AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಪಾಕ್ ನಡುವೆ ಡೊನಾಲ್ಡ್ ಟ್ರಂಪ್ ಮಧ್ಯೆಸ್ಥಿಕೆ ಬಗ್ಗೆ ಜೋಶಿ ಹೇಳಿದ್ದಿಷ್ಟು

ಭಾರತ-ಪಾಕಿಸ್ತಾನದ ನಡುವಿನ ಕದನ ವಿರಾಮ ಘೋಷಣೆ ನಂತರ ಕೆಲವರು ಖುಷಿ ಪಟ್ಟ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಇದರಲ್ಲಿ ಯಾವುದೇ ರೀತಿಯ ಸಂತಸ ಪಡುವುದಲ್ಲಾ. ಇದೊಂದು ದೇಶದ ಭದ್ರತೆ ವಿಚಾರ ಎಂದು ಹೇಳಿದ್ದಾರೆ. ಶಾಸಕ ಮಹೇಶ್ ಟೆಂಗಿನಕಾಯಿ ಪಾಕಿಸ್ತಾನ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಭಾರತ ಪಾಕ್ ನಡುವೆ ಡೊನಾಲ್ಡ್ ಟ್ರಂಪ್ ಮಧ್ಯೆಸ್ಥಿಕೆ ಬಗ್ಗೆ ಜೋಶಿ ಹೇಳಿದ್ದಿಷ್ಟು
ಸಚಿವ ಪ್ರಲ್ಹಾದ್​ ಜೋಶಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on: May 11, 2025 | 2:21 PM

ಹುಬ್ಬಳ್ಳಿ, ಮೇ 11: ಭಾರತ-ಪಾಕಿಸ್ತಾನದ (India-Pakistan) ನಡುವೆ ಮಧ್ಯಸ್ಥಿಕೆಗೆ ರೆಡಿ ಎಂದಿದ್ದ ಟ್ರಂಪ್ ಕೊನೆಗೂ ಪಾಕ್​ಗೆ ಬುದ್ಧಿ ಹೇಳಿದ್ದಾರೆ. ಭಾರತ-ಪಾಕಿಸ್ತಾನದ ನಡುವಿನ ಕದನಕ್ಕೆ ಬ್ರೇಕ್ ಬಿದ್ದಿದೆ ಎಂದು ಟ್ವೀಟ್ ಮೂಲಕ ಘೋಷಿಸಿದ್ದರು. ಭಾರತ-ಪಾಕ್ ಮಧ್ಯೆ ಟ್ರಂಪ್ ಮಧ್ಯೆಸ್ಥಿಕೆ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi), ಕೆಲ ಆಡಳಿತಾತ್ಮಕ ನಿರ್ಧಾರ ಇರುತ್ತವೆ. ಇದರಲ್ಲಿ ನಾನು ಏನು ಹೇಳಲ್ಲ. ವಿದೇಶಾಂಗ ಸಚಿವರು ಈ ಕುರಿತು ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.

ಕದನ ವಿರಾಮ ಘೋಷಣೆ ನಂತರ ಕೆಲವರು ಖುಷಿ ಪಟ್ಟ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದೊಂದು ದೇಶದ ಭದ್ರತೆ ವಿಚಾರ. ಇದರಲ್ಲಿ ಯಾವುದೇ ರೀತಿಯ ಸಂತಸ ಪಡುವುದು ಸರಿಯಲ್ಲ ಎಂದಿದ್ದಾರೆ.

ಪಾಕ್​ಗೆ ಭಾರತ ತಕ್ಕ ಉತ್ತರ ನೀಡಿದೆ

ಭಾರತ ಪಾಕಿಸ್ತಾನ ಯುದ್ಧ ವಿಚಾರವಾಗಿ ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿ ವಿಚಾರವಾಗಿ ಮಾತನಾಡಿದ ಅವರು, ಇದೊಂದು ಪಾಕಿಸ್ತಾನದ ಇಬ್ಬಗೆಯ ನೀತಿ. ಯುದ್ಧ ಆರಂಭವಾದಾಗಿನಿಂದ ಪಾಕ್​ಗೆ ಭಾರತ ತಕ್ಕ ಉತ್ತರ ನೀಡಿದೆ. ವಿಶ್ವ ಮಟ್ಟದಲ್ಲಿ ಕೆಲವು ಕ್ರಮ ಕೈಗೊಳ್ಳಬೇಕಾಗುತ್ತದೆ. ಕದನ ವಿರಾಮ ಬಳಿಕವೂ ಪಾಕ್ ದಾಳಿ ಸರಿಯಾದ ಕ್ರಮವಲ್ಲ. ಪಾಕ್ ಮಿಲಿಟರಿ ಪಡೆ ಸರ್ಕಾರದ ಮಾತು ಕೇಳಲ್ಲ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Image
ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್
Image
7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಯೋಧ!
Image
ರಜೆ ಕ್ಯಾನ್ಸಲ್​ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ
Image
ಕೆಕೆ ಎಕ್ಸ್​ಪ್ರೆಸ್​ ರೈಲಿಗೆ ಹುಸಿ ಬಾಂಬ್​ ಬೆದರಿಕೆ ಕರೆ: ವ್ಯಕ್ತಿ ಬಂಧನ

ಇದನ್ನೂ ಓದಿ: ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್

ಪಾಕಿಸ್ತಾನ ಭಯೋತ್ಪಾದನೆಯನ್ನ ಪೋಷಣೆ ಮಾಡುತ್ತಾ ಇರುತ್ತೆ. ಪಾಕ್​ಗೆ ಪಾಠ ಕಲಿಸಲು ನಮ್ಮ ಸೇನೆಗೆ ಎಲ್ಲಾ ಸ್ವಾತಂತ್ರ್ಯ ನೀಡಲಾಗಿದೆ. ಯುದ್ಧದಲ್ಲಿ ಸಾಕಷ್ಟು ಸಾವು ನೋವು ಸಂಭವಿಸಿವೆ. ನಾವು ಇದರಲ್ಲಿ ಯಾವುದೇ ಕಾರಣಕ್ಕೂ ರಾಜಕಾರಣ ಬೆರೆಸಲ್ಲ. ಪಾಕಿಸ್ತಾನಕ್ಕೆ ಯಾವ ರೀತಿ ಉತ್ತರ ಕೊಡಬೇಕು ಕೊಡಲಾಗಿದೆ ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಪಾಕಿಸ್ತಾನವನ್ನು ನಂಬುವುದಿಲ್ಲ: ಶಾಸಕ ಮಹೇಶ್ ಟೆಂಗಿನಕಾಯಿ

ನಗರದಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದು, ಯುದ್ದಕ್ಕೆ ಬೆಚ್ಚಿಬಿದ್ದ ಪಾಕ್ ಕದನ ವಿರಾಮಕ್ಕೆ ಮನವಿ ಮಾಡಿತ್ತು. ನಮ್ಮ ಪ್ರಧಾನಿ ನರೇಂದ್ರ ಮೋದಿ ಕೂಡ ವಿರಾಮಕ್ಕೆ ಒಪ್ಪಿಗೆ ನೀಡಿದ್ದಾರೆ. ಆದರೆ ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸಿದೆ. ಪಾಕಿಸ್ತಾನವನ್ನು ಯಾವುದೇ ಕಾರಣಕ್ಕೂ ನಂಬುವುದಿಲ್ಲ. ಪಾಕಿಸ್ತಾನ ಯಾವಾಗ ಬೇಕಾದ್ರೂ ಮೋಸ ಮಾಡಬಹುದು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.