AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ಗೆ ಬದ್ಧತೆ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸವಾಲ್

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಲ್ಲದೇ, ಶಿವಾಜಿ ಮಹಾರಾಜರ ಬಗ್ಗೆಯೂ ಜಾರಕಿಹೊಳಿ ಅವಮಾನಕರ ರೀತಿಯಲ್ಲಿ‌ ಹೇಳಿಕೆ ಕೊಟ್ಟಿದ್ದಾರೆ. ಶಿವಾಜಿಗೆ ಅವರ ಪುತ್ರ ಸಾಂಬಾಜಿ ವಿಷ ಹಾಕಿದ್ದರು ಎಂಬ ವಿಚಿತ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಇದನ್ನ ಒಪ್ಪಿಕೊಳ್ಳುತ್ತಾ? - ಪ್ರಲ್ಹಾದ್ ಜೋಶಿ ಪ್ರಶ್ನೆ

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ಗೆ ಬದ್ಧತೆ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸವಾಲ್
ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ಗೆ ಬದ್ಧತೆ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲಿ
TV9 Web
| Edited By: |

Updated on: Nov 12, 2022 | 5:05 PM

Share

ಹುಬ್ಬಳ್ಳಿ: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ (Congress)ಗೆ ನಿಜವಾದ ಬದ್ಧತೆ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸವಾಲ್ ಎಸೆದಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಗಳು ಬಂದಾಗ ಮಾತ್ರ ಕಾಂಗ್ರೆಸ್ ಪಕ್ಷ ಹಿಂದೂ ಧರ್ಮದ (Hindu) ಬಗ್ಗೆ ಮಾತಾಡುವ ಚಾಳಿ ಬಿಡಲಿ, ಕಾಂಗ್ರೆಸ್ ಪಕ್ಷಕ್ಕೆ ಹಿಂದೂಗಳ ಬಗ್ಗೆ ನಿಜವಾದ ಬದ್ಧತೆ ಇದ್ದರೆ ಸತೀಶ್ ಜಾರಕಿಹೊಳಿ (Satish Jarkiholi) ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಿ ಎಂದು ಪ್ರಲ್ಹಾದ್ ಜೋಶಿ (Union Minister Pralhad Joshi) ಆಗ್ರಹಿಸಿದರು.

ಸತೀಶ್ ಜಾರಕಿಹೊಳಿ ಮೇಲೆ ಕಾಂಗ್ರೆಸ್ ಪಾರ್ಟಿಗೆ ಕಂಟ್ರೋಲ್ ಇಲ್ಲವೇ..‌?

ಹಿಂದೂ ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದ ಸತೀಶ್ ಜಾರಕಿಹೊಳಿ, ಪಕ್ಷ ಹೇಳಿದ ಮೇಲೂ ಕ್ಷಮೆ ಕೋರಿಲ್ಲ. ನಾನು ಕ್ಷಮೆ ಕೋರುವುದಿಲ್ಲ, ಕೇವಲ ವಿಷಾದ ವ್ಯಕ್ತಪಡಿಸುತ್ತೇನೆ ಅಷ್ಟೇ ಅಂತ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನನ್ನ ಹೇಳಿಕೆಗೆ ನಾನು ಬದ್ಧ ಅಂತ ಸತೀಶ್ ಹೇಳಿಕೆ ಕೊಟ್ಟಿದ್ದಾರೆ. ಹಾಗಿದ್ದರೆ ಸತೀಶ್ ಜಾರಕಿಹೊಳಿ ಅವರ ಮೇಲೆ ಕಾಂಗ್ರೆಸ್ ಪಾರ್ಟಿಗೆ ಕಂಟ್ರೋಲ್ ಇಲ್ಲವೇ..‌? ಪಕ್ಷದ ಕಾರ್ಯಾಧ್ಯಕ್ಷರ ಮೇಲೆ ಪಕ್ಷಕ್ಕೆ ಕಂಟ್ರೋಲ್ ಇಲ್ಲ ಅಂದರೆ ಏನರ್ಥ..? ಎಂದು ಪ್ರಶ್ನಿಸಿದ್ದಾರೆ.

ಶಿವಾಜಿ ಮಹಾರಾಜರ ಬಗ್ಗೆಯೂ ಜಾರಕಿಹೊಳಿ ಅವಮಾನಕರ ಹೇಳಿಕೆ:

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಲ್ಲದೇ, ಶಿವಾಜಿ ಮಹಾರಾಜರ ಬಗ್ಗೆಯೂ ಜಾರಕಿಹೊಳಿ ಅವಮಾನಕರ ರೀತಿಯಲ್ಲಿ‌ ಹೇಳಿಕೆ ಕೊಟ್ಟಿದ್ದಾರೆ. ಶಿವಾಜಿ ಮಹಾರಾಜರಿಗೆ ಅವರ ಪುತ್ರ ಸಾಂಬಾಜಿ ಅವರು ವಿಷ ಹಾಕಿದ್ದರು ಎಂಬ ವಿಚಿತ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಇದನ್ನ ಒಪ್ಪಿಕೊಳ್ಳುತ್ತಾ..? ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. ಇಂತಹ ಹೇಳಿಕೆಗಳನ್ನ ಕಾಂಗ್ರೆಸ್ ಒಪ್ಪಿಕೊಳ್ಳುವುದಿಲ್ಲ ಎಂದಾದರೆ ಪಕ್ಷ ಹೇಳಿಕೆ ಕೊಟ್ಟವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದರು‌.

ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷ ಚುನಾವಣೆಗಳು ಬಂದಾಗ ಹಿಂದೂ ದೇವಸ್ಥಾನಗಳಿಗೆ ಭೇಟಿ ನೀಡಿ ನಾವು ಹಿಂದೂ ವಿರೋಧಿಗಳಲ್ಲ ಅಂತಾ ಹೇಳಿಕೊಳ್ತಾರೆ. ಆದ್ರೆ ಆ ಪಕ್ಷದ ನಾಯಕರು ಹಿಂದೂ ವಿರೋಧಿ ಚಟುವಟಿಕೆಗಳನ್ನ ನಡೆಸ್ತಾರೆ. ಹಿಂದೂ ವಿರೋಧಿ ಕೃತ್ಯಗಳಲ್ಲಿ ತೊಡಗಿದ ಆಮ್ ಆದ್ಮಿ ಪಕ್ಷದ ರಾಜೇಂದ್ರ ಗೌತಮ್ ಅವರನ್ನ ಗುಜರಾತ್ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರನ್ನಾಗಿ ಮಾಡಿದೆ. ಎರಡು ಪಕ್ಷಗಳ ನಿಜ ಬಣ್ಣ ಬಯಲಾಗ್ತಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು