AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಸುದ್ದಿಯ ಸಿದ್ದರಾಮಯ್ಯನವರೇ, ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ ಕಿಡಿ

ಕುಮಾರಸ್ವಾಮಿ, ಸಾರಾ ಮಹೇಶ್ ಹೊಟ್ಟೆ ಕಿಚ್ಚಿನಿಂದ ಮಾತಾಡ್ತೀದಾರೆ ಎಂದ ಜೋಶಿ, ತಾವು ಮಾಡಲಾರದ್ದು ಬಿಜೆಪಿ‌ ಮಾಡಿದೆ ಎಂದು ಹೊಟ್ಟೆಕಿಚ್ಚಿನಿಂದ ಮಾತಾಡ್ತಿದಾರೆ ಎಂದು ಜೋಶಿ ವಾಗ್ದಾಳಿ ನಡೆಸಿದರು. ಇನ್ನು, ನಾನು ದೇವೇಗೌಡರ ಬಗ್ಗೆ ಮಾತನಾಡಲ್ಲ, ಅವರು ಹಿರಿಯರು- ಸಚಿವ ಪ್ರಹ್ಲಾದ್​ ಜೋಶಿ

ಸುಳ್ಳು ಸುದ್ದಿಯ ಸಿದ್ದರಾಮಯ್ಯನವರೇ, ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ ಕಿಡಿ
ಸುಳ್ಳು ಸುದ್ದಿಯ ಸಿದ್ದರಾಮಯ್ಯ ನವರೇ, ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ
TV9 Web
| Edited By: |

Updated on:Nov 12, 2022 | 3:03 PM

Share

ಹುಬ್ಬಳ್ಳಿ: ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿಡಿಕಾರಿದ್ದಾರೆ. ಟ್ವೀಟ್ (Twitter) ಮೂಲಕ ಸಿದ್ದು ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಿದ್ದರಾಮಯ್ಯನವರೇ (Siddaramaiah) ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ. ಕೆಂಪೇಗೌಡರನ್ನು ಆದರ್ಶವಾಗಿಟ್ಟುಕೊಂಡು ಅಭಿವೃದ್ಧಿಗಾಗಿ ಶ್ರಮ ಪಡಲಾಗಿದೆ. ನಾಡಿನ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಮೋದಿ ಶ್ರಮಿಸುತ್ತಿದ್ದಾರೆ. ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆ ಉದ್ಘಾಟಿಸಿದ್ದೇವೆ. ಮೋದಿಯವರ ಕೈಯಿಂದಲೇ ಯೋಜನೆಗಳನ್ನು ಉದ್ಘಾಟಿಸಿದ್ದೇವೆ. ಅಧಿಕಾರ ಕೈಯಲ್ಲಿಲ್ಲ ಎಂಬ ಹತಾಶೆಯಿಂದ, ಪ್ರಶ್ನಿಸುವ ಸಲುವಾಗಿಯೇ ರಾಜ್ಯದ ಜನತೆಗೆ ನೀವು ಸುಳ್ಳು ಸುದ್ದಿ ಹಬ್ಬಿಸಬೇಡಿ. ಯಾಕೆಂದರೆ ನೀವು ಕೂಡ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಎಂದು ಸುಳ್ಳು ಸುದ್ದಿಯ ಸಿದ್ದರಾಮಯ್ಯ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಜೋಶಿ ಟ್ವೀಟ್ ಸಾರಾಂಶ ಹೀಗಿದೆ:

ಸುಳ್ಳು ಸುದ್ದಿಯ ಸಿದ್ದರಾಮಯ್ಯ ನವರೇ, ಕೆಂಪೇಗೌಡರನ್ನು ಆದರ್ಶವಾಗಿಟ್ಟುಕೊಂಡು ನಾಡಿನ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀಯ ಕೈಯಿಂದಲೇ ಇಂದು ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಉದ್ಘಾಟನೆ ಮಾಡಿದ್ದೇವೆ. ಅಧಿಕಾರ ಕೈಯಲಿಲ್ಲ ಎಂಬ ಹತಾಶೆಯಿಂದ ಪ್ರಶ್ನಿಸುವ ಸಲುವಾಗಿ ರಾಜ್ಯದ ಜನತೆಗೆ ಸುಳ್ಳು ಸುದ್ದಿ ಮುಟ್ಟಿಸಬೇಡಿ ಯಾಕೆಂದರೆ ನೀವು ಕೂಡ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು.

ದೇವೇಗೌಡರು ಹಿರಿಯರು, ಅವರ ಬಗ್ಗೆ ಮಾತನಾಡಲ್ಲ:

ಇನ್ನು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರನ್ನು ಆಹ್ವಾನಿಸಿಲ್ಲ ಅನ್ನೋದು ಸರಿಯಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ. ಈ ವಿಚಾರವಾಗಿ ಸಿಎಂ ಬೊಮ್ಮಾಯಿ, ಸಚಿವರಾದ ಅಶೋಕ್, ಅಶ್ವತ್ಥ್ ನಾರಾಯಣ ಜತೆ ಮಾತನಾಡಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವೇಗೌಡರನ್ನು ಆಹ್ವಾನಿಸಿದ್ದೇನೆ ಎಂದು ಹೇಳಿದ್ದಾರೆ. ಆದ್ರೆ ಯಾಕೆ ಬಂದಿಲ್ಲ ಅನ್ನೋದನ್ನು ವಿಚಾರಿಸುವುದಾಗಿಯೂ ಹೇಳಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಕುಟುಂಬದವರು ಮುಖ್ಯಮಂತ್ರಿ ಮತ್ತು ಸಚಿವರಾಗಿದ್ದವರು. ಆದ್ರೆ ಅವರು ಯಾರೂ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡಲಿಲ್ಲ, ಹೆಸರೂ ಇಡಲಿಲ್ಲ. ಕುಮಾರಸ್ವಾಮಿ ಕುಟುಂಬಕ್ಕೆ ಕೆಂಪೇಗೌಡರ ನೆನಪು ಆಗ ಆಗಲಿಲ್ಲ. ಕುಮಾರಸ್ವಾಮಿ, ಸಾರಾ ಮಹೇಶ್ ಹೊಟ್ಟೆ ಕಿಚ್ಚಿನಿಂದ ಮಾತಾಡ್ತೀದಾರೆ ಎಂದ ಜೋಶಿ, ತಾವು ಮಾಡಲಾರದ್ದು ಬಿಜೆಪಿ‌ ಮಾಡಿದೆ ಎಂದು ಹೊಟ್ಟೆಕಿಚ್ಚಿನಿಂದ ಮಾತಾಡ್ತಿದಾರೆ ಎಂದು ಜೋಶಿ ವಾಗ್ದಾಳಿ ನಡೆಸಿದರು. ಇನ್ನು, ನಾನು ದೇವೇಗೌಡರ ಬಗ್ಗೆ ಮಾತನಾಡಲ್ಲ, ಅವರು ಹಿರಿಯರು ಎಂದು ಹುಬ್ಬಳ್ಳಿಯಲ್ಲಿ ಸಚಿವ ಪ್ರಹ್ಲಾದ್​ ಜೋಶಿ ಸೂಕ್ಷ್ಮವಾಗಿ ಹೇಳಿದರು.

Published On - 2:12 pm, Sat, 12 November 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು