AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ- ಧಾರವಾಡ ನೂತನ ಮೇಯರ್, ಉಪಮೇಯರ್ ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿನಂದನೆ

Hubballi-Dharwad Municipal Corporation:ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಯ ನೂತನ ಮೇಯರ್ ಆಗಿ ಆಯ್ಕೆಯಾದ ಬಿಜೆಪಿಯ ವೀಣಾ ಭರದ್ವಾಡ ಅವರಿಗೆ ಕೇಂದ್ರ ಸಚಿವ ಪಲ್ಹಾದ್ ಜೋಶಿಯವರು ಶುಭ ಹಾರೈಸಿದರು. 

ಹುಬ್ಬಳ್ಳಿ- ಧಾರವಾಡ ನೂತನ ಮೇಯರ್, ಉಪಮೇಯರ್ ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿನಂದನೆ
ಹು-ಧಾ ಪಾಲಿಕೆಗೆ ಹೊಸ ಮೇಯರ್: ಪ್ರಲ್ಹಾದ ಜೋಶಿ ಅಭಿನಂದನೆ
ಸಾಧು ಶ್ರೀನಾಥ್​
|

Updated on:Jun 20, 2023 | 6:15 PM

Share

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ (Hubballi-Dharwad Municipal Corporation) 22ನೇ ಅವಧಿಯ ನೂತನ ಮೇಯರ್ ಆಗಿ (Mayor) ಆಯ್ಕೆಯಾದ ಬಿಜೆಪಿಯ ವೀಣಾ ಭರದ್ವಾಡ ಅವರಿಗೆ ಕೇಂದ್ರ ಸಚಿವ ಪಲ್ಹಾದ್ ಜೋಶಿಯವರು ಶುಭ ಹಾರೈಸಿದರು. ಹು-ಧಾ ಮೇಯರ್ ಆಗಿ ಆಯ್ಕೆಗೊಂಡ ಬಳಿಕ ನೂತನ ಮೇಯರ್ ಹಾಗೂ ಉಪಮೇಯರ್​ಗೆ ಶುಭ ಹಾರೈಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು “ಅವಳಿ ನಗರದ ಜನತೆಗೆ ನಮ್ಮ ಆಡಳಿತದ ಮೇಲೆ ಅಪಾರ ವಿಶ್ವಾಸ ಹಾಗೂ ನಂಬಿಕೆ ಇದೆ. ಅವರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಬೇಕಿದೆ. ಸಾರ್ವಜನಿಕರ ನಿರೀಕ್ಷೆಗಳನ್ನು ಪೂರೈಸಲು ತಮ್ಮನ್ನು ತಾವು ಸಮರ್ಪಿಸಿಕೊಳ್ಳಲಿದ್ದೀರಿ ಎಂಬ ನಂಬಿಕೆ ಇದೆ. ಅತ್ಯಂತ ಯಶಸ್ವಿ ಅವಧಿ ನಿಮ್ಮದಾಗಿರಲಿ ಎಂದು ಪ್ರಲ್ಹಾದ ಜೋಶಿಯವರು (Pralhad Joshi) ಶುಭ ಹಾರೈಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಶುಭಾಶಯ ಸ್ವೀಕರಿಸಿ ಮಾಧ್ಯಮಗಳ ಜೊತೆ ಮಾತನಾಡಿದ ನೂತನ ಮೇಯರ್ ವೀಣಾ ಭರದ್ವಾಡ ಅವರು, “ಮೇಯರ್ ಆಗಿ ನನ್ನನ್ನು ಆಯ್ಕೆ ಮಾಡಿರುವುದು ತುಂಬಾ ಸಂತಸ ತಂದಿದೆ. ಅವಳಿ ನಗರದ ಜನತೆ ನಮ್ಮಿಂದ ಸಾಕಷ್ಟು ಉತ್ತಮ ಆಭಿವೃದ್ಧಿ ನಿರೀಕ್ಷೆ ಮಾಡಿದ್ದಾರೆ. ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಸಾಕಷ್ಟು ಸವಾಲುಗಳಿದ್ದು, ಪ್ರಮುಖವಾಗಿ ಅಭಿವೃದ್ದಿ ಕಾರ್ಯಗಳತ್ತ ಗಮನ ಹರಿಸುತ್ತೇನೆ. ಕುಂಠಿತಗೊಂಡ ಅಭಿವೃದ್ದಿ ಕಾರ್ಯಗಳು ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ್ಟು 82 ಸದಸ್ಯರ ಬಲ ಹೊಂದಿದೆ‌. ಅಧಿಕಾರ ಪಡೆದುಕೊಳ್ಳಲು 46 ಸಂಖ್ಯಾಬಲ ಬೇಕಿತ್ತು. ಬಿಜೆಪಿ ಕಾರ್ಪೊರೇಟರ್​ಗಳ ಸಂಖ್ಯೆ 39 ಇದ್ದು, ಕಾಂಗ್ರೆಸ್​​​​ 33, ಪಕ್ಷೇತರ 6, AIMIM 3, ಜೆಡಿಎಸ್ 1 ಸ್ಥಾನ ಹೊಂದಿದೆ. ಇನ್ನು 8 ಜನಪ್ರತಿನಿಧಿಗಳು, 4 ಶಾಸಕರು, 1 ಸಂಸದ, 3 ಎಂಎಲ್​ಸಿ ಪಾಲಿಕೆ ವ್ಯಾಪ್ತಿಯ ಜನಪ್ರತಿನಿಧಿಗಳು ಸೇರಿಸಿ ಒಟ್ಟು 90 ಮತಗಳಿದ್ದವು.

Also read: ಜನರಿಗೆ ಹೇಳಿದಂತೆ “ಗ್ಯಾರಂಟಿ” ಕೊಡಲಾಗದೆ ಕಾಂಗ್ರೆಸ್​ ನಾಯಕರಿಂದ ಕುಂಟು ನೆಪ : ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ

ಬಿಜೆಪಿ ಮೇಯರ್ ಅಭ್ಯರ್ಥಿ ಪರ 46 ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್​ನ ಸುವರ್ಣ ಅವರು 37 ಮತ ಪಡೆಯುವುರೊಂದಿಗೆ ಸೋಲು ಕಂಡರು. ಇದರೊಂದಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಪಾಲಾಗಿದೆ. ಸತೀಶ ಹಾನಗಲ್ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:56 pm, Tue, 20 June 23

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು