AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ವಿಜಯಪುರದ ಡಾ ಆರ್ ಕೆ ಕುಲಕರ್ಣಿ ಅವರಿಗೆ ಕವಿ ಕಾವ್ಯ ಮನ್ನಣೆ ಪ್ರಶಸ್ತಿ ಪ್ರದಾನ

ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಡಾ ಆರ್ ಕೆ ಕುಲಕರ್ಣಿಯವರು “ ಸಾವಿತ್ರಿ”ಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅರವಿಂದರ ಈ ಕೃತಿಯ ಆಧ್ಯಾತ್ಮಿಕ ಹಿನ್ನೆಲೆ ಹಾಗೂ ಶ್ರೇಷ್ಠತೆ, ಸಾಹಿತ್ಯಿಕ ಮಹತ್ವದ ಕುರಿತು ಅವರು ಬೆಳಕು ಚೆಲ್ಲಿದರು.

ಧಾರವಾಡದಲ್ಲಿ ವಿಜಯಪುರದ ಡಾ ಆರ್ ಕೆ ಕುಲಕರ್ಣಿ ಅವರಿಗೆ ಕವಿ ಕಾವ್ಯ ಮನ್ನಣೆ ಪ್ರಶಸ್ತಿ ಪ್ರದಾನ
ಕವಿ ಕಾವ್ಯ ಮನ್ನಣೆ ಪುರಸ್ಕೃತ ಡಾ ಆರ್ ಕೆ ಕುಲಕರ್ಣಿ, ಡಾ ಶ್ಯಾಮಸುಂದರ ಬಿದರಕುಂದಿ, ಶ್ರೀ ದಾಮೋದರ ಕುಲಕರ್ಣಿ, ಶ್ರೀ ಸುರೇಶ ಕುಲಕರ್ಣಿ, ಶ್ರೀ ಮಧಸೂಧನ ಕುಲಕರ್ಣಿ ಹಾಗೂ ಪ್ರತಿಷ್ಠಾನದ ಸದಸ್ಯರು.
TV9 Web
| Updated By: ಸಾಧು ಶ್ರೀನಾಥ್​|

Updated on: Jan 01, 2023 | 7:09 PM

Share

ಧಾರವಾಡ: ಸುಶೀಲಾ ಕುಲಕರ್ಣಿ ಸ್ಮೃತಿ ಪ್ರತಿಷ್ಠಾನ ನೀಡುವ “ಕವಿ ಕಾವ್ಯ ಮನ್ನಣೆ” ಪ್ರಶಸ್ತಿಯನ್ನು ಈ ಬಾರಿ ವಿಜಯಪುರದ ಡಾ ಆರ್ ಕೆ ಕುಲಕರ್ಣಿ (Dr RK Kulkarni) ಅವರಿಗೆ ನೀಡಲಾಯಿತು. ಸ್ಮೃತಿ ಪ್ರತಿಷ್ಠಾನ, ಸುದಾಮ ದತ್ತಿ ನಿಧಿ ಯವರು ದಿವಂಗತ ನಾರಾಯಣ್ ಎಲ್ ಕುಲಕರ್ಣಿ ಅವರ ಸ್ಮರಣಾರ್ಥ ನೀಡುವ ಈ ಪ್ರಶಸ್ತಿಯನ್ನು (Award) ಧಾರವಾಡದಲ್ಲಿ (Dharwad) ಶನಿವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ವೃತ್ತಿಯಿಂದ ಇಂಗ್ಲಿಷ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಡಾ ಆರ್ ಕೆ ಕುಲಕರ್ಣಿಯವರು ಸಾಹಿತ್ಯದಲ್ಲಿ (Literature) ಕೂಡ ಕೃಷಿ ಮಾಡಿದವರು. ಶ್ರೀ ಅರವಿಂದರ ಪ್ರಸಿದ್ಧ “ ಸಾವಿತ್ರಿ” ಸೇರಿದಂತೆ ಹಲವು ಕೃತಿಗಳನ್ನು ಅನುವಾದ ಮಾಡಿದ್ದಾರೆ. ಹಾಗೂ ಕವನ ಸಂಕಲ, ಚಿಂತನ ಗ್ರಂಥಗಳನ್ನು, ಆಧ್ಯಾತ್ಮಿಕ ಕೃತಿಗಳನ್ನು, ಲೇಖನಗಳನ್ನು ಬರೆದಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಡಾ ಆರ್ ಕೆ ಕುಲಕರ್ಣಿಯವರು “ ಸಾವಿತ್ರಿ”ಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅರವಿಂದರ ಈ ಕೃತಿಯ ಆಧ್ಯಾತ್ಮಿಕ ಹಿನ್ನೆಲೆ ಹಾಗೂ ಶ್ರೇಷ್ಠತೆ, ಸಾಹಿತ್ಯಿಕ ಮಹತ್ವ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಅವರು ಬೆಳಕು ಚೆಲ್ಲಿದರು.

ಇದನ್ನೂ ಓದಿ:

ಸಾಹಿತಿಗಳ ಪ್ರತಿಮೆಗಳುಳ್ಳ ಬಯಲು ವಸ್ತುಸಂಗ್ರಹಾಲಯ ಸ್ಥಾಪನೆಗೆ ಸರ್ಕಾರದ ಚಿಂತನೆ: ಸಿಎಂ ಬಸವರಾಜ ಬೊಮ್ಮಾಯಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ ಶ್ಯಾಮಸುಂದರ ಬಿದರಕುಂದಿ ಅವರು ವಹಿಸಿಕೊಂಡಿದ್ದರು, ಪ್ರೊ ಜಿ ಎಸ್ ಕುಲಕರ್ಣಿ ಅವರು ಡಾ ಆರ್ ಕೆ ಕುಲಕರ್ಣಿ ಕುರಿತು ಮಾತನಾಡಿದರು, ಸುರೇಶ್ ಕುಲಕರ್ಣಿ ಅವರು ಸ್ವಾಗತ ಮಾಡಿದರು ಹಾಗೂ ಶ್ರೀಮತಿ ರಂಜನಾ ಕುಲಕರ್ಣಿ ನಿರೂಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ