AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಸರ್ಕಾರಿ ಶಾಲಾ ಕಾಲೇಜುಗಳಿಗೆ ಪ್ರಲ್ಹಾದ್ ಜೋಶಿ ಬಂಪರ್ ಗಿಫ್ಟ್: 100 ಕೋಟಿ ವೆಚ್ಚದ ಪಂಚ ಕಾರ್ಯಕ್ರಮಗಳ ಘೋಷಣೆ

Pralhad Joshi: ಶಾಲೆಗೊಂದು ಸ್ಮಾರ್ಟ್ ಕ್ಲಾಸ್ ರೂಮ್, 50 ಸಾವಿರ ಡೆಸ್ಕ್, 100 ಹೈಟೆಕ್ ಅಂಗನವಾಡಿಗಳ ನಿರ್ಮಾಣದ ಗುರಿಯನ್ನ 2 ವರ್ಷದಲ್ಲಿ ಪೂರ್ಣಗೊಳಿಸಲು ನಿಶ್ಚಯಿಸಲಾಗಿದೆ. ಸಿ.ಎಸ್.ಆರ್ ಫಂಡ್ ಮೂಲಕ ತಮ್ಮ ಕ್ಷಮತಾ ಸೇವಾ ಸಂಸ್ಥೆ ಮೂಲಕ ಪಂಚ ಯೋಜನೆ ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಧಾರವಾಡ ಸರ್ಕಾರಿ ಶಾಲಾ ಕಾಲೇಜುಗಳಿಗೆ ಪ್ರಲ್ಹಾದ್ ಜೋಶಿ ಬಂಪರ್ ಗಿಫ್ಟ್: 100 ಕೋಟಿ ವೆಚ್ಚದ ಪಂಚ ಕಾರ್ಯಕ್ರಮಗಳ ಘೋಷಣೆ
ಸರ್ಕಾರಿ ಶಾಲಾ ಕಾಲೇಜುಗಳಿಗೆ ಪ್ರಲ್ಹಾದ್ ಜೋಶಿ ಬಂಪರ್ ಗಿಫ್ಟ್: 100 ಕೋಟಿ ವೆಚ್ಚದ ಪಂಚ ಕಾರ್ಯಕ್ರಮಗಳ ಘೋಷಣೆ
TV9 Web
| Updated By: ಸಾಧು ಶ್ರೀನಾಥ್​|

Updated on: Oct 28, 2022 | 4:21 PM

Share

ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ದೀಪಾವಳಿ ಬಂಪರ್ ಗಿಫ್ಟ್ ನೀಡಿದ್ದಾರೆ. 1,177 ಶಾಲಾ ಕಾಲೇಜುಗಳಿಗೆ ಹೊಸದಾಗಿ ಬಣ್ಣ ಹಚ್ಚುವ ಬಣ್ಣದರ್ಪಣೆ ಕಾರ್ಯಕ್ರಮದ ಜೊತೆಗೆ, 320 ಹೊಸ ಕ್ಲಾಸ್ ರೂಮ್ ಗಳನ್ನ ಕಟ್ಟಿಸಿಕೊಡುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಘೋಷಿಸಿದ್ದಾರೆ. ಧಾರವಾಡದಲ್ಲಿಂದು ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡುತ್ತಿದ್ದರು.

ಶಾಲೆಗೊಂದು ಸ್ಮಾರ್ಟ್ ಕ್ಲಾಸ್ ರೂಮ್, 50 ಸಾವಿರ ಡೆಸ್ಕ್, 100 ಹೈಟೆಕ್ ಅಂಗನವಾಡಿಗಳ ನಿರ್ಮಾಣದ ಗುರಿಯನ್ನ ಮುಂಬರುವ ಎರಡು ವರ್ಷದಲ್ಲಿ ಪೂರ್ಣಗೊಳಿಸಲು ನಿಶ್ಚಯಿಸಲಾಗಿದೆ. ಸಿ.ಎಸ್.ಆರ್ ಫಂಡ್ ಮೂಲಕ ತಮ್ಮ ಕ್ಷಮತಾ ಸೇವಾ ಸಂಸ್ಥೆ ಮೂಲಕ ಪಂಚ ಯೋಜನೆಗಳನ್ನ ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆಯಿಂದ ಆರಂಭವಾಗುವ ಬಣ್ಣದರ್ಪಣೆ ಕಾರ್ಯಕ್ರಮ ಮುಂದಿನ ವರ್ಷದ ದೀಪಾವಳಿ ಒಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಪ್ರತಿ ತಿಂಗಳು 100 ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ ಕಾರ್ಯ ನಡೆಯಲಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1177 ಶಾಲಾ ಕಾಲೇಜುಗಳಿಗೆ ಹೊಸದಾಗಿ ಬಣ್ಣ ಹಚ್ಚಲು ನಿರ್ಧರಿಸಲಾಗಿದೆ.

ಪ್ರಲ್ಹಾದ್ ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಬಣ್ಣವನ್ನ ನೀಡಲಾಗುವುದು. ಕ್ಲಾಸ್ ರೂಮ್ ಗಳಿಗೆ ಬಣ್ಣ ಹಚ್ಚಲು 20 ಲೀಟರ್ ಪೇಂಟ್ ಅನ್ನ ಉಚಿತವಾಗಿ ನೀಡಲಾಗುವುದು ಎಂದು ಜೋಶಿ ಹೇಳಿದರು. ಶಾಲೆಯ ಹೊರ ಗೋಡೆಗಳಿಗೂ ಪ್ರತ್ಯೇಕವಾಗಿ ಬಣ್ಣ ವಿತರಿಸಲಾಗುವುದು. ಶಾಲೆಗಳಿಗೆ ಬಣ್ಣ ಹಚ್ಚಲು ಶ್ರಮದಾನದ ಕಾರ್ಯಕ್ಕೆ ವಿದ್ಯಾರ್ಥಿ ಸಂಘಟನೆಗಳು, ಸೇವಾ ಸಂಘಸಂಸ್ಥೆಗಳು, ಶಿಕ್ಷಕರು ಮುಂದೆ ಬರಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದರು. 20 ರೂಪಾಯಿ ಬಾಂಡ್ ಪೇಪರ್ ಮೇಲೆ ಸಹಿ ಹಾಕಿ ಶಾಲೆಗೆ ಬಣ್ಣ ಹಚ್ಚುವ ಒಪ್ಪಂದದೊಂದಿಗೆ ಸಂಘ ಸಂಸ್ಥೆಗಳು ಉಚಿತವಾಗಿ ಬಣ್ಣ ಪಡೆಯಬಹುದಾಗಿದೆ.

ಧಾರವಾಡ ಲೋಕಸಭಾ ಕ್ಷೇತ್ರದ ಸರ್ಕಾರಿ ಶಾಲಾ ಕಾಲೇಜುಗಳಿಗೆ ಕ್ಲಾಸ್ ರೂಮ್

ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳಿಗೆ 480 ಹೊಸ ಕ್ಲಾಸ್ ರೂಮ್ ಗಳ ಅಗತ್ಯವಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ವರದಿ ಪಡೆದಿರುವ ಪ್ರಲ್ಜಾದ್ ಜೋಶಿಯವರು, ಮುಂದಿನ ಎರಡು ವರ್ಷದ ಒಳಗೆ ಹೊಸ ಕ್ಲಾಸ್ ರೂಮ್ ಗಳನ್ನ ಕಟ್ಟಿಸಿಕೊಡಲು ತೀರ್ಮಾನಿಸಿದ್ದಾರೆ. 480 ಕ್ಲಾಸ್ ರೂಂಗಳ ಪೈಕಿ ರಾಜ್ಯ ಸರ್ಕಾರವೇ ತನ್ನ ಯೋಜನೆ ಅನ್ವಯ 160 ಕ್ಲಾಸ್ ರೂಮ್ ಗಳನ್ನ ಕಟ್ಟಿಸಿಕೊಡಲಿದೆ. ಉಳಿದ 320 ಹೊಸ ಕ್ಲಾಸ್ ರೂಮ್ ಗಳನ್ನ ಸಿ.ಎಸ್.ಆರ್ ಫಂಡ್ ನ ಸಹಾಯದೊಂದಿಗೆ ಕಟ್ಟಿಸಿಕೊಡುವುದಾಗಿ ಸಚಿವ ಪ್ರಲ್ಹಾದ್ ಜೋಶಿ ಅವರು ಘೋಷಿಸಿದ್ದಾರೆ.

ಅಷ್ಟೇ ಅಲ್ಲದೇ ಪ್ರತಿ ಶಾಲೆಗೊಂದು ಸ್ಮಾರ್ಟ್ ಕ್ಲಾಸ್, ಹಾಗೂ 100 ಹೈಟೆಕ್ ಅಂಗನವಾಡಿ ನಿರ್ಮಿಸಿಕೊಡುವುದಾಗಿಯೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಈಗಾಗಲೇ 10 ಸಾವಿರ ಡೆಸ್ಕ್ ಗಳನ್ನ ಸರ್ಕಾರಿ ಶಾಲಾ ಕಾಲೇಜುಗಳಿಗೆ ಪೂರೈಸಲಾಗಿದ್ದು, ಇನ್ನೂ 50 ಸಾವಿರ ಡೆಸ್ಕ್ ಗಳು ಅಗತ್ಯವಿದೆ. ಹಂತ ಹಂತವಾಗಿ 50 ಸಾವಿರ ಡೆಸ್ಕ್ ಗಳನ್ನು ಪೂರೈಸುವುದಾಗಿಯೂ ಇದೇ ವೇಳೆ ಪ್ರಲ್ಹಾದ್ ಜೋಶಿ ಭರವಸೆ ನೀಡಿದರು.

ಒಟ್ಟಾರೆ, ಶಿಗ್ಗಾವಿ – ಸವಣೂರು ಕ್ಷೇತ್ರಗಳು ಸೇರಿದಂತೆ ಸಂಪೂರ್ಣ ಧಾರವಾಡ ಲೋಕಸಭಾ ಕ್ಷೇತ್ರದ ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ದಿಗೆ 100 ಕೋಟಿ ವೆಚ್ಚದ ಮಹತ್ವದ 5 ಯೋಜನೆಗಳನ್ನ ಪ್ರಲ್ಹಾದ್ ಜೋಶಿ ಇಂದು ಘೋಷಿಸುವ ಮೂಲಕ ಕ್ಷೇತ್ರದ ಜನರಿಗೆ ಹಬ್ಬದ ಕೊಡುಗೆ ನೀಡಿದ್ದಾರೆ.

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?