AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಮೋಹನ್ ದಾಸ್​ ಪೈ ಭೇಟಿಯಾಗಿದ್ದರು: ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಗಮನ ಸೆಳೆದ ಟ್ವೀಟ್​ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ಮಳೆಯಿಂದ ಆಗಿರುವ ಅವಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದರು.

ನನ್ನನ್ನು ಮೋಹನ್ ದಾಸ್​ ಪೈ ಭೇಟಿಯಾಗಿದ್ದರು: ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಗಮನ ಸೆಳೆದ ಟ್ವೀಟ್​ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on: Sep 01, 2022 | 3:02 PM

Share

ಧಾರವಾಡ: ಉದ್ಯಮಿ ಮೋಹನ್ ದಾಸ್ ಪೈ ಅವರು ನನ್ನ ಭೇಟಿಯಾಗಿ ಬೆಂಗಳೂರಿನ ರಸ್ತೆ ಪರಿಸ್ಥಿತಿ ಕುರಿತು ಚರ್ಚಿಸಿದ್ದರು ಎಂದು ಕೇಂದ್ರ ಕಲ್ಲಿದ್ದಲು ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಪ್ರಲ್ಹಾದ್ ಜೋಶಿ ಹೇಳಿದರು. ಬೆಂಗಳೂರಿನಲ್ಲಿ ಮಳೆಯಿಂದ ಆಗಿರುವ ಅವಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ಮಾಡಿರುವ ಕುರಿತು ಪ್ರಸ್ತಾಪಿಸಿದ ಅವರು, ಬೆಂಗಳೂರಿನ ಹಲವೆಡೆ ರಸ್ತೆಗಳು ಹಾಳಾಗಿರುವ ಕುರಿತು ಮೋಹನ್​ದಾಸ್ ಪೈ ನನ್ನೊಂದಿಗೆ ಮಾತನಾಡಿದ್ದರು. ಕೂಡಲೇ ರಸ್ತೆಗಳನ್ನು ಸರಿಪಡಿಸುವಂತೆ ಮನವಿ ಮಾಡಿದ್ದರು. ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಮನಕ್ಕೆ ತಂದಿದ್ದೇವೆ ಎಂದು ಜೋಶಿ ತಿಳಿಸಿದರು.

ಬೆಂಗಳೂರು ಸೇರಿದಂತೆ ಮಳೆಯಿಂದ ಹಾನಿ ಅನುಭವಿಸಿರುವ ಎಲ್ಲ ಕಡೆಯೂ ರಸ್ತೆಗಳನ್ನು ಸರಿಪಡಿಸುವ ಕೆಲಸ ಶೀಘ್ರ ಆರಂಭಿಸುತ್ತೇವೆ. ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ಹಲವು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮೋದಿ ಆಗಮನವು ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ ಎಂದು ನುಡಿದರು.

ಪ್ರಧಾನಿ ಮೋದಿ ಅವರು ಕೆಲ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಕರ್ನಾಟಕಕ್ಕೆ ಬರುತ್ತಿದ್ದಾರೆ. ಮಂಗಳೂರಿನ ಸಾರ್ವಜನಿಕ ಸಮಾವೇಶದಲ್ಲಿ ಅವರ ಭಾಷಣವೂ ಇದೆ. ಮೋದಿ ಆಗಮನದಿಂದ ಕರಾವಳಿ ಪ್ರದೇಶದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಲಿದೆ ಎಂದು ಜೋಶಿ ಹೇಳಿದರು.

ಧಾರವಾಡದ ಮಹಾಂತನಗರದ ಮೋರೆ ಫ್ಲಾಟ್​ನಲ್ಲಿ ಹೊಲಿಗೆ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿ ನೀಡುವ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಅವರು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು. ಕೇಂದ್ರದ ಧನ ಸಹಾಯದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಅಮೃತ ದೇಸಾಯಿ, ಹುಬ್ಬಳ್ಳಿ ಧಾರವಾಡ ಮಹಾನಗರದ ಮೇಯರ್ ಈರೇಶ್ ಅಂಚಟಗೇರಿ ಉಪಸ್ಥಿತರಿದ್ದರು.

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!