AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ ಡಬ್ಲೂಹೆಚ್‍ಓ ತಂಡ

Dharwad News: ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಇಂದು ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕಾರ್ಯಚಟುವಟಿಕೆಗಳು ಹಾಗೂ ಟೆಲಿ ಮಾನಸ ಉಚಿತ ಸಹಾಯವಾಣಿಯ ಉಪಯುಕ್ತತೆಯ ಕುರಿತಾಗಿ ಮಾಹಿತಿಯನ್ನು ಪಡೆದುಕೊಂಡರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ ಡಬ್ಲೂಹೆಚ್‍ಓ ತಂಡ
ಡಬ್ಲೂಹೆಚ್‍ಓ ತಂಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 11, 2023 | 7:57 PM

Share

ಧಾರವಾಡ, ಆಗಸ್ಟ್ 11: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (Health and Family Welfare), ಮಾನಸಿಕ ಆರೋಗ್ಯ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಪರಿಶೀಲಿಸಿದರು. ವಿಶ್ವ ಸಂಸ್ಥೆಯ ಜಿನಿವಾದ ಮೆಂಟಲ್ ಹೆಲ್ತ್ ಎಮರ್ಜೇನ್ಸಿ ಘಟಕದ ಕ್ಲಿನಿಕಲ್ ಸೈಕಲಾಜಿಸ್ಟ್ ಡಾ. ಜೇಮ್ಸ್ ಅಂಡರಹಿಲ್, ಸೈಕಿಯಾಟ್ರಿಸ್ಟ್ ಡಾ. ಸುದಿಪ್ತೂ ಚಟರ್ಜಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕಾರ್ಯಚಟುವಟಿಕೆಗಳನ್ನು ಹಾಗೂ ಟೆಲಿ ಮಾನಸ ಉಚಿತ ಸಹಾಯವಾಣಿಯ ಉಪಯುಕ್ತತೆಯ ಕುರಿತಾಗಿ ಮಾಹಿತಿಯನ್ನು ಪಡೆದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪಾಟೀಲ ಶಶಿ ಅವರು ಮಾನಸಿಕ ಆರೋಗ್ಯ ಕಾರ್ಯಕ್ರಮದ ಬಗ್ಗೆ ವಿವರಿಸಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಮನೋಚೈತನ್ಯ ಕಾರ್ಯಕ್ರಮದಲ್ಲಿ ಉಚಿತ ಚಿಕಿತ್ಸೆ ಶಿಬಿರವನ್ನು ಎಲ್ಲಾ ತಾಲ್ಲೂಕಾ ಆಸ್ಪತ್ರೆಗಳು ಹಾಗೂ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಸುತ್ತಿದ್ದು ಔಷಧಿಗಳ ಸೌಲಭ್ಯವೂ ಕೂಡ ಇದೆ ಎಂದರು.

ಇದನ್ನೂ ಓದಿ: ವಿಮೆ ತಿರಸ್ಕರಿಸಿದ ರಿಲೈನ್ಸ್ ಜನರಲ್ ಇನ್ಶುರೆನ್ಸ್ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಟೆಲಿ ಮಾನಸ ಸೇವೆಯ ಸೌಲಭ್ಯವನ್ನು ಹಾಗೂ ಸಹಾಯವಾಣಿಯನ್ನು 1800-89-14416 ಈ ಟೋಲ್ ಫ್ರೀ ನಂಬರನ್ನು ಸಮುದಾಯದಲ್ಲಿ ಜಾಗ್ರತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಾನಸಿಕ ಆರೋಗ್ಯದ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ. ಎಸ್. ಬಿಕಳಸೂರಮಠ ಅವರು ಈ ಎಲ್ಲಾ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆಂದು ಮಾಹಿತಿ ನೀಡಿದರು.

ಮನೋವೈದ್ಯೆ ಡಾ. ವೈಶಾಲಿ ಎನ್ ಹೆಗಡೆ ಅವರು ಮಾನಸಿಕ ಆರೋಗ್ಯ ಚಟುವಟಿಕೆಗಳ ಕುರಿತಾಗಿ ವರದಿಯನ್ನು ನೀಡಿದರು. ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮ ಚಟುವಟಿಕೆಗಳ ಬಗ್ಗೆ, ಚಿಕಿತ್ಸೆ ಸೌಲಭ್ಯದ ಬಗ್ಗೆ ಹಾಗೂ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹುಬ್ಬಳ್ಳಿಯ ಬೆಂಗೇರಿಯಲ್ಲಿಯೇ ಅತಿ ಹೆಚ್ಚು ತ್ರಿವರ್ಣ ಧ್ವಜ ತಯಾರಿ; ಕಳೆದ ವರ್ಷ 28 ಸಾವಿರಕ್ಕೂ ಅಧಿಕ ರಾಷ್ಟ್ರಧ್ವಜ ಮಾರಾಟ

ವಿಶ್ವ ಆರೋಗ್ಯ ಸಂಸ್ಥೆಯ ತಂಡದವರೂಂದಿಗೆ ನಿಮ್ಹಾನ್ಸ್ ಡಾ. ಸುರೇಶ ಹಾಗೂ ಡಾ. ಮಂಜುನಾಥ ಹಾಗೂ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಡಾ. ಸುಧೀಂದ್ರ ಹುದ್ದಾರ ಮತ್ತು ಡಾ. ಶ್ರೀನಿವಾಸ ಹಾಗೂ ಡಿ.ಎಮ್.ಎಚ್.ಪಿ ಎಲ್ಲಾ ಸಿಬ್ಬಂದಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ