AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿ ವಜಾ ಮಾಡಿ ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಿ; ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು

ಪಠ್ಯ ಪರಿಷ್ಕರಣೆ ಹಿಂಪಡೆಯುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನಾ ಧರಣಿಗೆ ಕರೆ ನೀಡಲಾಗಿದೆ. ಮೇ 31 ರ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿವೆ.

ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿ ವಜಾ ಮಾಡಿ ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಿ; ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು
ಶಿಕ್ಷಣ ತಜ್ಞರು, ಸಾಹಿತಿಗಳು ಧಾರವಾಡದಲ್ಲಿ ಪಠ್ಯಪುಸ್ತಕ ವಿರೋಧಿಸಿ ಸಭೆ ನಡೆಸಿದ್ದಾರೆ
TV9 Web
| Edited By: |

Updated on:May 27, 2022 | 9:19 AM

Share

ಧಾರವಾಡ: ಹೊಸ ಪಠ್ಯಪುಸ್ತಕಕ್ಕೆ ವಿರೋಧ ಹಿನ್ನೆಲೆ ಶಿಕ್ಷಣ ತಜ್ಞರು, ಸಾಹಿತಿಗಳು ಧಾರವಾಡದಲ್ಲಿ ಪಠ್ಯಪುಸ್ತಕ ವಿರೋಧಿಸಿ ಸಭೆ ನಡೆಸಿದ್ದಾರೆ. ತಮ್ಮ ಈ ಹೋರಾಟಕ್ಕೆ ‘ನಾವು ಕನ್ನಡಿಗರು ವಿಚಾರ ವೇದಿಕೆ’ ಸ್ಥಾಪನೆ ಮಾಡಲಾಗಿದೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸಭೆ ನಡೆದಿದ್ದು ಪರಿಷ್ಕೃತ ಪಠ್ಯ ವಾಪಸ್‌ಗೆ 15 ದಿನಗಳ ಗಡುವು ನೀಡಿದ್ದಾರೆ.

‘ನಾವು ಕನ್ನಡಿಗರು ವಿಚಾರ ವೇದಿಕೆ’ ಡಾ. ಹೆಡ್ಗೇವಾರ್, ಸೂಲಿಬೆಲೆ ಪಠ್ಯ ತೆಗೆಯುವಂತೆ ಆಗ್ರಹಿಸಿದ್ದು ರೋಹಿತ್ ಚಕ್ರತೀರ್ಥರನ್ನು ಸಮಿತಿಯಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಹೊಸ ಪಠ್ಯ ಮುದ್ರಣಕ್ಕೂ ಮೊದಲೇ ಸಾರ್ವಜನಿಕರಿಗೆ ತಿಳಿಸಬೇಕು. ಒಂದು ವರ್ಷ ಮೊದಲೇ ಈ ಕೆಲಸ ಮಾಡಬೇಕು. ಸಾರ್ವಜನಿಕರು ಒಪ್ಪಿದರೆ ಮುದ್ರಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದಲ್ಲಿ ಧಾರವಾಡದಲ್ಲಿ ಸಮಾವೇಶ ಮಾಡಲು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: Climate Change:ಹವಾಮಾನ ಬದಲಾವಣೆ ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು

ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು ಇನ್ನು ಮತ್ತೊಂದು ಕಡೆ ದಿನದಿಂದ ದಿನಕ್ಕೆ ಪಠ್ಯ ಪರಿಷ್ಕರಣೆ ವಿರೋಧ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿವೆ. ಸಾಹಿತಿಗಳು, ಚಿಂತಕರು ಹಾಗೂ ಶಿಕ್ಷಣ ತಜ್ಞರ ಹೋರಾಟಕ್ಕೆ ಕರವೇ ಸಾಥ್ ನೀಡಿದೆ. ಪಠ್ಯ ಪರಿಷ್ಕರಣೆ ಹಿಂಪಡೆಯುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನಾ ಧರಣಿಗೆ ಕರೆ ನೀಡಲಾಗಿದೆ. ಮೇ 31 ರ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

SFI, NSUI, AISF, AISA, KVS, DSF, AIRSO, DVP, VBV, VJD ಹಾಗೂ ಬೆಂವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಕೂಡ ಭಾಗಿಯಾಗಲಿದೆ. ವಿವಿಧ ವಿದ್ಯಾರ್ಥಿ ಸಂಘಟನೆಗಳ ಜೊತೆಗೆ ಕರವೇ ನಾರಾಯಣಗೌಡ ಬಣದಿಂದಲೂ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮೇ 31ರಂದು ರಾಜ್ಯಾದ್ಯಂತ ಹೋರಾಟದ ಗಡುವು ನೀಡಿರುವ ಕರವೇ 31 ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಹೋರಾಟ ಮಾಡಲು ನಿರ್ಧಾರ ಮಾಡಿದೆ. 31 ರೊಳಗೆ ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿಯನ್ನ ವಜಾ ಮಾಡುವಂತೆ ಕರವೇ ಗಡುವು ನೀಡಿದ್ದು ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಬೇಕು ಅಂತಾ ಮನವಿ ಮಾಡಿದೆ. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆಯ ವಿವಾದದಿಂದ ಕಂಗಾಲಾದ ಖಾಸಗಿ ಶಾಲೆಗಳು; ಗೊಂದಲದ ಪಠ್ಯ ಬಿಟ್ಟು ಉಳಿದ ಪಠ್ಯ ಬೋಧನೆಗೆ ಮನವಿ ಮಾಡಿ ಪತ್ರ ಬರೆದ ಒಕ್ಕೂಟ

Published On - 9:19 am, Fri, 27 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್