AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನಮ್ಮ ಮೈದಾನ ಪಾಲಿಕೆಯ ಆಸ್ತಿಯೇ ಹೊರತು ಯಾವುದೇ ಸಂಘಟನೆಯ ಆಸ್ತಿಯಲ್ಲ: ಗಣೇಶ ಪ್ರತಿಷ್ಠಾಪನೆ ಬಳಿಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ

ಗಣೇಶ ಪ್ರತಿಷ್ಠಾಪನೆ ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಚೆನ್ನಮ್ಮ ಮೈದಾನ ಪಾಲಿಕೆಯ ಆಸ್ತಿಯೇ ಹೊರತು ಯಾವುದೇ ಸಂಘಟನೆಯ ಅಥವಾ ಯಾವುದೇ ಧರ್ಮದ ಆಸ್ತಿಯಲ್ಲ ಎಂದರು

ಚೆನ್ನಮ್ಮ ಮೈದಾನ ಪಾಲಿಕೆಯ ಆಸ್ತಿಯೇ ಹೊರತು ಯಾವುದೇ ಸಂಘಟನೆಯ ಆಸ್ತಿಯಲ್ಲ: ಗಣೇಶ ಪ್ರತಿಷ್ಠಾಪನೆ ಬಳಿಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ
ಸಚಿವ ಪ್ರಲ್ಹಾದ ಜೋಶಿ
Follow us
TV9 Web
| Updated By: ಆಯೇಷಾ ಬಾನು

Updated on: Aug 31, 2022 | 8:18 AM

ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ(Hubli Idgah Maidan) ಮಾಡಲು ನಿನ್ನೆ ಮಂಗಳವಾರ ತಡರಾತ್ರಿ ಹೈಕೋರ್ಟ್ ಸಮ್ಮತಿ ನೀಡಿದ್ದು, ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(Pralhad Joshi) ಹೇಳಿದ್ದಾರೆ.

ಹು-ಧಾ ಮಹಾನಗರ ಪಾಲಿಕೆಯ ವತಿಯಿಂದ ರಚನೆಯಾದ ಸಮಿತಿಯ ನಿರ್ಣಯದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ ವಕೀಲರಿಗೂ ಅವರು ಧನ್ಯವಾದ ಸಲ್ಲಿಸಿದರು‌. ಅದೇ ರೀತಿ ಮಹಾನಗರ ಪಾಲಿಕೆಯ ನಿರ್ದೇಶನದಂತೆ ಸರಕಾರದ ನಿಯಮಾವಳಿಯಂತೆ ಶಾಂತಿಯಿಂದ ಸೌಹಾರ್ದಯುತವಾಗಿ ಜನರು ವರ್ತಿಸಬೇಕೆಂದು ವಿನಂತಿ ಮಾಡಿದರು.

ನಂತರ ಗಣೇಶ ಪ್ರತಿಷ್ಠಾಪನೆ ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಚೆನ್ನಮ್ಮ ಮೈದಾನ ಪಾಲಿಕೆಯ ಆಸ್ತಿಯೇ ಹೊರತು ಯಾವುದೇ ಸಂಘಟನೆಯ ಅಥವಾ ಯಾವುದೇ ಧರ್ಮದ ಆಸ್ತಿಯಲ್ಲ ಎಂದರು. ವಿಘ್ನ ವಿನಾಶಕ ಗಣಪತಿಯು ಎಲ್ಲರಿಗೂ ಒಳಿತನ್ನುಂಟು ಮಾಡಲಿ ಎಂದು ಪ್ರಾರ್ಥಿಸಿ ಎಲ್ಲರಿಗೂ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು‌.

ತೀರ್ಪು ಹೊರಬೀಳುತ್ತಿದ್ದಂತೆ ಜೋಶಿ ‘ಖುಷಿ’, ನಿವಾಸದಲ್ಲಿ ಸಭೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್​ ಅಸ್ತು ಎಂದ ಹಿನ್ನೆಲೆ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ರಾತ್ರೋರಾತ್ರಿ ಸಭೆ ನಡೆಸಲಾಗಿದ್ದು, ಗಣೇಶೋತ್ಸವದ ಚಟುವಟಿಕೆ ಗರಿಗೆದರಿದೆ. ಮೇಯರ್ ಈರೇಶ ಅಂಚಟಗೇರಿ ಬಿಜೆಪಿ ಕಾಪೋರೇಟರ್​ಗಳ ಜೊತೆ ಕೇಂದ್ರ ಸಚಿವರು ಸಭೆ ನಡೆಸಿದರು. ಈ ಸಭೆಯಲ್ಲಿ ಪಕ್ಷದ ಮುಖಂಡರು ಕೂಡ ಭಾಗಿಯಾಗಿದ್ದರು.

ಅನಗತ್ಯ ವಿವಾದಕ್ಕೆ ಯತ್ನ

ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ಪ್ರಹ್ಲಾದ್ ಜೋಶಿ, ವರ್ಷಕ್ಕೆ ಕೇವಲ 2 ಬಾರಿ ನಮಾಜ್​ ಮಾಡಲು ಸುಪ್ರೀಂಕೋರ್ಟ್ ಅನುಮತಿ ನೀಡಿತ್ತು. ಹುಬ್ಬಳ್ಳಿಯ ಈದ್ಗಾ ಮೈದಾನ ಒಂದು ಸಾರ್ವಜನಿಕ ಸ್ವತ್ತು ಆಗಿದೆ. ಆದರೆ ಅನಗತ್ಯವಾಗಿ ವಿವಾದ ಮಾಡಲು ಪ್ರಯತ್ನ ಮಾಡಿದ್ದರು ಎಂದರು. ಅಲ್ಲದೆ ಮೈದಾನದಲ್ಲಿ ನಮಾಜ್ ಮಾಡಲು ಯಾರೂ ವಿರೋಧ ಮಾಡಿಲ್ಲ. ಹೀಗಾಗಿ ಮೂರು ದಿನಗಳ ಗಣೇಶೋತ್ಸವದ ಸಂದರ್ಭದಲ್ಲಿ ಯಾರು ಕೂಡ ವಿರೋಧ ಮಾಡಬಾರದು ಎಂದರು.

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!