ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಯೋತ್ಪಾದಕ: ಸಿದ್ದರಾಮಯ್ಯ

2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣವನ್ನು ವಾಪಸ್​​ ಪಡೆದಿದ್ದಕ್ಕೆ ರಾಜ್ಯ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ರವಿವಾರ ಹುಬ್ಬಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದ ವೇಳೆ ಬಿಜೆಪಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಭಯೋತ್ಪಾದಕ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಯೋತ್ಪಾದಕ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
| Updated By: ವಿವೇಕ ಬಿರಾದಾರ

Updated on:Oct 13, 2024 | 2:50 PM

ಹುಬ್ಬಳ್ಳಿ, ಅಕ್ಟೋಬರ್​ 13: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಭಯೋತ್ಪಾದಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಸಚಿವ ಸಂಪುಟ ನಿರ್ಧಾರದಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಸಂಪುಟದ ನಿರ್ಧಾರ ನ್ಯಾಯಾಲದ ಮುಂದೆ ಹೋಗಬೇಕು. ನ್ಯಾಯಲಯ ಒಪ್ಪಿದರೆ ಮಾತ್ರ ಪ್ರಕರಣ ಹಿಂಪಡೆಯಲು ಆಗುತ್ತೆ ಎಂದು ತಿಳಿಸಿದರು.

ಬಿಜೆಪಿಯವರು ಸುಖಾ ಸುಮ್ಮನೆ ಪ್ರತಿಭಟನೆ ಮಾಡುತ್ತಾರೆ. ಸುಳ್ಳು ಕೇಸ್​ ಇದ್ದರೆ, ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದರೆ, ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ವಾಪಸ್ ತೆಗೆದುಕೊಳ್ಳಲು ಅವಕಾಶವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಭಯೋತ್ಪಾದಕ: ಟೆಂಗಿನಕಾಯಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಯೋತ್ಪಾದಕರು. ಪ್ರಹ್ಲಾದ್ ಜೋಶಿ ಅವರು ಭಯೋತ್ಪಾದಕರಲ್ಲ, ದೇಶ ಭಕ್ತರು ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ಕೇಸ್ ಹಿಂಪಡೆದಿದ್ದೀರಿ. ಸಿದ್ದರಾಮಯ್ಯನವರೇ ಭಯೋತ್ಪಾದಕರು. ಟಿಪ್ಪು ಜಯಂತಿ ಮಾಡಿದ ಕೀರ್ತಿ ನಿಮಗೆ ಸಲ್ಲುತ್ತದೆ. ರಾಜ್ಯದಲ್ಲಿ ನೀವು ಅರಾಜಕತೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದೀರಿ. ಸಿದ್ದರಾಮಯ್ಯ ಪೊಲೀಸರ ನೈತಿಕತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾದರೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಜೆಪಿ ಉಗ್ರಗಾಮಿಗಳ ಪಕ್ಷ ಎಂದ ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು ಕೊಟ್ಟ ಜೋಶಿ

ಮುಖ್ಯಮಂತ್ರಿಗಳು ನಮ್ಮ ಮನವಿ ತಗೆದುಕೊಂಡಿಲ್ಲ. ಇದು ದುರ್ದೈವದ ಸಂಗತಿ. ಪೊಲೀಸರನ್ನು ಬಳಸಿ‌ ನಮ್ಮನ್ನು ಅರೆಸ್ಟ್ ಮಾಡಿಸಿದರು. ನಾವ ಪೊಲೀಸರ ಪರವಾಗಿ ಹೋರಾಟ ಮಾಡುತ್ತಿದ್ವಿ. ಕಪ್ಪು ಬಾವುಟ‌ ಪ್ರದರ್ಶನ ಮಾಡಿದ ಇಬ್ಬರನ್ನು ವಶಕ್ಕೆ ತಗೆದುಕೊಂಡಿದ್ದಾರೆ. ನಮ್ಮ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದಾರೆ. ಸರ್ಕಾರದಲ್ಲಿ ಏನು ನಡೆಯುತ್ತಿದೆ. ನಮ್ಮ ಹೋರಾಟ ನಿರಂತರ ಎಂದರು.

ಬಿಜೆಪಿ ಭಯೋತ್ಪಾದಕರ ಪಕ್ಷ ಎಂದಿದ್ದ ಖರ್ಗೆ

ಕಳೆದ ಕೆಲ ದಿನಗಳ ಹಿಂದೆ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಉತ್ತರಿಸಿ, ಬಿಜೆಪಿ ಭಯೋತ್ಪಾದಕರ ಪಕ್ಷ ಎಂದು ಹೇಳಿದ್ದರು. ಬಿಜೆಪಿ ಪ್ರಗತಿಪರ ಚಿಂತಕರನ್ನು ನಗರ ನಕ್ಸಲರು ಎಂದು ಕರೆದು ಅವಮಾನಿಸುವ ಅಭ್ಯಾಸ ಮಾಡಿಕೊಂಡಿದೆ ಎಂದು ಆರೋಪಿಸಿದ್ದರು.

Published On - 2:29 pm, Sun, 13 October 24

ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ