AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಆಪ್ತ ಸೋಮು ನ್ಯಾಮಗೌಡಗೆ 14 ದಿನಗಳ ನ್ಯಾಯಾಂಗ ಕಸ್ಟಡಿ

ನ್ಯಾಯಾಲಯದ ಆದೇಶದ ನಂತರ ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡ ಅವರನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಕಾರಿನಲ್ಲಿ ಕರೆದೊಯ್ದರು. ಸೋಮುರನ್ನು ಭೇಟಿಯಾಗಿ ಮಾತಾಡಲು ಉಪನಗರ ಠಾಣೆ ಬಳಿಗೆ ಸಂಬಂಧಿಕರು ಆಗಮಿಸಿದ್ದರು.

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಆಪ್ತ ಸೋಮು ನ್ಯಾಮಗೌಡಗೆ 14 ದಿನಗಳ ನ್ಯಾಯಾಂಗ ಕಸ್ಟಡಿ
ಸೋಮು ನ್ಯಾಮಗೌಡ
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Jul 09, 2021 | 11:06 PM

Share

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ ಅಧಿಕಾರಿಗಳಿಂದ ಗುರುವಾರ ಬಂಧನಕ್ಕೊಳಗಾಗಿದ್ದ ಸೋಮು ನ್ಯಾಮಗೌಡ ಅವರನ್ನು ಎರಡು ವಾರಗಳ ಅವಧಿಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ. ಅವರನ್ನು ಶುಕ್ರವಾರದಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜನ ಪ್ರತಿನಿಧಿಗಳ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು.

ಇದೇ ಪ್ರಕರಣದಲ್ಲಿ ಸಿಬಿಐನಿಂದ ಕಳೆದ ನವೆಂಬರ್ 5 ರಂದು ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಆಪ್ತ ಸಹಾಯಕನಾಗಿರುವ ಸೋಮು ನ್ಯಾಮಗೌಡ ಅವರನ್ನು ಗುರುವಾರದಂದು ಗದಗನಲ್ಲಿ ಸಿಬಿಐ ಬಂಧಿಸಿತ್ತು. ನಂತರ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜನ ಪ್ರತಿನಿಧಿಗಳ ನ್ಯಾಯಾಲಯದ ಎದುರು ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಯನ್ನು ಕೇಳಿತ್ತು. ನ್ಯಾಯಾಲಯವು ನ್ಯಾಮಗೌಡ ಅವರನ್ನು ಒಂದು ದಿನ ಮಟ್ಟಿಗೆ ಸಿಬಿಐ ವಶಕ್ಕೆ ಒಪ್ಪಿಸಿತ್ತು. ಇಂದು (ಶುಕ್ರವಾರ) ಅವರ ಕಸ್ಟಡಿ ಅವಧಿ ಮುಗಿದಿದ್ದರಿಂದ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು.

ನ್ಯಾಯಾಲಯದ ಆದೇಶದ ನಂತರ ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡ ಅವರನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಕಾರಿನಲ್ಲಿ ಕರೆದೊಯ್ದರು. ಸೋಮುರನ್ನು ಭೇಟಿಯಾಗಿ ಮಾತಾಡಲು ಉಪನಗರ ಠಾಣೆ ಬಳಿಗೆ ಸಂಬಂಧಿಕರು ಆಗಮಿಸಿದ್ದರು.

ಹಾಗೆಯೇ, ಸಿಬಿಐನಿಂದ ಯೋಗೀಶ್‌ ಪತ್ನಿ ಮಲ್ಲಮ್ಮ ಅವರ ವಿಚಾರಣೆ ಅಂತ್ಯಗೊಂಡಿದೆ. ಅಧಿಕಾರಿಗಳು ಮಲ್ಲಮ್ಮ ಅವರನ್ನು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರದಂದು ಸತತವಾಗಿ ಎರಡನೇ ದಿನ ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ವಿಚಾರಣೆ ಮುಗಿದ ನಂತರ ಮಲ್ಲಮ್ಮ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಏತನ್ಮಧ್ಯೆ, ಜಾಮೀನು ಸುಪ್ರೀಮ್ ಕೋರ್ಟ್​ನಲ್ಲಿ ಜಾಮೀನು ಕೋರಿ ವಿನಯ ಕುಲಕರ್ಣಿ ಅವರು ಸಲ್ಲಿಸಿದ್ದ ಮನವಿಯ ವಿಚಾರಣೆ ಜುಲೈ 26 ಕ್ಕೆ ಮುಂದೂಡಿಕೆಯಾಗಿದೆ. ಗುರುವಾರದಂದು ನ್ಯಾಯಮೂರ್ತಿ ಉದಯ ಲಲಿತ್ ಅವರ ನೇತೃತ್ವದ ಪೀಠವು ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ: ವಿನಯ್ ಕುಲಕರ್ಣಿ ಆಪ್ತ, ಕೆಎಎಸ್​ ಸೋಮು ನ್ಯಾಮಗೌಡ ಬಂಧನದ ಹಿಂದಿದೆ ಸಿಬಿಐ ಮಾಸ್ಟರ್​​ ಪ್ಲಾನ್; ಕೇಸು ಮತ್ತಷ್ಟು ಬಿಗಿ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು