AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿ ವಜಾ ಮಾಡಿ ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಿ; ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು

ಪಠ್ಯ ಪರಿಷ್ಕರಣೆ ಹಿಂಪಡೆಯುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನಾ ಧರಣಿಗೆ ಕರೆ ನೀಡಲಾಗಿದೆ. ಮೇ 31 ರ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿವೆ.

ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿ ವಜಾ ಮಾಡಿ ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಿ; ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು
ಶಿಕ್ಷಣ ತಜ್ಞರು, ಸಾಹಿತಿಗಳು ಧಾರವಾಡದಲ್ಲಿ ಪಠ್ಯಪುಸ್ತಕ ವಿರೋಧಿಸಿ ಸಭೆ ನಡೆಸಿದ್ದಾರೆ
TV9 Web
| Edited By: |

Updated on:May 27, 2022 | 9:19 AM

Share

ಧಾರವಾಡ: ಹೊಸ ಪಠ್ಯಪುಸ್ತಕಕ್ಕೆ ವಿರೋಧ ಹಿನ್ನೆಲೆ ಶಿಕ್ಷಣ ತಜ್ಞರು, ಸಾಹಿತಿಗಳು ಧಾರವಾಡದಲ್ಲಿ ಪಠ್ಯಪುಸ್ತಕ ವಿರೋಧಿಸಿ ಸಭೆ ನಡೆಸಿದ್ದಾರೆ. ತಮ್ಮ ಈ ಹೋರಾಟಕ್ಕೆ ‘ನಾವು ಕನ್ನಡಿಗರು ವಿಚಾರ ವೇದಿಕೆ’ ಸ್ಥಾಪನೆ ಮಾಡಲಾಗಿದೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸಭೆ ನಡೆದಿದ್ದು ಪರಿಷ್ಕೃತ ಪಠ್ಯ ವಾಪಸ್‌ಗೆ 15 ದಿನಗಳ ಗಡುವು ನೀಡಿದ್ದಾರೆ.

‘ನಾವು ಕನ್ನಡಿಗರು ವಿಚಾರ ವೇದಿಕೆ’ ಡಾ. ಹೆಡ್ಗೇವಾರ್, ಸೂಲಿಬೆಲೆ ಪಠ್ಯ ತೆಗೆಯುವಂತೆ ಆಗ್ರಹಿಸಿದ್ದು ರೋಹಿತ್ ಚಕ್ರತೀರ್ಥರನ್ನು ಸಮಿತಿಯಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಹೊಸ ಪಠ್ಯ ಮುದ್ರಣಕ್ಕೂ ಮೊದಲೇ ಸಾರ್ವಜನಿಕರಿಗೆ ತಿಳಿಸಬೇಕು. ಒಂದು ವರ್ಷ ಮೊದಲೇ ಈ ಕೆಲಸ ಮಾಡಬೇಕು. ಸಾರ್ವಜನಿಕರು ಒಪ್ಪಿದರೆ ಮುದ್ರಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದಲ್ಲಿ ಧಾರವಾಡದಲ್ಲಿ ಸಮಾವೇಶ ಮಾಡಲು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: Climate Change:ಹವಾಮಾನ ಬದಲಾವಣೆ ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು

ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು ಇನ್ನು ಮತ್ತೊಂದು ಕಡೆ ದಿನದಿಂದ ದಿನಕ್ಕೆ ಪಠ್ಯ ಪರಿಷ್ಕರಣೆ ವಿರೋಧ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿವೆ. ಸಾಹಿತಿಗಳು, ಚಿಂತಕರು ಹಾಗೂ ಶಿಕ್ಷಣ ತಜ್ಞರ ಹೋರಾಟಕ್ಕೆ ಕರವೇ ಸಾಥ್ ನೀಡಿದೆ. ಪಠ್ಯ ಪರಿಷ್ಕರಣೆ ಹಿಂಪಡೆಯುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನಾ ಧರಣಿಗೆ ಕರೆ ನೀಡಲಾಗಿದೆ. ಮೇ 31 ರ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

SFI, NSUI, AISF, AISA, KVS, DSF, AIRSO, DVP, VBV, VJD ಹಾಗೂ ಬೆಂವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಕೂಡ ಭಾಗಿಯಾಗಲಿದೆ. ವಿವಿಧ ವಿದ್ಯಾರ್ಥಿ ಸಂಘಟನೆಗಳ ಜೊತೆಗೆ ಕರವೇ ನಾರಾಯಣಗೌಡ ಬಣದಿಂದಲೂ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮೇ 31ರಂದು ರಾಜ್ಯಾದ್ಯಂತ ಹೋರಾಟದ ಗಡುವು ನೀಡಿರುವ ಕರವೇ 31 ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಹೋರಾಟ ಮಾಡಲು ನಿರ್ಧಾರ ಮಾಡಿದೆ. 31 ರೊಳಗೆ ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿಯನ್ನ ವಜಾ ಮಾಡುವಂತೆ ಕರವೇ ಗಡುವು ನೀಡಿದ್ದು ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಬೇಕು ಅಂತಾ ಮನವಿ ಮಾಡಿದೆ. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆಯ ವಿವಾದದಿಂದ ಕಂಗಾಲಾದ ಖಾಸಗಿ ಶಾಲೆಗಳು; ಗೊಂದಲದ ಪಠ್ಯ ಬಿಟ್ಟು ಉಳಿದ ಪಠ್ಯ ಬೋಧನೆಗೆ ಮನವಿ ಮಾಡಿ ಪತ್ರ ಬರೆದ ಒಕ್ಕೂಟ

Published On - 9:19 am, Fri, 27 May 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!