AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆ -ಉನ್ನತ ಅಧಿಕಾರಿಗಳ ಸಮಿತಿ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಹತ್ವದ ಸಭೆ

Hubballi Ankola Railway project: ಪರಿಸರ ಹಾಗು ಅಭಿವೃದ್ದಿ ಎರಡರ ಸಮತೋಲನದೊಂದಿಗೆ ಈ ಯೋಜನೆ ಶೀಘ್ರ ಕಾರ್ಯಗತವಾಗಬೇಕಿದೆ. ಪಶ್ಚಿಮ ಘಟ್ಟದ ಜೀವಸಂಕುಲ ಹಾಗೂ ಅರಣ್ಯಕ್ಕೆ ಧಕ್ಕೆಯಾಗದ ರೀತಿ ಸಮಿತಿಯು ಅವಶ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಸೂಕ್ತ ವರದಿ ನೀಡುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳ ಸಮಿತಿಗೆ ನಿವೇದಿಸಿದರು.

ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆ -ಉನ್ನತ ಅಧಿಕಾರಿಗಳ ಸಮಿತಿ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಹತ್ವದ ಸಭೆ
ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆ - ಉನ್ನತ ಅಧಿಕಾರಿಗಳ ಸಮಿತಿ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ
TV9 Web
| Edited By: |

Updated on:Sep 29, 2022 | 9:46 PM

Share

ರಾಜ್ಯ ಹಾಗೂ ಉತ್ತರ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಹುಬ್ಬಳ್ಳಿ-ಅಂಕೋಲಾ ಹೊಸ ರೈಲು ಮಾರ್ಗ ( Hubballi Ankola Railway project) ನಿರ್ಮಾಣದ ಕಾರ್ಯ ಶೀಘ್ರ ಆರಂಭವಾಗುವುದು ಅಗತ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯೋಜನೆ ಅನುಷ್ಠಾನ ಕುರಿತಂತೆ ಉನ್ನತ ಅಧಿಕಾರಗಳ ತಂಡದೊಂದಿಗೆ ಇಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸಭೆ ನಡೆಸಿದರು.

ಪರಿಸರ ಹಾಗೂ ಅರಣ್ಯ ವಿಷಯಗಳ ಮೇಲಿನ ಪರಿಣಾಮಗಳ ಕುರಿತು ಅಧ್ಯಯನಕ್ಕಾಗಿ ಕೇಂದ್ರ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಉನ್ನತ ಅಧಿಕಾರಿಗಳ ತಂಡ ಯೋಜನಾ ಸ್ಥಳ ಪರಿಶೀಲನೆಗೆ ಆಗಮಿಸಿತ್ತು. ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಹಾಗೂ ಇತರ ಹಿರಿಯ ಅಧಿಕಾರಿಗಳ ತಂಡಕ್ಕೆ ಈ ಯೋಜನೆಯ ಮಹತ್ವ ಮತ್ತು ಅಗತ್ಯತೆಯ ಕುರಿತು ಮನವರಿಕೆ ಮಾಡಿಕೊಡಲಾಯಿತು.

ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ, ರಸ್ತೆ ಸಾಗಾಣಿಕೆಯ ವೆಚ್ಚ ಶೇ 13 ರಷ್ಟು ದುಬಾರಿಯಾಗಿದೆ. ಈ ವೆಚ್ಚವನ್ನ 2047 ರ ಹೊತ್ತಿಗೆ ಜಗತ್ತಿನ ಇತರ ದೇಶಗಳಲ್ಲಿ ಇರುವಂತೆ ಶೇ 4 ಕ್ಕೆ ಇಳಿಸಲು ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಸಂಕಲ್ಪಿಸಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಅಂಕೋಲಾದಂತಹ ರೈಲ್ವೆ ಯೋಜನೆಗಳ ಅಗತ್ಯತೆ ಇದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಉನ್ನತ ಅಧಿಕಾರಿಗಳ ತಂಡಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಪಶ್ಚಿಮ ಘಟ್ಟಗಳ ಜೀವಸಂಕುಲ ಹಾಗೂ ಇತರ ಪರಿಸರ ಅಸ್ತಿತ್ವಕ್ಕೆ ಧಕ್ಕೆಯಾಗುವುದೆಂಬ ಪರಿಸರಪ್ರೇಮಿಗಳ ಕಾಳಜಿ ಸಹಜವಾಗಿದೆ. ಈ ಬಗ್ಗೆ ತಮಗೂ ಕೂಡಾ ವೈಯಕ್ತಿಕವಾಗಿ ಅಷ್ಟೇ ಕಾಳಜಿ ಇದೆ. ಆದರೆ ದೇಶದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿರುವ ಅಭಿವೃದ್ಧಿಯೂ ಕೂಡಾ ಅಷ್ಟೇ ಅಗತ್ಯವಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಪರಿಸರ ಹಾಗು ಅಭಿವೃದ್ದಿ ಎರಡರ ಸಮತೋಲನದೊಂದಿಗೆ ಈ ಯೋಜನೆ ಶೀಘ್ರ ಕಾರ್ಯಗತವಾಗಬೇಕಿದೆ. ಭಾಗೀದಾರ ಸಂಸ್ಥೆ, ನೈರುತ್ಯ ರೈಲ್ವೆ ಈ ಮಾರ್ಗದ ನಿರ್ಮಾಣದಲ್ಲಿ ಪರಿಸರಕ್ಕೆ ಹಾಗೂ ಪಶ್ಚಿಮ ಘಟ್ಟದ ಜೀವಸಂಕುಲ ಹಾಗೂ ಅರಣ್ಯ ಪ್ರದೇಶಕ್ಕೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಅವಶ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಸೂಕ್ತ ವರದಿ ನೀಡುವಂತೆ ಸಚಿವರು ಅಧಿಕಾರಿಗಳ ಸಮಿತಿಗೆ ನಿವೇದಿಸಿದರು.

ಸಮಿತಿ ಸೂಚಿಸಿರುವಂತೆ ಈ ಯೋಜನೆಯ ಸಮಗ್ರ ಮಾಸ್ಟರ್ ಪ್ಲಾನ್ ಕೂಡಲೇ ಸಲ್ಲಿಸಲು ಇದೇ ವೇಳೆ ರೈಲ್ವೆ ಅಧಿಕಾರಿಗಳಿಗೆ ಸಚಿವ ಜೋಶಿಯವರು ಸೂಚಿಸಿದರು.

ಸಮಿತಿಯೊಂದಿಗಿನ ಚರ್ಚೆಯಲ್ಲಿ ಸಚಿವರೊಂದಿಗೆ ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಶ್ರೀ ಸಂಜೀವ ಕಿಶೋರ್, ಕರ್ನಾಟಕ ಸರಕಾರದ ಮೂಲಭೂತ ಸೌಲಭ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಗೌರವ ಗುಪ್ತಾ, ಜಿಲ್ಲಾಧಿಕಾರಿ ಶ್ರೀ ಗುರುದತ್ತ ಹೆಗಡೆ, ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೇಂದ್ರ ಸರಕಾರದ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಮಹಾನಿರ್ದೇಶಕ ರಾಕೇಶ್ ಸಿಂಗ್, ಉಪನಿರ್ದೇಶಕ ಡಾ. ರಾಜೇಂದ್ರಕುಮಾರ್, ಉಪನಿರ್ದೇಶಕ ವನ್ಯಜೀವಿ ವಿಭಾಗ ಪ್ರೊ. ಸುಕುಮಾರ್, ಎಚ್.ಎಸ್. ಸಿಂಗ್, ಡಾ. ಜಿವಿಗೋಪಿ, ಐಐಟಿ ಧಾರವಾಡ ಪ್ರೊ. ನಾಕೇಶ ಅಯ್ಯರ್ ಮುಂತಾದವರು ಕೇಂದ್ರ ತಂಡದಲ್ಲಿದ್ದಾರೆ.

Published On - 9:41 pm, Thu, 29 September 22

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ