AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಸರ್ಕಾರಿ ಶಾಲಾ ಕಾಲೇಜುಗಳಿಗೆ ಪ್ರಲ್ಹಾದ್ ಜೋಶಿ ಬಂಪರ್ ಗಿಫ್ಟ್: 100 ಕೋಟಿ ವೆಚ್ಚದ ಪಂಚ ಕಾರ್ಯಕ್ರಮಗಳ ಘೋಷಣೆ

Pralhad Joshi: ಶಾಲೆಗೊಂದು ಸ್ಮಾರ್ಟ್ ಕ್ಲಾಸ್ ರೂಮ್, 50 ಸಾವಿರ ಡೆಸ್ಕ್, 100 ಹೈಟೆಕ್ ಅಂಗನವಾಡಿಗಳ ನಿರ್ಮಾಣದ ಗುರಿಯನ್ನ 2 ವರ್ಷದಲ್ಲಿ ಪೂರ್ಣಗೊಳಿಸಲು ನಿಶ್ಚಯಿಸಲಾಗಿದೆ. ಸಿ.ಎಸ್.ಆರ್ ಫಂಡ್ ಮೂಲಕ ತಮ್ಮ ಕ್ಷಮತಾ ಸೇವಾ ಸಂಸ್ಥೆ ಮೂಲಕ ಪಂಚ ಯೋಜನೆ ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಧಾರವಾಡ ಸರ್ಕಾರಿ ಶಾಲಾ ಕಾಲೇಜುಗಳಿಗೆ ಪ್ರಲ್ಹಾದ್ ಜೋಶಿ ಬಂಪರ್ ಗಿಫ್ಟ್: 100 ಕೋಟಿ ವೆಚ್ಚದ ಪಂಚ ಕಾರ್ಯಕ್ರಮಗಳ ಘೋಷಣೆ
ಸರ್ಕಾರಿ ಶಾಲಾ ಕಾಲೇಜುಗಳಿಗೆ ಪ್ರಲ್ಹಾದ್ ಜೋಶಿ ಬಂಪರ್ ಗಿಫ್ಟ್: 100 ಕೋಟಿ ವೆಚ್ಚದ ಪಂಚ ಕಾರ್ಯಕ್ರಮಗಳ ಘೋಷಣೆ
TV9 Web
| Edited By: ಸಾಧು ಶ್ರೀನಾಥ್​|

Updated on: Oct 28, 2022 | 4:21 PM

Share

ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ದೀಪಾವಳಿ ಬಂಪರ್ ಗಿಫ್ಟ್ ನೀಡಿದ್ದಾರೆ. 1,177 ಶಾಲಾ ಕಾಲೇಜುಗಳಿಗೆ ಹೊಸದಾಗಿ ಬಣ್ಣ ಹಚ್ಚುವ ಬಣ್ಣದರ್ಪಣೆ ಕಾರ್ಯಕ್ರಮದ ಜೊತೆಗೆ, 320 ಹೊಸ ಕ್ಲಾಸ್ ರೂಮ್ ಗಳನ್ನ ಕಟ್ಟಿಸಿಕೊಡುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಘೋಷಿಸಿದ್ದಾರೆ. ಧಾರವಾಡದಲ್ಲಿಂದು ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡುತ್ತಿದ್ದರು.

ಶಾಲೆಗೊಂದು ಸ್ಮಾರ್ಟ್ ಕ್ಲಾಸ್ ರೂಮ್, 50 ಸಾವಿರ ಡೆಸ್ಕ್, 100 ಹೈಟೆಕ್ ಅಂಗನವಾಡಿಗಳ ನಿರ್ಮಾಣದ ಗುರಿಯನ್ನ ಮುಂಬರುವ ಎರಡು ವರ್ಷದಲ್ಲಿ ಪೂರ್ಣಗೊಳಿಸಲು ನಿಶ್ಚಯಿಸಲಾಗಿದೆ. ಸಿ.ಎಸ್.ಆರ್ ಫಂಡ್ ಮೂಲಕ ತಮ್ಮ ಕ್ಷಮತಾ ಸೇವಾ ಸಂಸ್ಥೆ ಮೂಲಕ ಪಂಚ ಯೋಜನೆಗಳನ್ನ ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆಯಿಂದ ಆರಂಭವಾಗುವ ಬಣ್ಣದರ್ಪಣೆ ಕಾರ್ಯಕ್ರಮ ಮುಂದಿನ ವರ್ಷದ ದೀಪಾವಳಿ ಒಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಪ್ರತಿ ತಿಂಗಳು 100 ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ ಕಾರ್ಯ ನಡೆಯಲಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1177 ಶಾಲಾ ಕಾಲೇಜುಗಳಿಗೆ ಹೊಸದಾಗಿ ಬಣ್ಣ ಹಚ್ಚಲು ನಿರ್ಧರಿಸಲಾಗಿದೆ.

ಪ್ರಲ್ಹಾದ್ ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಬಣ್ಣವನ್ನ ನೀಡಲಾಗುವುದು. ಕ್ಲಾಸ್ ರೂಮ್ ಗಳಿಗೆ ಬಣ್ಣ ಹಚ್ಚಲು 20 ಲೀಟರ್ ಪೇಂಟ್ ಅನ್ನ ಉಚಿತವಾಗಿ ನೀಡಲಾಗುವುದು ಎಂದು ಜೋಶಿ ಹೇಳಿದರು. ಶಾಲೆಯ ಹೊರ ಗೋಡೆಗಳಿಗೂ ಪ್ರತ್ಯೇಕವಾಗಿ ಬಣ್ಣ ವಿತರಿಸಲಾಗುವುದು. ಶಾಲೆಗಳಿಗೆ ಬಣ್ಣ ಹಚ್ಚಲು ಶ್ರಮದಾನದ ಕಾರ್ಯಕ್ಕೆ ವಿದ್ಯಾರ್ಥಿ ಸಂಘಟನೆಗಳು, ಸೇವಾ ಸಂಘಸಂಸ್ಥೆಗಳು, ಶಿಕ್ಷಕರು ಮುಂದೆ ಬರಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದರು. 20 ರೂಪಾಯಿ ಬಾಂಡ್ ಪೇಪರ್ ಮೇಲೆ ಸಹಿ ಹಾಕಿ ಶಾಲೆಗೆ ಬಣ್ಣ ಹಚ್ಚುವ ಒಪ್ಪಂದದೊಂದಿಗೆ ಸಂಘ ಸಂಸ್ಥೆಗಳು ಉಚಿತವಾಗಿ ಬಣ್ಣ ಪಡೆಯಬಹುದಾಗಿದೆ.

ಧಾರವಾಡ ಲೋಕಸಭಾ ಕ್ಷೇತ್ರದ ಸರ್ಕಾರಿ ಶಾಲಾ ಕಾಲೇಜುಗಳಿಗೆ ಕ್ಲಾಸ್ ರೂಮ್

ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳಿಗೆ 480 ಹೊಸ ಕ್ಲಾಸ್ ರೂಮ್ ಗಳ ಅಗತ್ಯವಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ವರದಿ ಪಡೆದಿರುವ ಪ್ರಲ್ಜಾದ್ ಜೋಶಿಯವರು, ಮುಂದಿನ ಎರಡು ವರ್ಷದ ಒಳಗೆ ಹೊಸ ಕ್ಲಾಸ್ ರೂಮ್ ಗಳನ್ನ ಕಟ್ಟಿಸಿಕೊಡಲು ತೀರ್ಮಾನಿಸಿದ್ದಾರೆ. 480 ಕ್ಲಾಸ್ ರೂಂಗಳ ಪೈಕಿ ರಾಜ್ಯ ಸರ್ಕಾರವೇ ತನ್ನ ಯೋಜನೆ ಅನ್ವಯ 160 ಕ್ಲಾಸ್ ರೂಮ್ ಗಳನ್ನ ಕಟ್ಟಿಸಿಕೊಡಲಿದೆ. ಉಳಿದ 320 ಹೊಸ ಕ್ಲಾಸ್ ರೂಮ್ ಗಳನ್ನ ಸಿ.ಎಸ್.ಆರ್ ಫಂಡ್ ನ ಸಹಾಯದೊಂದಿಗೆ ಕಟ್ಟಿಸಿಕೊಡುವುದಾಗಿ ಸಚಿವ ಪ್ರಲ್ಹಾದ್ ಜೋಶಿ ಅವರು ಘೋಷಿಸಿದ್ದಾರೆ.

ಅಷ್ಟೇ ಅಲ್ಲದೇ ಪ್ರತಿ ಶಾಲೆಗೊಂದು ಸ್ಮಾರ್ಟ್ ಕ್ಲಾಸ್, ಹಾಗೂ 100 ಹೈಟೆಕ್ ಅಂಗನವಾಡಿ ನಿರ್ಮಿಸಿಕೊಡುವುದಾಗಿಯೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಈಗಾಗಲೇ 10 ಸಾವಿರ ಡೆಸ್ಕ್ ಗಳನ್ನ ಸರ್ಕಾರಿ ಶಾಲಾ ಕಾಲೇಜುಗಳಿಗೆ ಪೂರೈಸಲಾಗಿದ್ದು, ಇನ್ನೂ 50 ಸಾವಿರ ಡೆಸ್ಕ್ ಗಳು ಅಗತ್ಯವಿದೆ. ಹಂತ ಹಂತವಾಗಿ 50 ಸಾವಿರ ಡೆಸ್ಕ್ ಗಳನ್ನು ಪೂರೈಸುವುದಾಗಿಯೂ ಇದೇ ವೇಳೆ ಪ್ರಲ್ಹಾದ್ ಜೋಶಿ ಭರವಸೆ ನೀಡಿದರು.

ಒಟ್ಟಾರೆ, ಶಿಗ್ಗಾವಿ – ಸವಣೂರು ಕ್ಷೇತ್ರಗಳು ಸೇರಿದಂತೆ ಸಂಪೂರ್ಣ ಧಾರವಾಡ ಲೋಕಸಭಾ ಕ್ಷೇತ್ರದ ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ದಿಗೆ 100 ಕೋಟಿ ವೆಚ್ಚದ ಮಹತ್ವದ 5 ಯೋಜನೆಗಳನ್ನ ಪ್ರಲ್ಹಾದ್ ಜೋಶಿ ಇಂದು ಘೋಷಿಸುವ ಮೂಲಕ ಕ್ಷೇತ್ರದ ಜನರಿಗೆ ಹಬ್ಬದ ಕೊಡುಗೆ ನೀಡಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!