AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಗೊತ್ತಾಗಿದೆ; ಪ್ರಲ್ಹಾದ್ ಜೋಶಿ ಲೇವಡಿ

ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂಬುದು ಕಾಂಗ್ರೆಸ್ ನಾಯಕರಿಗೆ ಈಗ ಅರಿವಿಗೆ ಬಂದಿದೆ. ರಸ್ತೆಗೆ ಮಣ್ಣು ಹಾಕಲಾಗುವುದಿಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಿಂತ ನಿದರ್ಶನ ಬೇಕೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದ್ದಾರೆ.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಗೊತ್ತಾಗಿದೆ; ಪ್ರಲ್ಹಾದ್ ಜೋಶಿ ಲೇವಡಿ
ಪ್ರಲ್ಹಾದ್ ಜೋಶಿ
ಸುಷ್ಮಾ ಚಕ್ರೆ
|

Updated on: Oct 31, 2024 | 9:22 PM

Share

ಹುಬ್ಬಳ್ಳಿ: ಗ್ಯಾರಂಟಿಗಳಿಂದ ಕರ್ನಾಟಕ ರಾಜ್ಯ ದಿವಾಳಿಯಾಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಅರಿವಿಗೆ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದ್ದಾರೆ. ಶಕ್ತಿ ಯೋಜನೆ ನಿಲ್ಲಿಸುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾಯಿತು. ಈಗ ಖುದ್ದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ ರಾಜ್ಯ ದಿವಾಳಿ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ಅಂತೂ ಕಾಂಗ್ರೆಸ್ ನಾಯಕರಿಗೆ ತಡವಾಗಿ ಆದರೂ ಜ್ಞಾನೋದಯ ಆಗುತ್ತಿದೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

“ರಾಜ್ಯದ ಬಜೆಟ್ ಗಾತ್ರ ನೋಡಿಕೊಂಡು ಗ್ಯಾರಂಟಿ ಘೋಷಿಸಬೇಕು. ಒಂದೇ ಆದರೂ ಅರ್ಥ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು. ಐದಾರು ಯೋಜನೆ ಘೋಷಿಸಿದರೆ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕದಂತಹ ಸ್ಥಿತಿಯಾಗುತ್ತದೆ” ಎಂದು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ಹಾಳಾಗಿದೆ ಎನ್ನುವುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೇ? ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆ ಶಿವಕುಮಾರ್​ ಸುಳಿವು

ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕಲು ಆಗುವುದಿಲ್ಲ ಎಂಬ ಖರ್ಗೆ ಅವರ ಮಾತು ಗ್ಯಾರಂಟಿಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿವೆ ಎಂಬುದನ್ನು ಸಾರಿ ಹೇಳುವಂತಿದೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ.

ಚುನಾವಣೆ ಎದುರಿಸುವ ಆವೇಶದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರಿಗೆ ಸಾಕಾಗಿ ಹೋಗಿದೆ ಎಂದಿದ್ದಾರೆ ಜೋಶಿ.

ಗ್ಯಾರಂಟಿಗಳಿಂದ ಕರ್ನಾಟಕದ ಸ್ಥಿತಿ ಗತಿ ಬಗ್ಗೆ ಅರಿತ ಕಾಂಗ್ರೆಸ್ ಪಕ್ಷ ಬೇರೆ ರಾಜ್ಯ ಚುನಾವಣೆಗಳಲ್ಲಿ ಕರ್ನಾಟಕವನ್ನು ಮಾದರಿಯಾಗಿ ಅನುಸರಿಸಲು ಹಿಂಜರಿಯುತ್ತಿದೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ