AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಗೊತ್ತಾಗಿದೆ; ಪ್ರಲ್ಹಾದ್ ಜೋಶಿ ಲೇವಡಿ

ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂಬುದು ಕಾಂಗ್ರೆಸ್ ನಾಯಕರಿಗೆ ಈಗ ಅರಿವಿಗೆ ಬಂದಿದೆ. ರಸ್ತೆಗೆ ಮಣ್ಣು ಹಾಕಲಾಗುವುದಿಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಿಂತ ನಿದರ್ಶನ ಬೇಕೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದ್ದಾರೆ.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಗೊತ್ತಾಗಿದೆ; ಪ್ರಲ್ಹಾದ್ ಜೋಶಿ ಲೇವಡಿ
ಪ್ರಲ್ಹಾದ್ ಜೋಶಿ
ಸುಷ್ಮಾ ಚಕ್ರೆ
|

Updated on: Oct 31, 2024 | 9:22 PM

Share

ಹುಬ್ಬಳ್ಳಿ: ಗ್ಯಾರಂಟಿಗಳಿಂದ ಕರ್ನಾಟಕ ರಾಜ್ಯ ದಿವಾಳಿಯಾಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಅರಿವಿಗೆ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದ್ದಾರೆ. ಶಕ್ತಿ ಯೋಜನೆ ನಿಲ್ಲಿಸುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾಯಿತು. ಈಗ ಖುದ್ದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ ರಾಜ್ಯ ದಿವಾಳಿ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ಅಂತೂ ಕಾಂಗ್ರೆಸ್ ನಾಯಕರಿಗೆ ತಡವಾಗಿ ಆದರೂ ಜ್ಞಾನೋದಯ ಆಗುತ್ತಿದೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

“ರಾಜ್ಯದ ಬಜೆಟ್ ಗಾತ್ರ ನೋಡಿಕೊಂಡು ಗ್ಯಾರಂಟಿ ಘೋಷಿಸಬೇಕು. ಒಂದೇ ಆದರೂ ಅರ್ಥ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು. ಐದಾರು ಯೋಜನೆ ಘೋಷಿಸಿದರೆ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕದಂತಹ ಸ್ಥಿತಿಯಾಗುತ್ತದೆ” ಎಂದು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ಹಾಳಾಗಿದೆ ಎನ್ನುವುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೇ? ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆ ಶಿವಕುಮಾರ್​ ಸುಳಿವು

ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕಲು ಆಗುವುದಿಲ್ಲ ಎಂಬ ಖರ್ಗೆ ಅವರ ಮಾತು ಗ್ಯಾರಂಟಿಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿವೆ ಎಂಬುದನ್ನು ಸಾರಿ ಹೇಳುವಂತಿದೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ.

ಚುನಾವಣೆ ಎದುರಿಸುವ ಆವೇಶದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರಿಗೆ ಸಾಕಾಗಿ ಹೋಗಿದೆ ಎಂದಿದ್ದಾರೆ ಜೋಶಿ.

ಗ್ಯಾರಂಟಿಗಳಿಂದ ಕರ್ನಾಟಕದ ಸ್ಥಿತಿ ಗತಿ ಬಗ್ಗೆ ಅರಿತ ಕಾಂಗ್ರೆಸ್ ಪಕ್ಷ ಬೇರೆ ರಾಜ್ಯ ಚುನಾವಣೆಗಳಲ್ಲಿ ಕರ್ನಾಟಕವನ್ನು ಮಾದರಿಯಾಗಿ ಅನುಸರಿಸಲು ಹಿಂಜರಿಯುತ್ತಿದೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!