AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಆ್ಯಪ್‌ ಮೂಲಕ 69 ದೂರು ದಾಖಲು

ಚುನಾವಣಾ ಆಯೋಗ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಅಕ್ರಮ ತಡೆಯಲು ಸಿ ವಿಜಿಲ್ ಆ್ಯಪ್​ ತೆರೆದಿದ್ದು, ಇದೀಗ ಚುನಾವಣಾ ಆಯೋಗದ ಸಿ-ವಿಜಿಲ್(cVIGIL) ಮೊಬೈಲ್ ಆ್ಯಪ್ ಮೂಲಕ ಧಾರವಾಡ ಜಿಲ್ಲೆಯಲ್ಲಿ 69 ದೂರುಗಳು ಬಂದಿವೆ.

ಧಾರವಾಡದಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಆ್ಯಪ್‌ ಮೂಲಕ 69 ದೂರು ದಾಖಲು
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Apr 12, 2023 | 11:16 AM

Share

ಹುಬ್ಬಳ್ಳಿ: ಜಿಲ್ಲಾಡಳಿತವು ಡಿಸಿ ಕಚೇರಿಯಲ್ಲಿ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ(Election) ಅಕ್ರಮ ತಡೆಯಲು ಸಿ ವಿಜಿಲ್ ಆ್ಯಪ್​ ತೆರೆದಿದ್ದು, ಇದೀಗ ಚುನಾವಣಾ ಆಯೋಗದ ಸಿ-ವಿಜಿಲ್(cVIGIL) ಮೊಬೈಲ್ ಆ್ಯಪ್ ಮೂಲಕ ಧಾರವಾಡ ಜಿಲ್ಲೆಯಲ್ಲಿ 69 ದೂರುಗಳು ಬಂದಿವೆ. ಹೆಚ್ಚಿನ ಪ್ರಕರಣಗಳು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ರಾಜಕಾರಣಿಗಳ ಭಾವಚಿತ್ರವಿರುವ ಅನಧಿಕೃತ ಬ್ಯಾನರ್‌ಗಳಿಗೆ ಸಂಬಂಧಿಸಿದೆ. ಮಾದರಿ ನೀತಿ ಸಂಹಿತೆಯ (MCC) ಉಲ್ಲಂಘನೆಗಳನ್ನು ವರದಿ ಮಾಡಲು cVIGIL ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿತ್ತು. ಇನ್ನು ಇದು ಮತದಾನ ಪ್ರಾರಂಭವಾಗುವವರೆಗೂ ಮುಂದುವರಿಯುತ್ತಿದ್ದು, ಸೆಲ್‌ಗೆ ಬಂದ ಯಾವುದೇ ದೂರುಗಳನ್ನು ತಕ್ಷಣವೇ ಆಯಾ ಕ್ಷೇತ್ರಕ್ಕೆ ವರ್ಗಾಯಿಸಲಾಗುತ್ತದೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ರಚಿಸಲಾಗಿದ್ದು, ದೂರು ಬಂದ ಬಳಿಕ ತಂಡವೊಂದು ಭೇಟಿ ನೀಡಿ ಉಲ್ಲಂಘನೆ ಕುರಿತು ತನಿಖೆ ನಡೆಸುತ್ತದೆ. ಶಾಂತಿಯುತ ಚುನಾವಣೆ ನಡೆಸುವ ಗುರಿ ಹೊಂದಿರುವ ಚುನಾವಣಾ ಆಯೋಗ, ಅಕ್ರಮಗಳನ್ನು ತಡೆಯಲು ಈ ಆ್ಯಪ್ ಬಿಡುಗಡೆ ಮಾಡಿದ್ದು, ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಹಣ ಮತ್ತು ಉಡುಗೊರೆಗಳನ್ನು ನೀಡುತ್ತವೆ. ಇಂತಹ ಅಕ್ರಮಗಳನ್ನು ತಡೆಯಲು  cVIGIL ಆ್ಯಪ್ ಬಿಡುಗಡೆ ಮಾಡಲಾಗಿದೆ. ಜೊತೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಶಾಂತಿಯುತ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ:KS Eshwarappa: ಚುನಾವಣಾ ರಾಜಕೀಯಕ್ಕೆ ಹಿಂದೂ ಫೈರ್ ಬ್ರಾಂಡ್ ಗುಡ್ ​ಬೈ: ಕೆಎಸ್ ಈಶ್ವರಪ್ಪ ರಿಯಾಕ್ಷನ್ ಹೀಗಿದೆ

ಯಾವ ಯಾವ ತರಹದ ದೂರು ದಾಖಲಿಸಬಹುದು

ಸಾರ್ವಜನಿಕರು ಹಣ, ಉಡುಗೊರೆಗಳು, ಕೂಪನ್‌ಗಳು, ಮದ್ಯ, ಪೋಸ್ಟರ್‌ಗಳು, ಅನುಮತಿಯಿಲ್ಲದೆ ಬ್ಯಾನರ್‌ಗಳ ಪ್ರದರ್ಶನ, ಬಂದೂಕು ಬಳಕೆ, ಬೆದರಿಕೆ, ವಾಹನಗಳ ಬಳಕೆ, ಅನುಮತಿಯಿಲ್ಲದ ಬೆಂಗಾವಲು ಪಡೆಗಳು, ಪಾವತಿಸಿದ ಸುದ್ದಿ, ಆಸ್ತಿ ವಿರೂಪಗೊಳಿಸುವಿಕೆ, ನಿಷೇಧದ ಅವಧಿಯಲ್ಲಿ ಪ್ರಚಾರ, ದ್ವೇಷದ ಭಾಷಣಗಳು, ಇತರೆ ಸಂಬಂಧಿಸಿದ ದೂರುಗಳನ್ನು ದಾಖಲಿಸಬಹುದು ಎಂದು ಮಾದರಿ ನೀತಿ ಸಂಹಿತೆ (ಎಂಸಿಸಿ) ನೋಡಲ್ ಅಧಿಕಾರಿ ಯಶಪಾಲ್ ಖಿರ್‌ಸಾಗರ್ TOI ಗೆ ತಿಳಿಸಿದ್ದಾರೆ. ಉಲ್ಲಂಘನೆಗಳ ನಡುವೆ.

ಇನ್ನಷ್ಟು ಚುನಾವಣಾ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:14 am, Wed, 12 April 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?