AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಗೆ ಲಿಂಗಾಯತ ಮುಖಂಡರಿಂದ ಒತ್ತಡ

ಲಿಂಗಾಯತ ಮತಗಳು ಅಧಿಕವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿ ಕಣದಲ್ಲಿದ್ದಾರೆ. ಈ ನಡುವೆ ಧಾರವಾಡ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ವೀರಶೈವ ಲಿಂಗಾಯತ ಸಮುದಾಯದ ಶಿರಹಟ್ಟಿ ಮಠದ ಪೀಠಾಧಿಪತಿ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಲಿಂಗಾಯತ ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಗೆ ಲಿಂಗಾಯತ ಮುಖಂಡರಿಂದ ಒತ್ತಡ
ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಗೆ ಲಿಂಗಾಯತ ಮುಖಂಡರಿಂದ ಒತ್ತಡ
ಶಿವಕುಮಾರ್ ಪತ್ತಾರ್
| Edited By: |

Updated on: Mar 22, 2024 | 11:33 AM

Share

ಧಾರವಾಡ, ಮಾ.22: ಲಿಂಗಾಯತ ಮತಗಳು ಅಧಿಕವಾಗಿರುವ ಧಾರವಾಡ (Dharwad) ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿ (Vinod Asooti) ಕಣದಲ್ಲಿದ್ದಾರೆ. ಈ ನಡುವೆ ಧಾರವಾಡ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ವೀರಶೈವ ಲಿಂಗಾಯತ ಸಮುದಾಯದ ಶಿರಹಟ್ಟಿ ಮಠದ ಪೀಠಾಧಿಪತಿ ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಅವರಿಗೆ ಲಿಂಗಾಯತ ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಗದಗ ಜಿಲ್ಲೆಯ ಶಿರಹಟ್ಟಿ ಮಠದ ಪೀಠಾಧಿಪತಿಯಾಗಿರುವ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮದ ಭಕ್ತರು ಒತ್ತಾಯಿಸಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಐದು ಲಕ್ಷಕ್ಕೂ ಹೆಚ್ಚು ಲಿಂಗಾಯತ ಮತಗಳಿವೆ. ಇದೇ ಕಾರಣಕ್ಕೆ ಸ್ಪರ್ಧೆ ಮಾಡುವಂತೆ ಸ್ವಾಮೀಜಿಗೆ ವಿವಿದ ಲಿಂಗಾಯತ ಮುಖಂಡರು ಹಾಗೂ ಭಕ್ತರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ, ಸಚಿವರ ಮಕ್ಕಳಿಗೆ ಮಣೆ

ಕಳೆದ ತಿಂಗಳು ದಿಂಗಾಲೇಶ್ವರ ಸ್ವಾಮೀಜಿ ಹುಬ್ಬಳ್ಳಿಯಲ್ಲಿ ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಶಿರಹಟ್ಟಿ ಮಠದ ಪಕ್ಕೀರ ಸ್ವಾಮೀಜಿಗಳ 5555 ನಾಣ್ಯಗಳ ತುಲಾಭಾರ ಮಾಡಿದ್ದರು. ಇದಲ್ಲದೆ ಹುಬ್ಬಳ್ಳಿ ಸೇರಿ ವಿವಿಧ ಕಡೆ ಭಾವೈಕ್ಯತಾ ರಥಯಾತ್ರೆ ಮಾಡಿದ್ದರು. ಚುನಾವಣಾ ದೃಷ್ಟಿಯಿಂದಲೇ ದಿಂಗಾಲೇಶ್ವರ ಸ್ವಾಮೀಜಿ ಅವರು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ‌ ಮಾಡಿದರಾ ಅನ್ನೋ ಅನುಮಾನ ಹುಟ್ಟುಹಾಕಿದೆ.

ಐದನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದ ಪ್ರಲ್ಹಾದ್ ಜೋಶಿ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಐದನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸತತ ನಾಲ್ಕು ಬಾರಿ ಗೆದ್ದಿರುವ ಜೋಶಿಗೆ ಈ ಬಾರಿ ಮತ್ತೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಲಿಂಗಾಯತ ಮತಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಹೈಕಮಾಂಡ್ ಬ್ರಾಹ್ಮಣ ಸಮುದಾಯದ ಜೋಶಿ ಅವರಿಗೆ ಮಣೆ ಹಾಕಿದ್ದಾರೆ.

ಇತ್ತ, ಕಾಂಗ್ರೆಸ್ ಹೈಕಮಾಂಡ್ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕೊನೆಗೂ ಅಳೆದು ತೂಗಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈ ಕ್ಷೇತ್ರವನ್ನು ಒಬಿಸಿ ಕೋಟಾಕ್ಕೆ ನೀಡಬೇಕು ಎಂಬ ಬೇಡಿಕೆ ವ್ಯಕ್ತವಾದ ಹಿನ್ನೆಲೆ ವಿನೋದ ಅಸೂಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?