ಧಾರವಾಡ: ಮಹದಾಯಿ ನೀರಿಗಾಗಿ ಹೋರಾಟ ಮಾಡಿದವರ ಮೇಲೆ ವಾರೆಂಟ್​; ಅನ್ನದಾತರ ಪರದಾಟ

ರಾಜ್ಯದಲ್ಲಿ ಸದ್ಯ ವಿಧಾನಸಭೆ ಚುನಾವಣೆ ಕಾವು ಜೋರಾಗಿ ನಡೆದಿದೆ. ಆದರೆ ಅತ್ತ ಚುನಾವಣೆ ಜೋರಾಗಿ ನಡೆಯುತ್ತಿರುವ ಹೊತ್ತಿನಲ್ಲಿಯೇ ಧಾರವಾಡದಲ್ಲಿ ಮಹದಾಯಿ ನೀರಿಗಾಗಿ ಹೋರಾಟ ಮಾಡಿದ ರೈತರ ಮೇಲೆ ಕಂಡಲ್ಲಿ ಬಂಧಿಸಿ ಕರೆತರುವ ವಾರೆಂಟ್ ಜಾರಿಯಾಗಿದೆ. ಹಾಗಾದ್ರೆ ಏನಿದು ಹೋರಾಟಗಾರರ ಸಂಕಷ್ಟ? ಯಾಕೆ ಬಂಧನದ ವಾರೆಂಟ್ ಬಂದಿದೆ ಅನ್ನೋದರ ಸ್ಟೋರಿ ಇಲ್ಲಿದೆ.

ಧಾರವಾಡ: ಮಹದಾಯಿ ನೀರಿಗಾಗಿ ಹೋರಾಟ ಮಾಡಿದವರ ಮೇಲೆ ವಾರೆಂಟ್​; ಅನ್ನದಾತರ ಪರದಾಟ
ಮಹದಾಯಿ ಹೋರಾಟಗಾರರ ಮೇಲೆ ಅನ್ನದಾತರ ವಾರೆಂಟ್​
Follow us
|

Updated on: Apr 16, 2023 | 7:22 AM

ಧಾರವಾಡ: ಜಿಲ್ಲೆಯ ನವಲಗುಂದ ಭಾಗದಲ್ಲಿ ಮಹದಾಯಿ(Mahadayi) ನೀರಿಗಾಗಿ ಈ ಹಿಂದೆ ದೊಡ್ಡ ಮಟ್ಟದ ಹೋರಾಟಗಳು ನಡೆದಿದ್ದವು. ಯಾವಾಗ ಕರ್ನಾಟಕಕ್ಕೆ ಅನ್ಯಾಯವಾಗಿತ್ತೋ ಆಗ ನವಲಗುಂದದ ರೈತ ಹೋರಾಟಗಾರರು ಬೇರೆ ಬೇರೆ ರೀತಿಯಲ್ಲಿ ಹೋರಾಟಗಳನ್ನು ಮಾಡಿದ್ದರು. ಅದರಲ್ಲಿ ಹೋರಾಟದ ಒಂದು ಭಾಗವಾಗಿ 2016ರಲ್ಲಿ ರೈತ ಹೋರಾಟಗಾರರು ಧಾರವಾಡ ತಾಲೂಕಿನ ಅಮ್ಮಿನಬಾವಿಯಲ್ಲಿರುವ ಹುಬ್ಬಳ್ಳಿ-ಧಾರವಾಡಕ್ಕೆ ಕುಡಿಯುವ ನೀರು ಪೂರೈಸುವ ಜಾಕ್ವೆಲ್ ಬಂದ್ ಮಾಡುವುದಕ್ಕೆ ಮುಂದಾಗಿದ್ದು. ಆದರೆ ಆಗ ರೈತರನ್ನು ಜಾಕ್ವೆಲ್ ಕೇಂದ್ರದ ಗೇಟ್ ಹೊರಗೆ ಪೊಲೀಸರು ತಡೆದಿದ್ದರು. ಆ ವೇಳೆ ರೈತರು ರಸ್ತೆಯಲ್ಲಿಯೇ ಕುಳಿತು ಹೋರಾಟ ಮಾಡಿದ್ದರು. ಅವತ್ತು ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಒಂದು ದೂರು ದಾಖಲಾಗಿತ್ತು. ಸದ್ಯ ಅದೇ ದೂರಿಗೆ ಸಂಬಂಧಿಸಿದಂತೆ ನವಲಗುಂದದ ಐದು ರೈತ ಮುಖಂಡರುಗಳ ಮನೆಗಳಿಗೆ ಪೊಲೀಸರು ಕಂಡಲ್ಲಿ ಬಂಧಿಸಿ ಕರೆತರುವ ಕೋರ್ಟ್ ಆದೇಶ ಇರುವ ನೋಟೀಸ್ ಅಂಟಿಸಿದ್ದಾರೆ. ಮಹದಾಯಿ ಹೋರಾಟದ ಪ್ರಮುಖರಾಗಿರುವ ಲೋಕನಾಥ ಹೆಬಸೂರ, ರಘುನಾಥ ನಡುವಿನಮನಿ, ಚಂದ್ರಶೇಖರ ಪಲ್ಲೇದ, ಗಂಗಾಧರ ಹಡಪದ, ವೀರಣ್ಣ ಮಳಗಿ ಅವರ ಮನೆಗಳಿಗೆ ಈ ನೋಟೀಸ್ ಅಂಟಿಸಲಾಗಿದೆ.

ಇನ್ನು ಇತ್ತೀಚೆಗೆ ಮಹದಾಯಿ ಹೋರಾಟ ಸಂಪೂರ್ಣವಾಗಿ ತಣ್ಣಗಾಗಿದೆ. ಮಹದಾಯಿ ನ್ಯಾಯಾಧೀಕರಣದಿಂದ ಮಧ್ಯಂತರ ತೀರ್ಪು ಬಂದು ಬಳಿಕ ಕ್ರಮೇಣ ಹೋರಾಟ ಕಡಿಮೆಯಾಗುತ್ತ ಬಂದಿದ್ದು, ಈ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಕಾಮಗಾರಿ ಆರಂಭಕ್ಕೆ ಅಸ್ತು ಸಿಗುವುದು ಒಂದೇ ಬಾಕಿ ಇದೆ. ಅಲ್ಲದೇ ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿಯೇ 56 ಪ್ರಕರಣಗಳ ಪೈಕಿ 50 ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಅದಾದ ಬಳಿಕ ಉಳಿದ ಆರು ಕೇಸ್ಗಳನ್ನು ವಾಪಸ್ ಪಡೆದುಕೊಳ್ಳಬಹುದು ಎಂದುಕೊಂಡು ಇವರು ಕೋರ್ಟ್​ಗೂ ಹಾಜರಾಗದೇ ಹಾಗೆಯೇ ಉಳಿದಿದ್ದರು. ಈ ಸರ್ಕಾರದ ಅವಧಿಯಲ್ಲಿ ಉಳಿದ ಕೇಸ್​ಗಳನ್ನ ವಾಪಸ್ ಪಡೆಯುವುದಕ್ಕೆ ರೈತ ಹೋರಾಟಗಾರರು ಸ್ಥಳೀಯ ಶಾಸಕರಿಂದ ಹಿಡಿದು ಸಿಎಂವರೆಗೂ ಒತ್ತಡ ಹಾಕಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ:PM Kisan: ಪಿಎಂ ಕಿಸಾನ್ 14ನೇ ಕಂತು ಯಾವಾಗ? ಹೊಸ ರೈತರು ನೊಂದಾಯಿಸುವುದು ಹೇಗೆ? ಎಲ್ಲಾ ವಿವರ ಇಲ್ಲಿದೆ

ಚುನಾವಣೆ ಸಮಯದಲ್ಲಿಯೇ ಈ ರೀತಿ ನೋಟೀಸ್ ಬಂದಿರುವ ಕಾರಣಕ್ಕೆ ರೈತರು ಈಗ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿಯುವ ಸಾಧ್ಯತೆಗಳೂ ಇವೆ. ಒಂದೆಡೆ ಚುನಾವಣೆಯ ಭದ್ರತೆಯ ದೃಷ್ಟಿಯಿಂದ ಮಹದಾಯಿ ಹೋರಾಟ ಪುನಃ ಆರಂಭಗೊಳ್ಳದಂತೆ ನೋಡಿಕೊಳ್ಳಬೇಕಾದ ಅಗತ್ಯವೂ ಇದ್ದು, ಇದು ಎಲ್ಲಿಗೆ ಬಂದು ನಿಲ್ಲುತ್ತೋ ಅನ್ನೋದನ್ನು ಕಾದು ನೋಡಬೇಕಿದೆ.

ವರದಿ: ನರಸಿಂಹಮೂರ್ತಿ ಪ್ಯಾಟಿ ಟಿವಿ9, ಧಾರವಾಡ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’