AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಲಿಕ್ಕೆ ಬಾರದವನಿಗೆ ನೆಲ ಡೊಂಕು ಅನ್ನುವ ಸ್ಥಿತಿ ರಾಜ್ಯ ಸರ್ಕಾರದ್ದು: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವ್ಯಂಗ್ಯ

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ರಾಜ್ಯಕ್ಕೆ ಅನುದಾನ ನೀಡವಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಆರ್ಥಿಕ ನಿರ್ವಹಣೆ ಮಾಡಲಾಗುತ್ತಿಲ್ಲ. ಘೋಷಣೆ ಮಾಡಿದ ಗ್ಯಾರಂಟಿಗಳು ಅರ್ಧಂಬರ್ಧ ಜಾರಿಯಾಗಿವೆ ಎಂದು ಕಿಡಿಕಾರಿದ್ದಾರೆ. ಅನುದಾನ ಹೆಚ್ಚಳ ಆಗಿರುವುದಕ್ಕೆ ಸಿದ್ದರಾಮಯ್ಯ ಧರಣಿ ಮಾಡುತ್ತಿದ್ದಾರೆ ಎಂದಿದ್ದಾರೆ.

ಕುಣಿಲಿಕ್ಕೆ ಬಾರದವನಿಗೆ ನೆಲ ಡೊಂಕು ಅನ್ನುವ ಸ್ಥಿತಿ ರಾಜ್ಯ ಸರ್ಕಾರದ್ದು: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವ್ಯಂಗ್ಯ
ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ
ಶಿವಕುಮಾರ್ ಪತ್ತಾರ್
| Edited By: |

Updated on: Feb 03, 2024 | 3:44 PM

Share

ಹುಬ್ಬಳ್ಳಿ, ಫೆಬ್ರುವರಿ 3: ಕುಣಿಲಿಕ್ಕೆ ಬಾರದವನಿಗೆ ನೆಲ ಡೊಂಕು ಅನ್ನುವ ಸ್ಥಿತಿ ರಾಜ್ಯ ಸರ್ಕಾರದ್ದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಅನುದಾನ ನೀಡವಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿಲ್ಲ. ಯುಪಿಎ ಸರ್ಕಾರ ಇದ್ದಾಗ ಕೇವಲ 81 ಸಾವಿರ ಕೋಟಿ ರೂ. ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ 2.60 ಲಕ್ಷ ಕೋಟಿ ರೂ. ಅನುದಾನ ಕೊಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆರ್ಥಿಕ ನಿರ್ವಹಣೆ ಮಾಡಲಾಗುತ್ತಿಲ್ಲ. ಘೋಷಣೆ ಮಾಡಿದ ಗ್ಯಾರಂಟಿಗಳು ಅರ್ಧಂಬರ್ಧ ಜಾರಿಯಾಗಿವೆ ಎಂದು ಕಿಡಿಕಾರಿದ್ದಾರೆ.

ಅನುದಾನ ಹೆಚ್ಚಳವಾಗಿರುವುದಕ್ಕೆ ಸಿದ್ದರಾಮಯ್ಯ ಧರಣಿ ಮಾಡುತ್ತಿದ್ದಾರೆ

ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಅಂತ ಕಾಂಗ್ರೆಸ್ ಶಾಸಕರು ಆರೋಪ ಮಾಡಿದ್ದಾರೆ. ಕಾಂಗ್ರೆಸ್​ನವರು ದೆಹಲಿಯಲ್ಲಿ ಯಾವ ಕಾರಣಕ್ಕೆ ಧರಣಿ ಮಾಡುತ್ತಿದ್ದಾರೆ? 2004 – 2014 ರವರಗೆ 10 ವರ್ಷದಲ್ಲಿ ನೀಡಿದ ಅನುದಾನ 60 ಸಾವಿರ ಕೋಟಿ ರೂ. ಕಳೆದ 10 ವರ್ಷದಲ್ಲಿ ಪ್ರಧಾನಿ ಮೋದಿ ನೀಡಿದ ಅನುದಾನ 2.36 ಲಕ್ಷ ಕೋಟಿ ರೂ. ಅನುದಾನ ಹಂಚಿಕೆಯಲ್ಲಿ ಪ್ರತಿಶತ 243 ಹೆಚ್ಚಾಗಿದೆ. ಅನುದಾನ ಹೆಚ್ಚಳ ಆಗಿರುವುದಕ್ಕೆ ಸಿದ್ದರಾಮಯ್ಯ ಧರಣಿ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ; ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದ ಪ್ರಹ್ಲಾದ್ ಜೋಶಿ

ನಿಮಗೆ ಸರಿಯಾಗಿ ಸರ್ಕಾರ ನಡೆಸಲಾಗುತ್ತಿಲ್ಲ. ನಿಮ್ಮ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ನೀವು ಭ್ರಷ್ಟಾಚಾರ ಮಾಡಿ ಹತ್ತು ಹಲವು ಹಗರಣ ಮಾಡಿದ್ದೀರಿ. ಯಾವುದೇ ರೀತಿಯ ಆರ್ಥಿಕ ಶಿಸ್ತನ್ನು ಪಾಲನೆ ಮಾಡಿದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದೀರಿ. ಅವರಲ್ಲಿರುವ ಒಳಜಗಳ ಡೈವರ್ಟ್ ಮಾಡಲು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ.

ಐದು ವರ್ಷದಲ್ಲಿ 62 ಸಾವಿರ ಕೋಟಿ ರೂ. ಅನ್ಯಾಯ ಆಗಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್​ ದಾಖಲೆ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಅದೇನು ದಾಖಲೆ ಇದೆಯೊ ಡಿಕೆ ಶಿವಕುಮಾರ್​ ತೋರಿಸಲಿ. ಆ ದಾಖಲೆಯಲ್ಲಿ ಏನಿದೆ ಅಂತ ಅವರಿಗೂ ಅರ್ಥ ಆಗಿಲ್ಲ, ಬೇರೆಯವರಿಗೂ ಅರ್ಥವಾಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಅಡ್ವಾಣಿಗೆ ಕೊಟ್ಟಿದ್ದಕ್ಕೆ ತಕರಾರಿಲ್ಲ; ನಮ್ಮ ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ಕೊಡಿ – ಡಿಕೆ ಶಿವಕುಮಾರ್ ಆಗ್ರಹ

ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸದಿದ್ದರೆ ಗ್ಯಾರಂಟಿ ವಾಪಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಮೊದಲು ಅವರು ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೆ ತರಲಿ. ನಂತರ ಅದನ್ನು ವಾಪಸ್ ಪಡೆಯುವ ವಿಚಾರ ಮಾಡಲಿ ಎಂದು ಕಿಡಿಕಾರಿದ್ದಾರೆ.

ಅಡ್ವಾಣಿ ಅವರಿಗೆ ಭಾರತ ರತ್ನ‌ ಸಿಕ್ಕಿದ್ದು ಖುಷಿ ವಿಚಾರ

ಎಲ್​​ಕೆ ಅಡ್ವಾಣಿ ಅವರಿಗೆ ಭಾರತ ರತ್ನ‌ ಸಿಕ್ಕಿದ್ದು ಖುಷಿ ವಿಚಾರ. ಅವರು ಅತ್ಯಂತ ಶುದ್ಧ ರಾಜಕಾರಣ ಮಾಡಿದ್ದಾರೆ. ಅಡ್ವಾಣಿ ನಮಗೆಲ್ಲ ಆದರ್ಶ. ದೇಶವನ್ನು ಅವರಷ್ಟು ಸುತ್ತಿದವರು ಯಾರೂ ಇಲ್ಲ. ರಾಮಮಂದಿರ ನಿರ್ಮಾಣಕ್ಕೆ ಅವರದ್ದು ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!