AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ಕೊಟ್ಟರೆ ನಾಳೆಯೇ ಕೆಲಸ ಆರಂಭ: ಶಾಸಕ ಎನ್​ಹೆಚ್​ ಕೋನರೆಡ್ಡಿ

ನಾವು ಮಹದಾಯಿ ಯೋಜನೆ ಜಾರಿ ಆಗಲಿ ಎನ್ನುವವರು. ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಸಚಿವ ಪ್ರಲ್ಹಾದ್​​​ ಜೋಶಿ ಆತ್ಮೀಯರು. ಯೋಜನೆಗೆ ಅನುಮತಿ ಕೊಡಿಸುವುದು ಅವರಿಗೆ ದೊಡ್ಡ ಕೆಲಸವಲ್ಲ. ಒಂದು ವೇಳೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ಕೊಟ್ಟರೆ ನಾಳೆಯೇ ಕೆಲಸ ಆರಂಭವಾಗಲಿದೆ ಎಂದು ನವಲಗುಂದ ಶಾಸಕ ಎನ್.ಹೆಚ್.ಕೋನರೆಡ್ಡಿ ಹೇಳಿದ್ದಾರೆ.

ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ಕೊಟ್ಟರೆ ನಾಳೆಯೇ ಕೆಲಸ ಆರಂಭ: ಶಾಸಕ ಎನ್​ಹೆಚ್​ ಕೋನರೆಡ್ಡಿ
ಶಾಸಕ ಎನ್.ಹೆಚ್.ಕೋನರೆಡ್ಡಿ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 10, 2023 | 6:55 PM

ಧಾರವಾಡ, ಆಗಸ್ಟ್​ 10: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ಕೊಟ್ಟರೆ ನಾಳೆಯೇ  ಕೆಲಸ ಆರಂಭವಾಗಲಿದೆ ಎಂದು ನವಲಗುಂದ ಶಾಸಕ ಎನ್.ಹೆಚ್.ಕೋನರೆಡ್ಡಿ (NH Konaraddi)  ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮಹದಾಯಿ ಯೋಜನೆ ಜಾರಿ ಆಗಲಿ ಎನ್ನುವವರು. ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಸಚಿವ ಪ್ರಲ್ಹಾದ್​​​ ಜೋಶಿ ಆತ್ಮೀಯರು. ಯೋಜನೆಗೆ ಅನುಮತಿ ಕೊಡಿಸುವುದು ಅವರಿಗೆ ದೊಡ್ಡ ಕೆಲಸವಲ್ಲ ಎಂದಿದ್ದಾರೆ.

ಕ್ರೆಡಿಟ್ ಬೇಕಾದರೆ ನೀವೇ ತೆಗೆದುಕೊಳ್ಳಿ ಎಂದ ಎನ್.ಹೆಚ್.ಕೋನರೆಡ್ಡಿ

ರಾಜ್ಯದ ಹಿತಕ್ಕಾಗಿ ಅನುಮತಿ ಕೊಡಿಸಬೇಕು. ಬೇಕಾದರೆ ಅದರ ಕ್ರೆಡಿಟ್​ನ್ನು ನೀವೇ ತೆಗೆದುಕೊಳ್ಳಿ. ಲೋಕಸಭಾ ಚುನಾವಣೆ ಮೊದಲು ಇದನ್ನು ಮಾಡಲಿ. ಗೋವಾ ಆಟ ಈಗ ಏನು ನಡೆಯೋದಿಲ್ಲ. ಮಹದಾಯಿ‌ ನ್ಯಾಯಾಧೀಕರಣ‌ದ ತೀರ್ಪು‌ ನಮ್ಮಂತೆ ಆಗಿದೆ ಎಂದರು.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ವೇಳೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣ ಹಿಂಪಡೆಯಲು ಸಂಪುಟ ನಿರ್ಧಾರ

ಅನುಮತಿ ಸಿಕ್ಕ ತಕ್ಷಣ ಕಾಮಗಾರಿ‌ ಶುರು

ಸುಪ್ರೀಂ ಕೋರ್ಟ್ ಆದೇಶದಂತೆ ಅಧಿಸೂಚನೆ ಹೊರಡಿಸಿದ್ದೇವೆ. ಡಿಪಿಆರ್‌ಗೆ ಅನುಮತಿ ಆಗಿದೆ. ಕೇಂದ್ರದ‌ ಅನುಮತಿ ಸಿಕ್ಕ ತಕ್ಷಣ ಕಾಮಗಾರಿ‌ ಶುರುವಾಗುವುದು ಮಾತ್ರ ಬಾಕಿ ಇದೆ. ನಾವು ನ್ಯಾಯಾಧೀಕರಣಕ್ಕೆ 33.46 ಟಿಎಂಸಿ‌ ನೀರು ಕೇಳಿದ್ದೇವೆ. ಆದರೆ ನಮಗೆ ಕೊಟ್ಟಿದ್ದು 13.46 ಟಿಎಂಸಿ. ಹೆಚ್ಚು ನೀರು‌‌ ಪಡೆಯಲು ನಾವು ಟ್ರಿಬ್ಯುನಲ್ ಎದುರು ಹೋರಾಟ ಮಾಡಲೇ‌ಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆಗೆ ಸಚಿವರ ಸೂಚನೆ, ಸಮಿತಿ ವರದಿ ನಂತರವೇ ನಿರ್ಧಾರ ಎಂದ ಡಿಕೆ ಶಿವಕುಮಾರ್

ಬಿಜೆಪಿ ನಾಯಕರ ಆರೋಪ ಎದುರಿಸಲು ನಾವು ಗಟ್ಟಿಯಾಗಿದ್ದೇವೆ

ಗುತ್ತಿಗೆದಾರರಿಂದ ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಕಮಿಷನ್​ ಆರೋಪ ವಿಚಾರವಾಗಿ ಅವರು ಮಾತನಾಡಿ, ಅಧಿಕಾರಕ್ಕೆ ಬಂದು 2 ತಿಂಗಳಾಯ್ತು, ಇನ್ನೂ ಯಾವ ಟೆಂಡರ್​ ಕರೆದಿಲ್ಲ. ಬಿಜೆಪಿ ನಾಯಕರ ಆರೋಪ ಎದುರಿಸಲು ನಾವು ಗಟ್ಟಿಯಾಗಿದ್ದೇವೆ ಎಂದರು.

ಡಿಕೆ ಶಿವಕುಮಾರ್​ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಬಿಜೆಪಿಗೆ ಹೊಟ್ಟೆಕಿಚ್ಚು. ಡಿಸಿಎಂ ಬ್ರ್ಯಾಂಡ್ ಬೆಂಗಳೂರು ಎಂದು ಮಾಡುತ್ತಿದ್ದಾರೆ. ಅದನ್ನು ನೋಡಿ ಇವರು ಆರೋಪ ಮಾಡುತ್ತಿದ್ದಾರೆ. ಕೃಷಿ ಸಚಿವರ ಮೇಲಿನ ಆರೋಪ ಸುಳ್ಳು ಎಂದು ಸಾಬೀತಾಗಿದೆ. ನಕಲಿ ಪತ್ರ ಎಂದು ಕೃಷಿ ಅಧಿಕಾರಿಗಳೇ ಹೇಳಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ