Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಹಾನಿ ಪ್ರದೇಶಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿ: ಸಂತ್ರಸ್ತರ ಅಹವಾಲು ಸ್ವೀಕಾರ

ನಿನ್ನೆ ಬೆಣ್ಣೆಹಳ್ಳದ ನೀರಿನ ರಭಸಕ್ಕೆ ಒಬ್ಬ ಕೊಚ್ಚಿ ಹೋಗಿದ್ದ. ಅಲ್ಲದೇ ನೂರಾರು ಏಕರೆ ಜಮೀನುಗಳಿಗೆ ನೀರು ನುಗ್ಗಿ ಅಪಾರ ಬೆಳೆ ಹಾನಿಯಾಗಿತ್ತು. ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರಿಂದ ಪ್ರಹ್ಲಾದ್ ಜೋಶಿ ಅಹವಾಲು ಸ್ವೀಕರಿಸಿದರು.  

ಮಳೆ ಹಾನಿ ಪ್ರದೇಶಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿ: ಸಂತ್ರಸ್ತರ ಅಹವಾಲು ಸ್ವೀಕಾರ
ಮಳೆ ಹಾನಿ ಪ್ರದೇಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 30, 2022 | 7:53 PM

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಮಳೆಯಿಂದ ಹಲವೆಡೆ ಹಾನಿ ಉಂಟಾಗಿದ್ದು, ಮಳೆ ಹಾನಿ ಪ್ರದೇಶಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿ ನೀಡಿ ಪರಿಶೀಲನೆ ಮಾಡಿದರು. ನಿನ್ನೆ ಬೆಣ್ಣೆಹಳ್ಳದ ನೀರಿನ ರಭಸಕ್ಕೆ ಒಬ್ಬ ಕೊಚ್ಚಿ ಹೋಗಿದ್ದ. ಅಲ್ಲದೇ ನೂರಾರು ಏಕರೆ ಜಮೀನುಗಳಿಗೆ ನೀರು ನುಗ್ಗಿ ಅಪಾರ ಬೆಳೆ ಹಾನಿಯಾಗಿತ್ತು. ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರಿಂದ ಪ್ರಹ್ಲಾದ್ ಜೋಶಿ ಅಹವಾಲು ಸ್ವೀಕರಿಸಿದರು. ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧ್ಯಕ್ಷರಾದ ಬಸವರಾಜ್ ಕುಂದಗೋಳಮಠ, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿ ವರ್ಗದವರು ಜೊತೆಗಿದ್ದರು.

ದಿಢೀರನೆ ಹೆಚ್ಚಾದ ಹಳ್ಳದ ಹರಿವು: ಓರ್ವ ನೀರು ಪಾಲು

ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿಯ ಬೆಣ್ಣೆಹಳ್ಳದಲ್ಲಿ ದಿಢೀರನೆ ನೀರಿನ ಹರಿವು ಹೆಚ್ಚಿದೆ. ಇದರಿಂದ ಹಳ್ಳದಲ್ಲಿ 20 ಜನ ಸಿಲುಕಿದ್ದು ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಹಳ್ಳದಲ್ಲಿನ ನೀರಿನ ರಭಸಕ್ಕೆ ಓರ್ವ ವ್ಯಕ್ತಿ ಕೊಚ್ಚಿ ಹೋಗಿದ್ದಾನೆ. ಜಮೀನು ಕೆಲಸಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಗೋಕಾಕ್ ಮತ್ತು ತಹಶೀಲ್ದಾರ್ ಪ್ರಕಾಶ ನಾಶಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ಸ್ಪೆಕ್ಟರ್ ರಮೇಶ್ ಗೋಕಾಕ್ ತಹಶೀಲ್ದಾರ್ ಪ್ರಕಾಶ್ ನಾಶಿ ಕಾರ್ಯಾಚರಣೆ ನಡೆಸಿದ್ದಾರೆ.

ನೀರಿನಲ್ಲಿ ಕೊಚ್ಚಿಕೊಂಡು ಹೋದ ಓರ್ವ ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಜಮೀನಿಗೆ ಕೆಲಸಕ್ಕೆಂದು ತೆರಳಿದ್ದು ವಾಪಸ್ ಬರುವಾಗ ಏಕಾಏಕಿ ಹಳ್ಳದ ನೀರು ಹೆಚ್ಚಾದ ಕಾರಣ‌ ಜನ ಸಿಲುಕಿಕೊಂಡಿದ್ದರು. ಧಾರವಾಡ ಅಕ್ಕಪಕ್ಕ ಮಳೆಯಾಗ್ತಿರೋದ್ರಿಂದ ನೀರಿನ ಹರಿವು‌ ಹೆಚ್ಚಾಗಿದೆ.

ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಎಸಿ ಭೇಟಿ

ಗದಗ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ ಎನ್, ಎಸಿ ಅನ್ನಪೂರ್ಣ ಭೇಟಿ ನೀಡಿ ಪರಿಶೀಲಿಸಿದರು. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೆರೆ ಸೇರಿದಂತೆ ಹಲವು ಕಡೆ ಭೇಟಿ ನೀಡಿದ್ದು, ಶೆಟ್ಟಿಕೆರೆ ಭರ್ತಿಯಾಗಿ, ಕೊಡಿ ಬಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಪರಿಹಾರ ಭರವಸೆ ನೀಡಿದರು.

Published On - 7:32 pm, Tue, 30 August 22

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ