AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಮೋಹನ್ ದಾಸ್​ ಪೈ ಭೇಟಿಯಾಗಿದ್ದರು: ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಗಮನ ಸೆಳೆದ ಟ್ವೀಟ್​ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ಮಳೆಯಿಂದ ಆಗಿರುವ ಅವಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದರು.

ನನ್ನನ್ನು ಮೋಹನ್ ದಾಸ್​ ಪೈ ಭೇಟಿಯಾಗಿದ್ದರು: ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಗಮನ ಸೆಳೆದ ಟ್ವೀಟ್​ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 01, 2022 | 3:02 PM

Share

ಧಾರವಾಡ: ಉದ್ಯಮಿ ಮೋಹನ್ ದಾಸ್ ಪೈ ಅವರು ನನ್ನ ಭೇಟಿಯಾಗಿ ಬೆಂಗಳೂರಿನ ರಸ್ತೆ ಪರಿಸ್ಥಿತಿ ಕುರಿತು ಚರ್ಚಿಸಿದ್ದರು ಎಂದು ಕೇಂದ್ರ ಕಲ್ಲಿದ್ದಲು ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಪ್ರಲ್ಹಾದ್ ಜೋಶಿ ಹೇಳಿದರು. ಬೆಂಗಳೂರಿನಲ್ಲಿ ಮಳೆಯಿಂದ ಆಗಿರುವ ಅವಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ಮಾಡಿರುವ ಕುರಿತು ಪ್ರಸ್ತಾಪಿಸಿದ ಅವರು, ಬೆಂಗಳೂರಿನ ಹಲವೆಡೆ ರಸ್ತೆಗಳು ಹಾಳಾಗಿರುವ ಕುರಿತು ಮೋಹನ್​ದಾಸ್ ಪೈ ನನ್ನೊಂದಿಗೆ ಮಾತನಾಡಿದ್ದರು. ಕೂಡಲೇ ರಸ್ತೆಗಳನ್ನು ಸರಿಪಡಿಸುವಂತೆ ಮನವಿ ಮಾಡಿದ್ದರು. ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಮನಕ್ಕೆ ತಂದಿದ್ದೇವೆ ಎಂದು ಜೋಶಿ ತಿಳಿಸಿದರು.

ಬೆಂಗಳೂರು ಸೇರಿದಂತೆ ಮಳೆಯಿಂದ ಹಾನಿ ಅನುಭವಿಸಿರುವ ಎಲ್ಲ ಕಡೆಯೂ ರಸ್ತೆಗಳನ್ನು ಸರಿಪಡಿಸುವ ಕೆಲಸ ಶೀಘ್ರ ಆರಂಭಿಸುತ್ತೇವೆ. ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ಹಲವು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮೋದಿ ಆಗಮನವು ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ ಎಂದು ನುಡಿದರು.

ಪ್ರಧಾನಿ ಮೋದಿ ಅವರು ಕೆಲ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಕರ್ನಾಟಕಕ್ಕೆ ಬರುತ್ತಿದ್ದಾರೆ. ಮಂಗಳೂರಿನ ಸಾರ್ವಜನಿಕ ಸಮಾವೇಶದಲ್ಲಿ ಅವರ ಭಾಷಣವೂ ಇದೆ. ಮೋದಿ ಆಗಮನದಿಂದ ಕರಾವಳಿ ಪ್ರದೇಶದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಲಿದೆ ಎಂದು ಜೋಶಿ ಹೇಳಿದರು.

ಧಾರವಾಡದ ಮಹಾಂತನಗರದ ಮೋರೆ ಫ್ಲಾಟ್​ನಲ್ಲಿ ಹೊಲಿಗೆ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿ ನೀಡುವ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಅವರು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು. ಕೇಂದ್ರದ ಧನ ಸಹಾಯದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಅಮೃತ ದೇಸಾಯಿ, ಹುಬ್ಬಳ್ಳಿ ಧಾರವಾಡ ಮಹಾನಗರದ ಮೇಯರ್ ಈರೇಶ್ ಅಂಚಟಗೇರಿ ಉಪಸ್ಥಿತರಿದ್ದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ