ಯೋಗೀಶ್ ಗೌಡ ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್​ನಲ್ಲೂ ವಿನಯ್ ಕುಲಕರ್ಣಿಗೆ ಹಿನ್ನಡೆ; ಮೇಲ್ಮನವಿ ಅರ್ಜಿ ವಜಾ

ವಿನಯ್ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಬೆಂಗಳೂರು ಹೈಕೋರ್ಟ್ ಆದೇಶ ಎತ್ತಿ‌ ಹಿಡಿದಿತ್ತು. ಹೈಕೋರ್ಟ್‌‌ನ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದ ವಿನಯ್​ಗೆ ಈಗ ಸುಪ್ರೀಂ ಕೋರ್ಟ್‌ನಲ್ಲಿಯೂ ಹಿನ್ನೆಲೆ ಉಂಟಾಗಿದೆ.

ಯೋಗೀಶ್ ಗೌಡ ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್​ನಲ್ಲೂ ವಿನಯ್ ಕುಲಕರ್ಣಿಗೆ ಹಿನ್ನಡೆ; ಮೇಲ್ಮನವಿ ಅರ್ಜಿ ವಜಾ
ವಿನಯ್ ಕುಲಕರ್ಣಿಗೆ ಹಿನ್ನಡೆ
Follow us
| Updated By: ganapathi bhat

Updated on: Feb 07, 2022 | 3:34 PM

ಧಾರವಾಡ: ಇಲ್ಲಿನ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆ ಉಂಟಾಗಿದೆ. ಸಿಬಿಐ ತನಿಖೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮೇಲ್ಮನವಿ ಅರ್ಜಿ ವಜಾಗೊಳಿಸಲಾಗಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಂಡಂತಾಗಿದೆ. 2019ರಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು.

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಗೆ ಭಾರೀ ಹಿನ್ನೆಡೆ ಉಂಟಾಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ವಿನಯ್ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಬೆಂಗಳೂರು ಹೈಕೋರ್ಟ್ ಆದೇಶ ಎತ್ತಿ‌ ಹಿಡಿದಿತ್ತು. ಹೈಕೋರ್ಟ್‌‌ನ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದ ವಿನಯ್​ಗೆ ಈಗ ಸುಪ್ರೀಂ ಕೋರ್ಟ್‌ನಲ್ಲಿಯೂ ಹಿನ್ನೆಲೆ ಉಂಟಾಗಿದೆ.

ಇದನ್ನೂ ಓದಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಹತ್ಯೆ ಪ್ರಕರಣ; ವಿನಯ್ ಕುಲಕರ್ಣಿಗೆ ಕಂಟಕವಾಗುತ್ತಾ 36 ಸಾಕ್ಷಿಗಳು?

ಇದನ್ನೂ ಓದಿ: ಸೆರೆವಾಸದಿಂದ ಮುಕ್ತಿ ಪಡೆದ ಮಾಜಿ ಸಚಿವ ವಿನಯ್ ಕುಲಕರ್ಣಿ ಮುಂದಿನ ನಡೆ ಏನು?