AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸ್ತೀವಿ, ಬಜೆಟ್ನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ -ಸಿಎಂ ಬೊಮ್ಮಾಯಿ

ಹನುಮಂತ ಹುಟ್ಟಿದ್ದು ಕರ್ನಾಟಕದಲ್ಲಿ. ಆತ ಕನ್ನಡ ನಾಡಿನ ವರ ಪುತ್ರ. ಹೊಸಪೇಟೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಈ ಸಾಲಿನ ಬಜೆಟ್ನಲ್ಲಿ 100 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ಬೆಟ್ಟಕ್ಕೆ ರೋಪ್ ವೇ ಇಂದ ಹಿಡಿದು, ಕ್ಷೇತ್ರಕ್ಕೆ ಭೇಟಿ ನೀಡುವ ಜನರ ಅನುಕೂಲಕ್ಕಾಗಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು.

ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸ್ತೀವಿ, ಬಜೆಟ್ನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ -ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ಆಯೇಷಾ ಬಾನು|

Updated on:May 15, 2022 | 10:30 PM

Share

ಧಾರವಾಡ: ಹನುಮನ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ(Anjanadri Hill) ಮೇಲೆ ಗಾಳಿ ಗೋಪುರ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರ ವಾಗಿರುವ ದಾರಾವತಿ ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರ ಆಶೀರ್ವಾದ ಪಡೆದ ನಂತರ ಏರ್ಪಡಿಸಲಾಗಿದ್ದ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಹನುಮಂತ ಹುಟ್ಟಿದ್ದು ಕರ್ನಾಟಕದಲ್ಲಿ. ಆತ ಕನ್ನಡ ನಾಡಿನ ವರ ಪುತ್ರ. ಹೊಸಪೇಟೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಈ ಸಾಲಿನ ಬಜೆಟ್ನಲ್ಲಿ 100 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ಬೆಟ್ಟಕ್ಕೆ ರೋಪ್ ವೇ ಇಂದ ಹಿಡಿದು, ಕ್ಷೇತ್ರಕ್ಕೆ ಭೇಟಿ ನೀಡುವ ಜನರ ಅನುಕೂಲಕ್ಕಾಗಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಈ ಕೆಲಸ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ ಎಂದರು.

ದೇವಸ್ಥಾನಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಪೂರೈಸುವ ಭರವಸೆ ಅಯೋಧ್ಯೆಯಲ್ಲಿ ಶ್ರೀ ರಾಮನ ದೇವಾಲಯ ನಿರ್ಮಿಸಲಾಗುತ್ತಿದ್ದರೆ, ಇಲ್ಲಿ ಆಂಜನೇಯನ ದೇವಸ್ಥಾನದ ಅಭಿವೃದ್ಧಿಯಾಗುತ್ತಿದೆ. ಈ ರಾಜ್ಯದ ಸೇವೆ ಮಾಡುವ ದೊಡ್ಡ ಅವಕಾಶ ಲಭಿಸುವಲ್ಲಿ ಹುಬ್ಬಳ್ಳಿ ಜನರ ಹಾಗೂ ಶಿಗ್ಗಾವಿ ಕ್ಷೇತ್ರದ ಜನರ ಆಶೀರ್ವಾದ ಇದೆ ಎಂದರು. ಜನರು ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬರದ ರೀತಿಯಲ್ಲಿ ನಡೆದುಕೊಳ್ಳುವುದಾಗಿ ತಿಳಿಸಿ ಕನ್ನಡ ನಾಡಿನ ಸೇವೆಯನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುವುದಾಗಿ ಹೇಳಿದರು. ದೇವಸ್ಥಾನದ ಹಾಗೂ ಸುತ್ತಲಿನ ಬಡಾವಣೆಗೆ ಸಂಬಂಧಿಸಿದಂತೆ ಮಾಡಿರುವ ಬೇಡಿಕೆಯನ್ನು ಪರಿಗಣಿಸಿ, ಅಗತ್ಯವಿರುವ ಕಾನೂನಿನ ಬದಲಾವಣೆ ತಂದು ಅನುಕೂಲ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಮಕ್ಕಳಿಗೆ ವಿದ್ಯೆ ನೀಡಲು ಕಿವಿಮಾತು ಗೋಕುಲದಲ್ಲಿ ಈ ಪುಣ್ಯದ ಕೆಲಸ ಮಾಡಿರುವುದಕ್ಕೆ ಅಭಿನಂದನೆಗಳನ್ನು ತಿಳಿಸಿದ ಸಿಎಂ, ಗೋಕುಲ ಗ್ರಾಮದ ಪ್ರತಿ ಮನೆಗೂ ಭೇಟಿ ನೀಡಿರುವುದನ್ನು ಮೆಲುಕು ಹಾಕಿದರು. ಗೋಕುಲ ಅತ್ಯಂತ ಕ್ರಿಯಾಶೀಲ ಗ್ರಾಮ. ಕಿರ್ಲೋಸ್ಕರ್ ಕಂಪನಿ ಬಂದ ನಂತರ ಗೋಕುಲ ಗ್ರಾಮದ ಪ್ರತಿ ಮನೆಯವರು ಕಿರ್ಲೋಸ್ಕರ್ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ದುಡಿಮೆಯನ್ನು ನಂಬಿರುವ ದೊಡ್ಡ ಯುವಕರ ಪಡೆ ಇಲ್ಲಿದೆ. 21ನೇ ಶತಮಾನ ಜ್ಞಾನದ ಶತಮಾನ. ಮಕ್ಕಳಿಗೆ ವಿದ್ಯೆ ನೀಡಿದರೆ ಅವರು ಜೀವನದಲ್ಲಿ ಮುಂದೆ ಬರುತ್ತಾರೆ. ಈ ಬಗ್ಗೆ ಲಕ್ಷ್ಯ ನೀಡಬೇಕೆಂದು ಕಿವಿ ಮಾತು ಹೇಳಿದರು.

ಧಾರವಾಡದ ಇತರೆ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದುಡಿಮೆಯಿಂದ ಕಟ್ಟಿರುವ ದೇವಸ್ಥಾನದಲ್ಲಿ ಬೇಡಿದ್ದು ದೊರಕುತ್ತದೆ ಮನಸ್ಸಿನಲ್ಲಿರುವುದನ್ನು ತಿಳಿದು ವರ ಕೊಡುವುದು ಹನುಮ ದೇವರ ವೈಶಿಷ್ಟ್ಯ. ಹನುಮನಿಗೆ ಶ್ರದ್ದಾ ಭಕ್ತಿಯಿಂದ ನಡೆದುಕೊಂಡರೆ ಸಾಕು.ಕೇಳದೆ ಪಡೆಯುವ ಮನೋಶಕ್ತಿ ಇರಬೇಕು. ದುಡಿಮೆ, ಬೆವರಿನಿಂದ ಕಟ್ಟಿರುವ ದೇವಸ್ಥಾನದಲ್ಲಿ ಬೇಡಿದ್ದು ದೊರಕುತ್ತದೆ ಎಂದರು.

ತಮ್ಮ ಸಾರ್ವಜನಿಕ ಜೀವನದ ಮೊದಲ ಭಾಷಣವನ್ನು ಗೋಕುಲದಲ್ಲಿ ಮಾಡಿದ್ದಾಗಿ ಮುಖ್ಯ ಮಂತ್ರಿಗಳು ಸ್ಮರಿಸಿದರು. ಅಲ್ಲಿಂದ ಪ್ರಾರಂಭವಾಗಿದ್ದು ಮಾತನಾಡುವುದನ್ನು ನಿಲ್ಲಿಸಿಲ್ಲ ಎಂದರು. ಗೋಕುಲದಲ್ಲಿನ ಹಲವಾರು ಘಟನೆಗಳನ್ನು ಮೆಲುಕು ಹಾಕಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಕಲ್ಪ ಪುರುಷರು. ಹಲವಾರು ವರ್ಷಗಳು ಆಗದಿದ್ದ ಅಭಿವೃದ್ಧಿಯನ್ನು ಭಾರತ ದೇಶದಲ್ಲಿ ಸಾಧ್ಯವಾಗಿಸಿದ್ದಾರೆ. ಅವರ ಪ್ರಯತ್ನ ದಿಂದಾಗಿ ಅಯೋಧ್ಯೆಯಲ್ಲಿರುವ ದೇವಸ್ಥಾನದ ನಿರ್ಮಾಣ, ಸರ್ವರಿಗೂ ಒಪ್ಪಿಗೆಯಾಗುವ ರೀತಿಯಲ್ಲಿ ಶ್ರೀ ರಾಮನ ದೇವಸ್ಥಾನ ಅದ್ಭುತವಾಗಿ ನಿರ್ಮಾಣವಾಗುತ್ತಿದೆ. ಕಾಶಿ ವಿಶ್ವನಾಥನ ಅಭಿವೃದ್ಧಿಯನ್ನು ನಾವು ಅಲ್ಲಿಗೆ ಭೇಟಿ ನೀಡಿಯೇ ನೋಡಬೇಕು ಎಂದರು.

ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಶಾಸಕ ಅರವಿಂದ ಬೆಲ್ಲದ, ಹು- ಧಾ ಮಾಜಿ ಮೇಯರ ಅನಿಲಕುಮಾರ ಪಾಟೀಲ, ಹು ಧಾ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿ ಮಠ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

Published On - 10:30 pm, Sun, 15 May 22

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ