AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿ ವಜಾ ಮಾಡಿ ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಿ; ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು

ಪಠ್ಯ ಪರಿಷ್ಕರಣೆ ಹಿಂಪಡೆಯುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನಾ ಧರಣಿಗೆ ಕರೆ ನೀಡಲಾಗಿದೆ. ಮೇ 31 ರ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿವೆ.

ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿ ವಜಾ ಮಾಡಿ ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಿ; ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು
ಶಿಕ್ಷಣ ತಜ್ಞರು, ಸಾಹಿತಿಗಳು ಧಾರವಾಡದಲ್ಲಿ ಪಠ್ಯಪುಸ್ತಕ ವಿರೋಧಿಸಿ ಸಭೆ ನಡೆಸಿದ್ದಾರೆ
TV9 Web
| Edited By: ಆಯೇಷಾ ಬಾನು|

Updated on:May 27, 2022 | 9:19 AM

Share

ಧಾರವಾಡ: ಹೊಸ ಪಠ್ಯಪುಸ್ತಕಕ್ಕೆ ವಿರೋಧ ಹಿನ್ನೆಲೆ ಶಿಕ್ಷಣ ತಜ್ಞರು, ಸಾಹಿತಿಗಳು ಧಾರವಾಡದಲ್ಲಿ ಪಠ್ಯಪುಸ್ತಕ ವಿರೋಧಿಸಿ ಸಭೆ ನಡೆಸಿದ್ದಾರೆ. ತಮ್ಮ ಈ ಹೋರಾಟಕ್ಕೆ ‘ನಾವು ಕನ್ನಡಿಗರು ವಿಚಾರ ವೇದಿಕೆ’ ಸ್ಥಾಪನೆ ಮಾಡಲಾಗಿದೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸಭೆ ನಡೆದಿದ್ದು ಪರಿಷ್ಕೃತ ಪಠ್ಯ ವಾಪಸ್‌ಗೆ 15 ದಿನಗಳ ಗಡುವು ನೀಡಿದ್ದಾರೆ.

‘ನಾವು ಕನ್ನಡಿಗರು ವಿಚಾರ ವೇದಿಕೆ’ ಡಾ. ಹೆಡ್ಗೇವಾರ್, ಸೂಲಿಬೆಲೆ ಪಠ್ಯ ತೆಗೆಯುವಂತೆ ಆಗ್ರಹಿಸಿದ್ದು ರೋಹಿತ್ ಚಕ್ರತೀರ್ಥರನ್ನು ಸಮಿತಿಯಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಹೊಸ ಪಠ್ಯ ಮುದ್ರಣಕ್ಕೂ ಮೊದಲೇ ಸಾರ್ವಜನಿಕರಿಗೆ ತಿಳಿಸಬೇಕು. ಒಂದು ವರ್ಷ ಮೊದಲೇ ಈ ಕೆಲಸ ಮಾಡಬೇಕು. ಸಾರ್ವಜನಿಕರು ಒಪ್ಪಿದರೆ ಮುದ್ರಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದಲ್ಲಿ ಧಾರವಾಡದಲ್ಲಿ ಸಮಾವೇಶ ಮಾಡಲು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: Climate Change:ಹವಾಮಾನ ಬದಲಾವಣೆ ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು

ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು ಇನ್ನು ಮತ್ತೊಂದು ಕಡೆ ದಿನದಿಂದ ದಿನಕ್ಕೆ ಪಠ್ಯ ಪರಿಷ್ಕರಣೆ ವಿರೋಧ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿವೆ. ಸಾಹಿತಿಗಳು, ಚಿಂತಕರು ಹಾಗೂ ಶಿಕ್ಷಣ ತಜ್ಞರ ಹೋರಾಟಕ್ಕೆ ಕರವೇ ಸಾಥ್ ನೀಡಿದೆ. ಪಠ್ಯ ಪರಿಷ್ಕರಣೆ ಹಿಂಪಡೆಯುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನಾ ಧರಣಿಗೆ ಕರೆ ನೀಡಲಾಗಿದೆ. ಮೇ 31 ರ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

SFI, NSUI, AISF, AISA, KVS, DSF, AIRSO, DVP, VBV, VJD ಹಾಗೂ ಬೆಂವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಕೂಡ ಭಾಗಿಯಾಗಲಿದೆ. ವಿವಿಧ ವಿದ್ಯಾರ್ಥಿ ಸಂಘಟನೆಗಳ ಜೊತೆಗೆ ಕರವೇ ನಾರಾಯಣಗೌಡ ಬಣದಿಂದಲೂ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮೇ 31ರಂದು ರಾಜ್ಯಾದ್ಯಂತ ಹೋರಾಟದ ಗಡುವು ನೀಡಿರುವ ಕರವೇ 31 ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಹೋರಾಟ ಮಾಡಲು ನಿರ್ಧಾರ ಮಾಡಿದೆ. 31 ರೊಳಗೆ ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿಯನ್ನ ವಜಾ ಮಾಡುವಂತೆ ಕರವೇ ಗಡುವು ನೀಡಿದ್ದು ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಬೇಕು ಅಂತಾ ಮನವಿ ಮಾಡಿದೆ. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆಯ ವಿವಾದದಿಂದ ಕಂಗಾಲಾದ ಖಾಸಗಿ ಶಾಲೆಗಳು; ಗೊಂದಲದ ಪಠ್ಯ ಬಿಟ್ಟು ಉಳಿದ ಪಠ್ಯ ಬೋಧನೆಗೆ ಮನವಿ ಮಾಡಿ ಪತ್ರ ಬರೆದ ಒಕ್ಕೂಟ

Published On - 9:19 am, Fri, 27 May 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ