AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ವಿವಿ ಸಿಂಡಿಕೇಟ್ ಸದಸ್ಯರ ಕಿಡಿ; ಮಾನಹಾನಿ ಪ್ರಕರಣ ದಾಖಲಿಸುವ ಎಚ್ಚರಿಕೆ

ವಿವಿಯಲ್ಲಿ 6 ಸಿಂಡಿಕೇಟ್ ಸದಸ್ಯರು ಆರ್​ಎಸ್​ಎಸ್​ ಹಿನ್ನೆಲೆಯವರು. ಸಿಂಡಿಕೇಟ್ ಸದಸ್ಯರು ಹಣ ಪಡೆದ ಬಗ್ಗೆ ಸಾಬೀತುಪಡಿಸಲಿ. ಇಲ್ಲವಾದಲ್ಲಿ ಮಾನಹಾನಿ ಪ್ರಕರಣ ದಾಖಲಿಸುತ್ತೇವೆ ಎಂದು ಹೆಚ್​.ಡಿ.ಕುಮಾರಸ್ವಾಮಿಗೆ  ಧಾರವಾಡ ವಿವಿ ಸಿಂಡಿಕೇಟ್ ಸದಸ್ಯರು ಎಚ್ಚರಿಕೆ ನೀಡಿದ್ದಾರೆ. 

ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ವಿವಿ ಸಿಂಡಿಕೇಟ್ ಸದಸ್ಯರ ಕಿಡಿ; ಮಾನಹಾನಿ ಪ್ರಕರಣ ದಾಖಲಿಸುವ ಎಚ್ಚರಿಕೆ
ವಿವಿ ಸಿಂಡಿಕೇಟ್ ಸದಸ್ಯರು
TV9 Web
| Edited By: |

Updated on:Oct 17, 2021 | 1:30 PM

Share

ಧಾರವಾಡ: ಆರ್​ಎಸ್​ಎಸ್​ನವರೇ ಹೆಚ್ಚಾಗಿ ವಿವಿ ಸಿಂಡಿಕೇಟ್​ಗಳಲ್ಲಿ ಸದಸ್ಯರಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ, ವಿವಿ ಸಿಂಡಿಕೇಟ್ ಸದಸ್ಯರು ತಿರುಗೇಟು ನೀಡಿದ್ದಾರೆ. ಧಾರವಾಡದ ಕರ್ನಾಟಕ ವಿವಿಯ ಸಿಂಡಿಕೇಟ್ ಸದಸ್ಯರಲ್ಲಿ ಆರ್​ಎಸ್​ಎಸ್​ನವರು ಇದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳಿರುವುದು ನಿಜ. ನಾವು ಆರ್​ಎಸ್​ಎಸ್​ (RSS) ಕಾರ್ಯಕರ್ತರೆಂದು ಹೆಮ್ಮೆಯಿಂದ ಹೇಳುತ್ತೇವೆ ಎಂದು ತಿಳಿಸಿದ್ದಾರೆ.

ವಿವಿಯಲ್ಲಿ 6 ಸಿಂಡಿಕೇಟ್ ಸದಸ್ಯರು ಆರ್​ಎಸ್​ಎಸ್​ ಹಿನ್ನೆಲೆಯವರು. ಸಿಂಡಿಕೇಟ್ ಸದಸ್ಯರು ಹಣ ಪಡೆದ ಬಗ್ಗೆ ಸಾಬೀತುಪಡಿಸಲಿ. ಇಲ್ಲವಾದಲ್ಲಿ ಮಾನಹಾನಿ ಪ್ರಕರಣ ದಾಖಲಿಸುತ್ತೇವೆ ಎಂದು ಹೆಚ್​.ಡಿ.ಕುಮಾರಸ್ವಾಮಿಗೆ  ಧಾರವಾಡ ವಿವಿ ಸಿಂಡಿಕೇಟ್ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ಹಣ ತೆಗೆದುಕೊಂಡವರ ಹೆಸರು ಹೇಳಬೇಕು. ಏಳು ದಿನಗಳಲ್ಲಿ ಹಣ ತೆಗೆದುಕೊಂಡಿದ್ದನ್ನು ಸಾಬೀತು ಮಾಡಬೇಕು. ಆಗದಿದ್ದಲ್ಲಿ ಕ್ಷಮಾಪಣೆ ಕೇಳಬೇಕು. ಇಲ್ಲದಿದ್ದರೆ ಮಾನಹಾನಿ ಕೇಸ್ ಹಾಕುತ್ತೇವೆ. ಪ್ರಚಾರಕ್ಕಾಗಿ ಆರ್​ಎಸ್​ಎಸ್ ಬಗ್ಗೆ ಹೇಳುತ್ತಿದ್ದಾರೆ. ಸಂಘ ಪರಿವಾರಕ್ಕೆ ಬೈದರೆ ವೋಟ್ ಬರುತ್ತವೆ ಎಂದು ಹೀಗೆ ಹೇಳುತ್ತಿದ್ದಾರೆ ಎಂದು ಸಿಂಡಿಕೇಟ್ ಸದಸ್ಯ ಸುಂಧೀಂದ್ರ ದೇಶಪಾಂಡೆ ತಿಳಿಸಿದ್ದಾರೆ.

ಆರ್​ಎಸ್​ಎಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ ಆರ್​ಎಸ್​ಎಸ್ ವಿರುದ್ಧ ಇತ್ತೀಚೆಗೆ ಗಂಭೀರ ಆರೋಪಗಳನ್ನು ಮಾಡುತ್ತಾ ಬಂದಿರುವ ಜೆಡಿಎಸ್ ನಾಯಕ, ​ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಅವರು ನಿನ್ನೆ(ಅಕ್ಟೋಬರ್​ 16) ಹೊಸ ಬಾಂಬ್ ಸಿಡಿಸಿದ್ದಾರೆ. ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಆರ್​ಎಸ್​ಎಸ್​ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ‌ಮಾತನಾಡಿರುವ ಹೆಚ್. ಡಿ.ಕುಮಾರಸ್ವಾಮಿ ಮತ್ತೆ ಆರ್​ಎಸ್​ಎಸ್​ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಇವತ್ತು ಈ ಸರ್ಕಾರದಲ್ಲಿ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಆರ್​ಎಸ್​ಎಸ್​ನ ಕಾರ್ಯಕರ್ತರನ್ನು ಸಿಂಡಿಕೇಟ್ ಮೆಂಬರ್ ಮಾಡಿಕೊಂಡಿದ್ದಾರೆ. ಕೆಲಸ ಆಗಲು ಒಂದು ಎರಡು ಲಕ್ಷ ರೂಪಾಯಿ ಡಿಮ್ಯಾಂಡ್ ಇಟ್ಟಿದ್ದಾರೆ. 40 ವರ್ಷದ ಹಿಂದಿನ ಆರ್​ಎಸ್​ಎಸ್​ ಬೇರೆ, ಈಗಿನ ಆರ್​ಎಸ್​ಎಸ್​ ಬೇರೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ.

ಇದನ್ನೂ ಓದಿ: ‘ಆರ್​ಎಸ್​ಎಸ್​ ಒಂದು ಕೋಮುವಾದಿ ಸಂಘಟನೆ’- ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

RSS ವಿರುದ್ಧ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ: ಎಲ್ಲ ವಿವಿಗಳಲ್ಲಿ ಆರ್​ಎಸ್​ಎಸ್​ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ!

Published On - 1:20 pm, Sun, 17 October 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ