ಧಾರವಾಡದಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಆ್ಯಪ್‌ ಮೂಲಕ 69 ದೂರು ದಾಖಲು

ಚುನಾವಣಾ ಆಯೋಗ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಅಕ್ರಮ ತಡೆಯಲು ಸಿ ವಿಜಿಲ್ ಆ್ಯಪ್​ ತೆರೆದಿದ್ದು, ಇದೀಗ ಚುನಾವಣಾ ಆಯೋಗದ ಸಿ-ವಿಜಿಲ್(cVIGIL) ಮೊಬೈಲ್ ಆ್ಯಪ್ ಮೂಲಕ ಧಾರವಾಡ ಜಿಲ್ಲೆಯಲ್ಲಿ 69 ದೂರುಗಳು ಬಂದಿವೆ.

ಧಾರವಾಡದಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಆ್ಯಪ್‌ ಮೂಲಕ 69 ದೂರು ದಾಖಲು
ಪ್ರಾತಿನಿಧಿಕ ಚಿತ್ರ
Follow us
|

Updated on:Apr 12, 2023 | 11:16 AM

ಹುಬ್ಬಳ್ಳಿ: ಜಿಲ್ಲಾಡಳಿತವು ಡಿಸಿ ಕಚೇರಿಯಲ್ಲಿ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ(Election) ಅಕ್ರಮ ತಡೆಯಲು ಸಿ ವಿಜಿಲ್ ಆ್ಯಪ್​ ತೆರೆದಿದ್ದು, ಇದೀಗ ಚುನಾವಣಾ ಆಯೋಗದ ಸಿ-ವಿಜಿಲ್(cVIGIL) ಮೊಬೈಲ್ ಆ್ಯಪ್ ಮೂಲಕ ಧಾರವಾಡ ಜಿಲ್ಲೆಯಲ್ಲಿ 69 ದೂರುಗಳು ಬಂದಿವೆ. ಹೆಚ್ಚಿನ ಪ್ರಕರಣಗಳು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ರಾಜಕಾರಣಿಗಳ ಭಾವಚಿತ್ರವಿರುವ ಅನಧಿಕೃತ ಬ್ಯಾನರ್‌ಗಳಿಗೆ ಸಂಬಂಧಿಸಿದೆ. ಮಾದರಿ ನೀತಿ ಸಂಹಿತೆಯ (MCC) ಉಲ್ಲಂಘನೆಗಳನ್ನು ವರದಿ ಮಾಡಲು cVIGIL ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿತ್ತು. ಇನ್ನು ಇದು ಮತದಾನ ಪ್ರಾರಂಭವಾಗುವವರೆಗೂ ಮುಂದುವರಿಯುತ್ತಿದ್ದು, ಸೆಲ್‌ಗೆ ಬಂದ ಯಾವುದೇ ದೂರುಗಳನ್ನು ತಕ್ಷಣವೇ ಆಯಾ ಕ್ಷೇತ್ರಕ್ಕೆ ವರ್ಗಾಯಿಸಲಾಗುತ್ತದೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ರಚಿಸಲಾಗಿದ್ದು, ದೂರು ಬಂದ ಬಳಿಕ ತಂಡವೊಂದು ಭೇಟಿ ನೀಡಿ ಉಲ್ಲಂಘನೆ ಕುರಿತು ತನಿಖೆ ನಡೆಸುತ್ತದೆ. ಶಾಂತಿಯುತ ಚುನಾವಣೆ ನಡೆಸುವ ಗುರಿ ಹೊಂದಿರುವ ಚುನಾವಣಾ ಆಯೋಗ, ಅಕ್ರಮಗಳನ್ನು ತಡೆಯಲು ಈ ಆ್ಯಪ್ ಬಿಡುಗಡೆ ಮಾಡಿದ್ದು, ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಹಣ ಮತ್ತು ಉಡುಗೊರೆಗಳನ್ನು ನೀಡುತ್ತವೆ. ಇಂತಹ ಅಕ್ರಮಗಳನ್ನು ತಡೆಯಲು  cVIGIL ಆ್ಯಪ್ ಬಿಡುಗಡೆ ಮಾಡಲಾಗಿದೆ. ಜೊತೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಶಾಂತಿಯುತ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ:KS Eshwarappa: ಚುನಾವಣಾ ರಾಜಕೀಯಕ್ಕೆ ಹಿಂದೂ ಫೈರ್ ಬ್ರಾಂಡ್ ಗುಡ್ ​ಬೈ: ಕೆಎಸ್ ಈಶ್ವರಪ್ಪ ರಿಯಾಕ್ಷನ್ ಹೀಗಿದೆ

ಯಾವ ಯಾವ ತರಹದ ದೂರು ದಾಖಲಿಸಬಹುದು

ಸಾರ್ವಜನಿಕರು ಹಣ, ಉಡುಗೊರೆಗಳು, ಕೂಪನ್‌ಗಳು, ಮದ್ಯ, ಪೋಸ್ಟರ್‌ಗಳು, ಅನುಮತಿಯಿಲ್ಲದೆ ಬ್ಯಾನರ್‌ಗಳ ಪ್ರದರ್ಶನ, ಬಂದೂಕು ಬಳಕೆ, ಬೆದರಿಕೆ, ವಾಹನಗಳ ಬಳಕೆ, ಅನುಮತಿಯಿಲ್ಲದ ಬೆಂಗಾವಲು ಪಡೆಗಳು, ಪಾವತಿಸಿದ ಸುದ್ದಿ, ಆಸ್ತಿ ವಿರೂಪಗೊಳಿಸುವಿಕೆ, ನಿಷೇಧದ ಅವಧಿಯಲ್ಲಿ ಪ್ರಚಾರ, ದ್ವೇಷದ ಭಾಷಣಗಳು, ಇತರೆ ಸಂಬಂಧಿಸಿದ ದೂರುಗಳನ್ನು ದಾಖಲಿಸಬಹುದು ಎಂದು ಮಾದರಿ ನೀತಿ ಸಂಹಿತೆ (ಎಂಸಿಸಿ) ನೋಡಲ್ ಅಧಿಕಾರಿ ಯಶಪಾಲ್ ಖಿರ್‌ಸಾಗರ್ TOI ಗೆ ತಿಳಿಸಿದ್ದಾರೆ. ಉಲ್ಲಂಘನೆಗಳ ನಡುವೆ.

ಇನ್ನಷ್ಟು ಚುನಾವಣಾ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:14 am, Wed, 12 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ