AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಬೆಂಗಳೂರು-ಹುಬ್ಬಳ್ಳಿ-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ, ಜೂನ್ 26ಕ್ಕೆ ಮೋದಿ ಚಾಲನೆ

ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಟ್ರಯಲ್ ರನ್ ಸೋಮವಾರ ಬೆಳಿಗ್ಗೆ ಪ್ರಾರಂಭವಾಗಿದೆ. ಜೂನ್ 26 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.

Vande Bharat Express: ಬೆಂಗಳೂರು-ಹುಬ್ಬಳ್ಳಿ-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ, ಜೂನ್ 26ಕ್ಕೆ ಮೋದಿ ಚಾಲನೆ
ವಂದೇ ಭಾರತ್ ರೈಲು
ಅಕ್ಷಯ್​ ಪಲ್ಲಮಜಲು​​
|

Updated on: Jun 19, 2023 | 9:53 AM

Share

ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ಟ್ರಯಲ್ ರನ್ ಸೋಮವಾರ ಬೆಳಿಗ್ಗೆ ಪ್ರಾರಂಭವಾಗಿದೆ. ಜೂನ್ 26 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಈ ಸೂಪರ್-ಫಾಸ್ಟ್ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ. ನೈಋತ್ಯ ರೈಲ್ವೆ ಪ್ರಕಾರ, ಪ್ರಾಯೋಗಿಕ ಚಾಲನೆಗಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ನಿಲ್ದಾಣದಿಂದ ಬೆಳಿಗ್ಗೆ 5.45ಕ್ಕೆ ಹೊರಟು ಧಾರವಾಡ ನಿಲ್ದಾಣವನ್ನು ಮಧ್ಯಾಹ್ನ 12. 45ಕ್ಕೆ ತಲುಪಲಿದೆ. ಮತ್ತೆ ರೈಲು ಧಾರವಾಡ ನಿಲ್ದಾಣದಲ್ಲಿ ಮಧ್ಯಾಹ್ನ 1.15ಕ್ಕೆ ಆರಂಭವಾಗಲಿದ್ದು, ರಾತ್ರಿ 8.10ಕ್ಕೆ ಕೆಎಸ್‌ಆರ್‌ ನಿಲ್ದಾಣ ತಲುಪಲಿದೆ. ಇದು ಕರ್ನಾಟಕಕ್ಕೆ ಎರಡನೇ ಹಂತದ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗುರುವಾರ ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಿಂದ ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣಕ್ಕೆ ಬಂದಿದೆ.

ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಲಿದ್ದು, ದಾವಣಗೆರೆಯಲ್ಲಿ ಮಾತ್ರ ನಿಲುಗಡೆಯಾಗಲಿದೆ. ವಂದೇ ಭಾರತ್ ರೈಲಿನಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವಿನ ಪ್ರಯಾಣದ ಸಮಯವು ಸರಿಸುಮಾರು ಏಳು ಗಂಟೆಗಳು ಎಂದು ಹೇಳಲಾಗಿದೆ, ಇತರ ಸಾಮಾನ್ಯ ರೈಲುಗಳಲ್ಲಿ ಒಂಬತ್ತರಿಂದ ಹತ್ತು ಗಂಟೆಗಳು ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: Kerala Vande Bharat Express : ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಚಾಲನೆ

ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ್ದ ಚೆನ್ನೈ-ಬೆಂಗಳೂರು-ಮೈಸೂರು ರೈಲು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ