AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಆ್ಯಪ್‌ ಮೂಲಕ 69 ದೂರು ದಾಖಲು

ಚುನಾವಣಾ ಆಯೋಗ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಅಕ್ರಮ ತಡೆಯಲು ಸಿ ವಿಜಿಲ್ ಆ್ಯಪ್​ ತೆರೆದಿದ್ದು, ಇದೀಗ ಚುನಾವಣಾ ಆಯೋಗದ ಸಿ-ವಿಜಿಲ್(cVIGIL) ಮೊಬೈಲ್ ಆ್ಯಪ್ ಮೂಲಕ ಧಾರವಾಡ ಜಿಲ್ಲೆಯಲ್ಲಿ 69 ದೂರುಗಳು ಬಂದಿವೆ.

ಧಾರವಾಡದಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಆ್ಯಪ್‌ ಮೂಲಕ 69 ದೂರು ದಾಖಲು
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on:Apr 12, 2023 | 11:16 AM

Share

ಹುಬ್ಬಳ್ಳಿ: ಜಿಲ್ಲಾಡಳಿತವು ಡಿಸಿ ಕಚೇರಿಯಲ್ಲಿ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ(Election) ಅಕ್ರಮ ತಡೆಯಲು ಸಿ ವಿಜಿಲ್ ಆ್ಯಪ್​ ತೆರೆದಿದ್ದು, ಇದೀಗ ಚುನಾವಣಾ ಆಯೋಗದ ಸಿ-ವಿಜಿಲ್(cVIGIL) ಮೊಬೈಲ್ ಆ್ಯಪ್ ಮೂಲಕ ಧಾರವಾಡ ಜಿಲ್ಲೆಯಲ್ಲಿ 69 ದೂರುಗಳು ಬಂದಿವೆ. ಹೆಚ್ಚಿನ ಪ್ರಕರಣಗಳು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ರಾಜಕಾರಣಿಗಳ ಭಾವಚಿತ್ರವಿರುವ ಅನಧಿಕೃತ ಬ್ಯಾನರ್‌ಗಳಿಗೆ ಸಂಬಂಧಿಸಿದೆ. ಮಾದರಿ ನೀತಿ ಸಂಹಿತೆಯ (MCC) ಉಲ್ಲಂಘನೆಗಳನ್ನು ವರದಿ ಮಾಡಲು cVIGIL ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿತ್ತು. ಇನ್ನು ಇದು ಮತದಾನ ಪ್ರಾರಂಭವಾಗುವವರೆಗೂ ಮುಂದುವರಿಯುತ್ತಿದ್ದು, ಸೆಲ್‌ಗೆ ಬಂದ ಯಾವುದೇ ದೂರುಗಳನ್ನು ತಕ್ಷಣವೇ ಆಯಾ ಕ್ಷೇತ್ರಕ್ಕೆ ವರ್ಗಾಯಿಸಲಾಗುತ್ತದೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ರಚಿಸಲಾಗಿದ್ದು, ದೂರು ಬಂದ ಬಳಿಕ ತಂಡವೊಂದು ಭೇಟಿ ನೀಡಿ ಉಲ್ಲಂಘನೆ ಕುರಿತು ತನಿಖೆ ನಡೆಸುತ್ತದೆ. ಶಾಂತಿಯುತ ಚುನಾವಣೆ ನಡೆಸುವ ಗುರಿ ಹೊಂದಿರುವ ಚುನಾವಣಾ ಆಯೋಗ, ಅಕ್ರಮಗಳನ್ನು ತಡೆಯಲು ಈ ಆ್ಯಪ್ ಬಿಡುಗಡೆ ಮಾಡಿದ್ದು, ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಹಣ ಮತ್ತು ಉಡುಗೊರೆಗಳನ್ನು ನೀಡುತ್ತವೆ. ಇಂತಹ ಅಕ್ರಮಗಳನ್ನು ತಡೆಯಲು  cVIGIL ಆ್ಯಪ್ ಬಿಡುಗಡೆ ಮಾಡಲಾಗಿದೆ. ಜೊತೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಶಾಂತಿಯುತ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ:KS Eshwarappa: ಚುನಾವಣಾ ರಾಜಕೀಯಕ್ಕೆ ಹಿಂದೂ ಫೈರ್ ಬ್ರಾಂಡ್ ಗುಡ್ ​ಬೈ: ಕೆಎಸ್ ಈಶ್ವರಪ್ಪ ರಿಯಾಕ್ಷನ್ ಹೀಗಿದೆ

ಯಾವ ಯಾವ ತರಹದ ದೂರು ದಾಖಲಿಸಬಹುದು

ಸಾರ್ವಜನಿಕರು ಹಣ, ಉಡುಗೊರೆಗಳು, ಕೂಪನ್‌ಗಳು, ಮದ್ಯ, ಪೋಸ್ಟರ್‌ಗಳು, ಅನುಮತಿಯಿಲ್ಲದೆ ಬ್ಯಾನರ್‌ಗಳ ಪ್ರದರ್ಶನ, ಬಂದೂಕು ಬಳಕೆ, ಬೆದರಿಕೆ, ವಾಹನಗಳ ಬಳಕೆ, ಅನುಮತಿಯಿಲ್ಲದ ಬೆಂಗಾವಲು ಪಡೆಗಳು, ಪಾವತಿಸಿದ ಸುದ್ದಿ, ಆಸ್ತಿ ವಿರೂಪಗೊಳಿಸುವಿಕೆ, ನಿಷೇಧದ ಅವಧಿಯಲ್ಲಿ ಪ್ರಚಾರ, ದ್ವೇಷದ ಭಾಷಣಗಳು, ಇತರೆ ಸಂಬಂಧಿಸಿದ ದೂರುಗಳನ್ನು ದಾಖಲಿಸಬಹುದು ಎಂದು ಮಾದರಿ ನೀತಿ ಸಂಹಿತೆ (ಎಂಸಿಸಿ) ನೋಡಲ್ ಅಧಿಕಾರಿ ಯಶಪಾಲ್ ಖಿರ್‌ಸಾಗರ್ TOI ಗೆ ತಿಳಿಸಿದ್ದಾರೆ. ಉಲ್ಲಂಘನೆಗಳ ನಡುವೆ.

ಇನ್ನಷ್ಟು ಚುನಾವಣಾ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:14 am, Wed, 12 April 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ