AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿರುವ 40 ಪರ್ಸೆಂಟ್ ಸರ್ಕಾರವನ್ನು ಕಿತ್ತೊಗೆಯಬೇಕು, ಅದಕ್ಕಾಗಿ ನಾವು ಇಲ್ಲಿಗೆ ಬಂದಿದ್ದೇವೆ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಕರ್ನಾಟಕದಲ್ಲಿ 40 ಪರ್ಸೆಂಟ್ ಸರ್ಕಾರವಿದೆ. ಅದನ್ನು ಕಿತ್ತೆಸೆಯಬೇಕಿದೆ. ದೆಹಲಿಯಲ್ಲಿ ನಾವೇನು ಮಾಡಿದ್ದೇವೆ ಅಂತ ಜನರಿಗೆ ಗೊತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.

ರಾಜ್ಯದಲ್ಲಿರುವ 40 ಪರ್ಸೆಂಟ್ ಸರ್ಕಾರವನ್ನು ಕಿತ್ತೊಗೆಯಬೇಕು, ಅದಕ್ಕಾಗಿ ನಾವು ಇಲ್ಲಿಗೆ ಬಂದಿದ್ದೇವೆ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್
TV9 Web
| Edited By: ಆಯೇಷಾ ಬಾನು|

Updated on:Mar 04, 2023 | 1:46 PM

Share

ಹುಬ್ಬಳ್ಳಿ: ರಾಜ್ಯದಲ್ಲಿರುವ 40 ಪರ್ಸೆಂಟ್ ಸರ್ಕಾರವನ್ನು ಕಿತ್ತೊಗೆಯಬೇಕು. ಅದಕ್ಕಾಗಿ ನಾವು ಇಲ್ಲಿಗೆ ಬಂದಿದ್ದೇವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಆಮ್ ಆದ್ಮಿ ಪಕ್ಷದ ಬಹಿರಂಗ ಸಭೆಯಲ್ಲಿ ಭಾಗಿಯಾಗಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಕೆಲವೇ ಗಂಟೆಗಳಲ್ಲಿ ದಾವಣಗೆರೆಯತ್ತ ಪ್ರಯಾಣ ಬೆಳೆಸಲಿದ್ದು ಈ ವೇಳೆ ಹೇಳಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ 40 ಪರ್ಸೆಂಟ್ ಸರ್ಕಾರವಿದೆ. ಅದನ್ನು ಕಿತ್ತೆಸೆಯಬೇಕಿದೆ. ದೆಹಲಿಯಲ್ಲಿ ನಾವೇನು ಮಾಡಿದ್ದೇವೆ ಅಂತ ಜನರಿಗೆ ಗೊತ್ತಿದೆ. ದೆಹಲಿ, ಪಂಜಾಬ್​ನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಕರ್ನಾಟಕದಲ್ಲೂ ಪ್ರಾಮಾಣಿಕ ಸರ್ಕಾರ ನೀಡುವ ಗುರಿ ಇದೆ. ಕರ್ನಾಟಕದಲ್ಲಿ ಆಮ್​ ಆದ್ಮಿ ಪಕ್ಷ ಬಲವರ್ಧನೆ ಮಾಡುತ್ತಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಣ್ಣೆ ನಗರಿಯಿಂದ ಚುನಾವಣಾ ಅಖಾಡಕ್ಕೆ ಇಳಿದ ದೆಹಲಿ ಸಿಎಂ, ಇಂದು ಕೇಜ್ರಿವಾಲ್ ದಾವಣಗೆರೆಗೆ ಆಗಮನ

ಇನ್ನು ಇದೇ ವೇಳೆ ಪಂಜಾಬ್ ಸಿಎಂ ಭಗವಂತ್ ಮಾನ್ ಮಾತನಾಡಿದ್ದು, ಕರ್ನಾಟಕದಲ್ಲಿರುವ ರೈತರ ಸಮಸ್ಯೆಯೇ ಪಂಜಾಬ್ ನಲ್ಲಿದೆ. ಕೇಂದ್ರ ಮೂರು ಕೃಷಿ ಕಾಯ್ದೆ ವಾಪಸ್ ತೆಗೆದುಕೊಂಡಿದೆ. ಆದರೆ ಕರ್ನಾಟಕದಲ್ಲಿ ವಾಪಸ್ ಪಡೆದಿಲ್ಲ. ಇಲ್ಲಿನ ರೈತರು ಆತ್ಮಹತ್ಯೆಗೆ ಶರಣಾಗ್ತಿದಾರೆ. ನಾವು ಒಪಿಎಸ್ ಜಾರಿಗೆ ತಂದಿದ್ದೇವೆ. ಇಲ್ಲಿ ಇನ್ನೂ ಒಪಿಎಸ್ ಜಾರಿಗೆ ತಂದಿಲ್ಲ. ಕರ್ನಾಟಕದ ರೈತರ ಸಮಸ್ಯೆಗಳನ್ನ ಎಎಪಿ ಬಗೆಹರಿಸುತ್ತೆ. ಸ್ವಚ್ಛ, ಭ್ರಷ್ಟಾಚಾರ ಮುಕ್ತ ಸರ್ಕಾರ ತರ್ತೇವೆ. ಉಚಿತ ವಿದ್ಯುತ್, ನಿರುದ್ಯೋಗ ನಿವಾರಣೆ, ಕೈಗಾರಿಕೆ ಸ್ಥಾಪನೆಗೆ ಕ್ರಮ ಕೈಗೊಳ್ಳುತ್ತೇವೆ. ಪಂಜಾಬ್ ಮತ್ತು ದೆಹಲಿ ಮಾದರಿಯಲ್ಲಿ ಇಲ್ಲಿಯ ಜನರೂ ಎಎಪಿ ಸರ್ಕಾರ ತರಬೇಕು ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:46 pm, Sat, 4 March 23

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್