AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Kulkarni Returns: 6 ವರ್ಷಗಳ ಬಳಿಕೆ ತವರೂರಿಗೆ ಆಗಮಿಸಿದ ವಿನಯ್ ಕುಲಕರ್ಣಿ!

ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಬರೋಬ್ಬರಿ 6 ವರ್ಷಗಳ ಬಳಿಕ ತಮ್ಮ ಸ್ವಕ್ಷೇತ್ರ ಧಾರವಾಡಕ್ಕೆ ಭವ್ಯ ಎಂಟ್ರಿ ನೀಡಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧನದ ಬಳಿಕ ಜಿಲ್ಲಾ ಪ್ರವೇಶಕ್ಕೆ ಇದ್ದ ಕಾನೂನು ತೊಡಕುಗಳು ನಿವಾರಣೆಯಾಗಿವೆ. ಕೋರ್ಟ್ ಅನುಮತಿ ಸಿಗುತ್ತಿದ್ದಂತೆಯೇ ಕುಟುಂಬ ಸಮೇತರಾಗಿ ಆಗಮಿಸಿದ ವಿನಯ್ ಕುಲಕರ್ಣಿಗೆ ಬೆಂಬಲಿಗರು ಅದ್ಧೂರಿ ಸ್ವಾಗತ ಕೋರಿದ್ದಾರೆ.

Vinay Kulkarni Returns: 6 ವರ್ಷಗಳ ಬಳಿಕೆ ತವರೂರಿಗೆ ಆಗಮಿಸಿದ ವಿನಯ್ ಕುಲಕರ್ಣಿ!
6 ವರ್ಷಗಳ ಬಳಿಕೆ ತವರೂರಿಗೆ ಆಗಮಿಸಿದ ವಿನಯ್ ಕುಲಕರ್ಣಿ!
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Aug 28, 2026 | 12:07 PM

Share

ಮುಖ್ಯಾಂಶಗಳು

  • ಸುದೀರ್ಘ 6 ವರ್ಷಗಳ ಬಳಿಕ ಧಾರವಾಡ ನಿವಾಸಕ್ಕೆ ಶಾಸಕ ವಿನಯ್ ಕುಲಕರ್ಣಿ ಭವ್ಯ ಎಂಟ್ರಿ.
  • ಕೋರ್ಟ್​ ಅನುಮತಿ ಹಿನ್ನೆಲೆ ಪತ್ನಿ, ಮಕ್ಕಳೊಂದಿಗೆ ತವರೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ.
  • ಹಾರೋಬೆಳವಡಿ ವೀರಭದ್ರೇಶ್ವರ ದರ್ಶನ ಪಡೆದು ಮುರುಘಾ ಮಠಕ್ಕೆ ಭೇಟಿ ನೀಡಿದ ವಿನಯ್

ಧಾರವಾಡ, ಆಗಸ್ಟ್ 28: ಶಾಸಕ ವಿನಯ್ ಕುಲಕರ್ಣಿ (Vinay Kulkarni) ಬರೋಬ್ಬರಿ 6 ವರ್ಷಗಳ ಬಳಿಕ ತಮ್ಮ ಸ್ವಕ್ಷೇತ್ರ ಹಾಗೂ ಸ್ವಜಿಲ್ಲೆಯಾದ ಧಾರವಾಡಕ್ಕೆ ಮಂಗಳವಾರ ಅಧಿಕೃತವಾಗಿ ಹೆಜ್ಜೆ ಇಟ್ಟಿದ್ದಾರೆ. ಕೋರ್ಟ್‌ನಿಂದ ಜಿಲ್ಲಾ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ, ತಮ್ಮ ಬೆಂಬಲಿಗರ ಸಾಲು ಸಾಲು ಕಾರುಗಳ ಅಬ್ಬರದ ನಡುವೆ ಧಾರವಾಡದ ಶಿವಗಿರಿ ಬಡಾವಣೆಯಲ್ಲಿರುವ ನಿವಾಸಕ್ಕೆ ಪತ್ನಿ ಹಾಗೂ ಮಕ್ಕಳೊಂದಿಗೆ ಆಗಮಿಸಿದ್ದಾರೆ.

ಬೆಂಬಲಿಗರ ಅದ್ಧೂರಿ ಸ್ವಾಗತ

ಮನೆಗೆ ಬಂದ ನಾಯಕನನ್ನು ಬೆಂಬಲಿಗರು ಆರತಿ ಬೆಳಗಿ, ಮನೆ ಬಾಗಿಲಿಗೆ ಕುಂಬಳಕಾಯಿ ಒಡೆದು ಅತ್ಯಂತ ವಿಜೃಂಭಣೆಯಿಂದ ಸ್ವಾಗತಿಸಿದ್ದಾರೆ. ಧಾರವಾಡಕ್ಕೆ ಆಗಮಿಸುವ ಮಾರ್ಗಮಧ್ಯೆ, ತಮ್ಮ ಮಕ್ಕಳಾದ ಹೇಮಂತ್ ಹಾಗೂ ವೈಶಾಲಿ ಜೊತೆ ಹಾರೋಬೆಳವಡಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ವಿನಯ್ ಕುಲಕರ್ಣಿ, ಬಳಿಕ ಶ್ರೀ ಮುರುಘಾ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ವೀಡಿಯೋ ಇಲ್ಲಿದೆ

ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ

2016ರಲ್ಲಿ ನಡೆದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಭೀಕರ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ, 2020ರ ನವೆಂಬರ್ 5 ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು. ಸುಮಾರು 9 ತಿಂಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಅವರಿಗೆ ಬಳಿಕ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಆದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತಿನ ಮೇಲೆ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿತ್ತು. ಇತ್ತೀಚೆಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಆದೇಶ ಹಾಗೂ 42ನೇ ಜೆಎಮ್‌ಎಫ್‌ಸಿ ಕೋರ್ಟ್ ನೀಡಿದ ಅನುಮತಿಯಿಂದಾಗಿ, ಕಳೆದ 6 ವರ್ಷಗಳಿಂದ ಸ್ವಂತ ಜಿಲ್ಲೆಯಿಂದ ದೂರವಿದ್ದ ವಿನಯ್ ಕುಲಕರ್ಣಿಗೆ ಕೊನೆಗೂ ತವರೂರಿಗೆ ಮರಳುವ ಹಾದಿ ಸುಗಮವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Fri, 28 August 26

Follow Us
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ