ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ಕೊಟ್ಟರೆ ನಾಳೆಯೇ ಕೆಲಸ ಆರಂಭ: ಶಾಸಕ ಎನ್​ಹೆಚ್​ ಕೋನರೆಡ್ಡಿ

ನಾವು ಮಹದಾಯಿ ಯೋಜನೆ ಜಾರಿ ಆಗಲಿ ಎನ್ನುವವರು. ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಸಚಿವ ಪ್ರಲ್ಹಾದ್​​​ ಜೋಶಿ ಆತ್ಮೀಯರು. ಯೋಜನೆಗೆ ಅನುಮತಿ ಕೊಡಿಸುವುದು ಅವರಿಗೆ ದೊಡ್ಡ ಕೆಲಸವಲ್ಲ. ಒಂದು ವೇಳೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ಕೊಟ್ಟರೆ ನಾಳೆಯೇ ಕೆಲಸ ಆರಂಭವಾಗಲಿದೆ ಎಂದು ನವಲಗುಂದ ಶಾಸಕ ಎನ್.ಹೆಚ್.ಕೋನರೆಡ್ಡಿ ಹೇಳಿದ್ದಾರೆ.

ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ಕೊಟ್ಟರೆ ನಾಳೆಯೇ ಕೆಲಸ ಆರಂಭ: ಶಾಸಕ ಎನ್​ಹೆಚ್​ ಕೋನರೆಡ್ಡಿ
ಶಾಸಕ ಎನ್.ಹೆಚ್.ಕೋನರೆಡ್ಡಿ
Edited By:

Updated on: Aug 10, 2023 | 6:55 PM

ಧಾರವಾಡ, ಆಗಸ್ಟ್​ 10: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ಕೊಟ್ಟರೆ ನಾಳೆಯೇ  ಕೆಲಸ ಆರಂಭವಾಗಲಿದೆ ಎಂದು ನವಲಗುಂದ ಶಾಸಕ ಎನ್.ಹೆಚ್.ಕೋನರೆಡ್ಡಿ (NH Konaraddi)  ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮಹದಾಯಿ ಯೋಜನೆ ಜಾರಿ ಆಗಲಿ ಎನ್ನುವವರು. ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಸಚಿವ ಪ್ರಲ್ಹಾದ್​​​ ಜೋಶಿ ಆತ್ಮೀಯರು. ಯೋಜನೆಗೆ ಅನುಮತಿ ಕೊಡಿಸುವುದು ಅವರಿಗೆ ದೊಡ್ಡ ಕೆಲಸವಲ್ಲ ಎಂದಿದ್ದಾರೆ.

ಕ್ರೆಡಿಟ್ ಬೇಕಾದರೆ ನೀವೇ ತೆಗೆದುಕೊಳ್ಳಿ ಎಂದ ಎನ್.ಹೆಚ್.ಕೋನರೆಡ್ಡಿ

ರಾಜ್ಯದ ಹಿತಕ್ಕಾಗಿ ಅನುಮತಿ ಕೊಡಿಸಬೇಕು. ಬೇಕಾದರೆ ಅದರ ಕ್ರೆಡಿಟ್​ನ್ನು ನೀವೇ ತೆಗೆದುಕೊಳ್ಳಿ. ಲೋಕಸಭಾ ಚುನಾವಣೆ ಮೊದಲು ಇದನ್ನು ಮಾಡಲಿ. ಗೋವಾ ಆಟ ಈಗ ಏನು ನಡೆಯೋದಿಲ್ಲ. ಮಹದಾಯಿ‌ ನ್ಯಾಯಾಧೀಕರಣ‌ದ ತೀರ್ಪು‌ ನಮ್ಮಂತೆ ಆಗಿದೆ ಎಂದರು.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ವೇಳೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣ ಹಿಂಪಡೆಯಲು ಸಂಪುಟ ನಿರ್ಧಾರ

ಅನುಮತಿ ಸಿಕ್ಕ ತಕ್ಷಣ ಕಾಮಗಾರಿ‌ ಶುರು

ಸುಪ್ರೀಂ ಕೋರ್ಟ್ ಆದೇಶದಂತೆ ಅಧಿಸೂಚನೆ ಹೊರಡಿಸಿದ್ದೇವೆ. ಡಿಪಿಆರ್‌ಗೆ ಅನುಮತಿ ಆಗಿದೆ. ಕೇಂದ್ರದ‌ ಅನುಮತಿ ಸಿಕ್ಕ ತಕ್ಷಣ ಕಾಮಗಾರಿ‌ ಶುರುವಾಗುವುದು ಮಾತ್ರ ಬಾಕಿ ಇದೆ. ನಾವು ನ್ಯಾಯಾಧೀಕರಣಕ್ಕೆ 33.46 ಟಿಎಂಸಿ‌ ನೀರು ಕೇಳಿದ್ದೇವೆ. ಆದರೆ ನಮಗೆ ಕೊಟ್ಟಿದ್ದು 13.46 ಟಿಎಂಸಿ. ಹೆಚ್ಚು ನೀರು‌‌ ಪಡೆಯಲು ನಾವು ಟ್ರಿಬ್ಯುನಲ್ ಎದುರು ಹೋರಾಟ ಮಾಡಲೇ‌ಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆಗೆ ಸಚಿವರ ಸೂಚನೆ, ಸಮಿತಿ ವರದಿ ನಂತರವೇ ನಿರ್ಧಾರ ಎಂದ ಡಿಕೆ ಶಿವಕುಮಾರ್

ಬಿಜೆಪಿ ನಾಯಕರ ಆರೋಪ ಎದುರಿಸಲು ನಾವು ಗಟ್ಟಿಯಾಗಿದ್ದೇವೆ

ಗುತ್ತಿಗೆದಾರರಿಂದ ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಕಮಿಷನ್​ ಆರೋಪ ವಿಚಾರವಾಗಿ ಅವರು ಮಾತನಾಡಿ, ಅಧಿಕಾರಕ್ಕೆ ಬಂದು 2 ತಿಂಗಳಾಯ್ತು, ಇನ್ನೂ ಯಾವ ಟೆಂಡರ್​ ಕರೆದಿಲ್ಲ. ಬಿಜೆಪಿ ನಾಯಕರ ಆರೋಪ ಎದುರಿಸಲು ನಾವು ಗಟ್ಟಿಯಾಗಿದ್ದೇವೆ ಎಂದರು.

ಡಿಕೆ ಶಿವಕುಮಾರ್​ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಬಿಜೆಪಿಗೆ ಹೊಟ್ಟೆಕಿಚ್ಚು. ಡಿಸಿಎಂ ಬ್ರ್ಯಾಂಡ್ ಬೆಂಗಳೂರು ಎಂದು ಮಾಡುತ್ತಿದ್ದಾರೆ. ಅದನ್ನು ನೋಡಿ ಇವರು ಆರೋಪ ಮಾಡುತ್ತಿದ್ದಾರೆ. ಕೃಷಿ ಸಚಿವರ ಮೇಲಿನ ಆರೋಪ ಸುಳ್ಳು ಎಂದು ಸಾಬೀತಾಗಿದೆ. ನಕಲಿ ಪತ್ರ ಎಂದು ಕೃಷಿ ಅಧಿಕಾರಿಗಳೇ ಹೇಳಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us