Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 27 ರಂದು ಪ್ರಲ್ಹಾದ ಜೋಶಿ ಜನ್ಮದಿನ -ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್, ಸಂಭ್ರಮಾಚರಣೆ ಬೇಡ ಎಂದು ಜೋಶಿ ಮನವಿ

Pralhad Joshi birthday: ಸಾರ್ವಜನಿಕರ ಆಶೀರ್ವಾದ ಹಾಗೂ ಪ್ರೀತಿಯೇ ಶುಭಾಶಯ ಎಂದಿರುವ ಸಚಿವ ಪ್ರಲ್ಹಾದ ಜೋಶಿ ಅವರು ತಮ್ಮ ಎಂದಿನ ಸರಳತೆಯ ಸಂಪ್ರದಾಯ ಮುಂದುವರಿಸಿದ್ದಾರೆ. 59 ವರ್ಷದ ಜೋಶಿಯವರು 1962ರ ನ. 27ರಂದು ವಿಜಯಪುರದಲ್ಲಿ ಜನಿಸಿದರು. ಪ್ರಸ್ತುತ ಧಾರವಾಡ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ.

ನ. 27 ರಂದು ಪ್ರಲ್ಹಾದ ಜೋಶಿ ಜನ್ಮದಿನ -ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್, ಸಂಭ್ರಮಾಚರಣೆ ಬೇಡ ಎಂದು ಜೋಶಿ ಮನವಿ
ನ. 27 ರಂದು ಪ್ರಲ್ಹಾದ ಜೋಶಿ ಜನ್ಮದಿನ ಹಿನ್ನೆಲೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್, ಸಂಭ್ರಮಾಚರಣೆ ಬೇಡ ಎಂದು ಜೋಶಿ ಮನವಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 23, 2022 | 11:37 AM

ಧಾರವಾಡ: ಇದೇ ನವೆಂಬರ್ 27ರಂದು ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಜನ್ಮದಿನ (Birthday). ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ತಮ್ಮ ಬೆಂಬಲಿಗರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ವಿನಮ್ರ ವಿನಂತಿಯ ಸಂದೇಶವೊಂದನ್ನು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ರವಾನಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪ್ರಲ್ಹಾದ ಜೋಶಿಯವರು ಜನ್ಮದಿನದಂದು ಯಾವುದೇ ಸಂಭ್ರಮಾಚರಣೆ (Celebration) ಮಾಡುತ್ತಿಲ್ಲ. ಹೀಗಾಗಿ ಕಾರ್ಯಕರ್ತರು ಯಾವುದೇ ಬ್ಯಾನರ್ ಅಥವಾ ಹೋರ್ಡಿಂಗ್​​ಗಳನ್ನು ಅಳವಡಿಸಿ ದುಂದು ವೆಚ್ಚ ಮಾಡಬಾರದೆಂದು ಸಚಿವ ಪ್ರಲ್ಹಾದ ಜೋಶಿ ವಿನಮ್ರವಾಗಿ ವಿನಂತಿಸಿಕೊಂಡಿದ್ದಾರೆ.

ಸಾರ್ವಜನಿಕರ ಆಶೀರ್ವಾದ ಹಾಗೂ ಪ್ರೀತಿಯೇ ಶುಭಾಶಯ ಎಂದಿರುವ ಸಚಿವ ಪ್ರಲ್ಹಾದ ಜೋಶಿ ಅವರು ತಮ್ಮ ಎಂದಿನ ಸರಳತೆಯ ಸಂಪ್ರದಾಯ ಮುಂದುವರಿಸಿದ್ದಾರೆ. 59 ವರ್ಷದ ಪ್ರಲ್ಹಾದ ಜೋಶಿಯವರು 1962ರ ನವೆಂಬರ್ 27ರಂದು ವಿಜಯಪುರದಲ್ಲಿ ಜನಿಸಿದರು. ಪ್ರಸ್ತುತ ಅವರು ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಿಗೆ ಮಾಡಿರುವ ಮನವಿಯ ಪೂರ್ಣಪಾಠ ಇಲ್ಲಿದೆ :

ನನ್ನೆಲ್ಲಾ ಬಂಧುಗಳಿಗೂ ನನ್ನ ವಿನಂತಿ. ಪ್ರತಿ ವರ್ಷದಂತೆ ಈ ವರ್ಷವೂ ನನ್ನ ಜನ್ಮದಿನದಂದು ಯಾವುದೇ ಆಚರಣೆ, ಸಂಭ್ರಮ ಇರುವುದಿಲ್ಲ. ಆದ್ದರಿಂದ ಕಾರ್ಯಕರ್ತರು ಯಾವುದೇ ಬ್ಯಾನರ್ ಅಥವಾ ಹೋರ್ಡಿಂಗ್​​ಗಳನ್ನು ಅಳವಡಿಸಿ ದುಂದು ವೆಚ್ಚ ಮಾಡಬಾರದಾಗಿ ಕಳಕಳಿಯ ವಿನಂತಿ.

ನಿಮ್ಮೆಲ್ಲರ ಆಶೀರ್ವಾದ ಪ್ರೀತಿ ನನ್ನ ಪಾಲಿಗೆ ಶುಭಾಶಯ.

Published On - 11:36 am, Wed, 23 November 22

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ