AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ.ಟಿ ರವಿ ಬಂಧನ ಪ್ರಕರಣದಲ್ಲಿ ಪೊಲೀಸರ ವರ್ತನೆ ಖಂಡಿಸಿ ಕಾನೂನು ಹೋರಾಟ; ಪ್ರಲ್ಹಾದ್ ಜೋಶಿ

ಬಿಜೆಪಿ ಎಂಎಲ್​​ಸಿ ಸಿ.ಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕರು ಈ ಬಗ್ಗೆ ದೂರು ನೀಡಿದ್ದಾರೆ. ಆದರೆ, ಇದುವರೆಗೂ ಪ್ರಕರಣ ದಾಖಲಿಸಿಕೊಂಡಿಲ್ಲ. ಹರಿಜನರು ಅಂತಾ ಛಲವಾದಿ ಬಳಿ ಕಮಿಷನರ್ ಮಾತಾಡಿಸಿಲ್ವಾ? ಛಲವಾದಿ ನಾರಾಯಣಸ್ವಾಮಿ ಪರಿಷತ್ ವಿಪಕ್ಷ ನಾಯಕರು‌ ಹರಿಜನರು ಎಂದು ಕಮಿಷನರ್​​​ ಮಾತಾಡಿಸಿಲ್ವಾ? ಇದನ್ನು ನಾವು ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಪ್ರಲ್ಹಾದ್ ಜೋಶಿ ಟೀಕೆ ಮಾಡಿದ್ದಾರೆ.

ಸಿ.ಟಿ ರವಿ ಬಂಧನ ಪ್ರಕರಣದಲ್ಲಿ ಪೊಲೀಸರ ವರ್ತನೆ ಖಂಡಿಸಿ ಕಾನೂನು ಹೋರಾಟ; ಪ್ರಲ್ಹಾದ್ ಜೋಶಿ
Pralhad Joshi
ಶಿವಕುಮಾರ್ ಪತ್ತಾರ್
| Edited By: |

Updated on: Dec 22, 2024 | 2:09 PM

Share

ಹುಬ್ಬಳ್ಳಿ: ಬಿಜೆಪಿ ಎಂಎಲ್​​ಸಿ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪೊಲೀಸ್​​​ ಅಧಿಕಾರಿಗಳ ವರ್ತನೆಯನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ನಾವು ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರ ಒಂದೇ ಇರುವುದಿಲ್ಲ, ಬದಲಾಗುತ್ತಿರುತ್ತದೆ ಎಂಬುದು ನೆನಪಿರಲಿ. ಹೀಗಾಗಿ, ಬೆಳಗಾವಿ ಪೊಲೀಸ್ ಕಮಿಷನರ್​​​​ ಎಚ್ಚರಿಕೆಯಿಂದ ಇರಬೇಕು ಎಂದು ಟೀಕಿಸಿದ್ದಾರೆ.

ಖಾನಾಪುರ, ಕಬ್ಬಿನ ಗದ್ದೆ ಕಡೆ ಕರೆದುಕೊಂಡು ಹೋಗುತ್ತೀರಿ. ಬೆಳಗಾವಿ ಪೊಲೀಸ್ ಕಮಿಷನರ್​ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಸುವರ್ಣಸೌಧಕ್ಕೆ ನುಗ್ಗಿದವರ ಬಂಧನ ಆಗಿಲ್ಲ. ಬೆಳಗಾವಿ ಪೊಲೀಸ್ ಕಮಿಷನರ್​ಗೆ ಕಾನೂನಿನ ಪಾಠ ಆಗಬೇಕು. ಸುವರ್ಣಸೌಧದಲ್ಲಿ ನಡೆದ ಘಟನೆ ಬಗ್ಗೆ ತರಾತುರಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ. ದೂರು ಕೊಟ್ಟವರು ಆಪ್ತ ಸಹಾಯಕ, ಅವರು ಒಳಗಡೆ ಇದ್ದರಾ? ಬೆಳಗಾವಿ ಪೊಲೀಸ್​ ಕಮಿಷನರ್​ಗೆ ಸಾಮಾನ್ಯ ಜ್ಞಾನ ಇರಬೇಕು. ಬೆಳಗಾವಿ ಕಮಿಷನರ್​​ ಐಪಿಎಸ್​ ಆಗಲು ಅಸಮರ್ಥರು​​​​ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರವಿ ಅಶ್ಲೀಲ ಪದಬಳಕೆ ಮಾಡಿಲ್ಲ ಅಂದಿರುವ ಕಾರಣ ಪ್ರಕರಣ ಇಲ್ಲಿಗೆ ನಿಲ್ಲಿಸುವುದು ಉತ್ತಮ: ಸತೀಶ್ ಜಾರಕಿಹೊಳಿ

ಅಂಬೇಡ್ಕರ್ ಅವರಿಗೆ ಸತತ ಅವಮಾನ ಮಾಡಿದ್ದಾರೆ ಎಂಬ ಕಾರಣಕ್ಕೆ ಗಲಾಟೆ ಮಾಡಿ ಸಿ.ಟಿ ರವಿ, ಬಿಜೆಪಿಯನ್ನು ಹತ್ತಿಕ್ಕೋ ಪ್ರಯತ್ನ ಮಾಡುತ್ತಿದ್ದಾರೆ. ಕಾನೂನು ಹೋರಾಟ ಮಾಡುತ್ತೇವೆ. ಅಧಿಕಾರಿಗಳ ವರ್ತನೆಯನ್ನು ನಾವು ಖಂಡಿಸುತ್ತೇವೆ. ವಿರೋಧ ಪಕ್ಷದ ನಾಯಕರು ಕೂಡ ದೂರು ಕೊಟ್ಟರು. ಅದು ಇದುವರೆಗೂ ದೂರು ದಾಖಲಾಗಿಲ್ಲ. ಛಲವಾದಿ ನಾರಾಯಣ ಸ್ವಾಮಿ ಹರಿಜನರು ಎಂದು ಕಮೀಷನರ್ ಮಾತನಾಡಿಸಲಿಲ್ಲವೇ? ಅದೊಂದು ಸಾಂವಿಧಾನಿಕ ಹುದ್ದೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರು‌ ಹರಿಜನರು ಎಂದು ಅವರನ್ನು ಮಾತಾಡಿಸಿಲ್ವ ಎಂದು ಪ್ರಲ್ಹಾದ್ ಜೋಶಿ ಗರಂ ಆಗಿದ್ದಾರೆ.

ಇದನ್ನೂ ಓದಿ: ಆ ರಾತ್ರಿ ಕಾಂತಾರದ ದೈವದ ರೀತಿ ವರ್ತಿಸಿದ್ದರಿಂದ ಪೊಲೀಸರಿಂದ ಬಚಾವ್​ ಆದೆ: ಸಿಟಿ ರವಿ ಸ್ಫೋಟಕ ಹೇಳಿಕೆ

ಅಂಬೇಡ್ಕರ್ ಅವರನ್ನು ಸೋಲಿಸಿದಾಗ ನಿಮಗೆ ಯಾವ ನಾಯಿ ಕಡಿದಿತ್ತು? ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರಲ್ಹಾದ್ ಜೋಶಿ ಕೋಪಗೊಂಡಿದ್ದಾರೆ. ಅಮಿತ್ ಶಾ ವಿಚಾರವಾಗಿ ಬಾಯಿಗೆ ಬಂದಂತೆ ಮಾತಾಡ್ತಾರೆ. ನಿಮ್ಮ ನಾಯಕರಿಗೆ ಯಾವ ನಾಯಿ ಕಡದಿತ್ತು? ಸಿ.ಟಿ ರವಿ ಪ್ರಕರಣ ಗೃಹ ಸಚಿವರ ಗಮನಕ್ಕೆ ಬಂದಿಲ್ಲ ಅನ್ನೋದಾದರೆ ಅವರು ಆ ಹುದ್ದೆಯಲ್ಲಿ ಇರಬೇಕೋ ಬೇಡವೋ ಅನ್ನೋದನ್ನು ಅವರು ವಿಚಾರ ಮಾಡಬೇಕು. ಏನೇ ಆದರೂ ಗೃಹ ಸಚಿವರ ಗಮನಕ್ಕೆ ಬರುತ್ತದೆ. ಗೊತ್ತಿಲ್ಲ ಅಂದರೆ ಏನು ಅರ್ಥ, ಪರಮೇಶ್ವರ್ ಒಬ್ಬ ಜಂಟಲ್​ಮ್ಯಾನ್. ಅವರು ವಿಚಾರ ಮಾಡಬೇಕು. ಅವರು ಸಿ.ಟಿ ರವಿ ವಿಚಾರದಲ್ಲಿ ಅತ್ಯಂತ ಭಯಂಕರ ದ್ವೇಷ ಸಾಧಿಸಿದ್ದಾರೆ. ಅದಕ್ಕೆ ಬೆಳಗಾವಿ ಪೊಲೀಸರು ಸಾಥ್ ಕೊಟ್ಟಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ