಲದೆ ಉಪವಾಸ ಇರಬಹುದು. ಕಾಂಗ್ರೆಸ್​ನವರು ಉಪವಾಸ ಮಾಡುವುದಿಲ್ಲ, ಅವರಿಗೆ ರೂಢಿ ಇಲ್ಲ. ಪ್ರಧಾನಿ ಉಪವಾಸ ಬಗ್ಗೆ ಟೀಕೆ ಮಾಡುವ ಕೆಲಸ ಮಾಡಬಾರದು.

ರಾಮಮಂದಿರದ ವಿಚಾರದಲ್ಲಿ ಬಿಜೆಪಿ, ಪ್ರಧಾನಿ ಪ್ರಚಾರ ಪಡೆದಿಲ್ಲ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಬಗ್ಗೆ ಜನರಿಗೆ ವಿಶ್ವಾಸವಿದೆ. ಮೋದಿ ದೇಶದ ದೇವಸ್ಥಾನಗಳಿಗೆ ಹೋದರೆ ಕಾಂಗ್ರೆಸ್‌ಗೆ ಏನು ಸಮಸ್ಯೆ? ಕಾಂಗ್ರೆಸ್​ನಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಹದ್ದು ಮೀರಿ ಹೋಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?