AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ನೆತ್ತರಿನಲ್ಲಿ ಪತ್ರ! ಭಗತ್ ಸಿಂಗ್ ಅಭಿಮಾನಕ್ಕೆ ಜನ್ಮ ದಿನದಂದು ರಕ್ತ ಹರಿಸಿದ ಹುಬ್ಬಳ್ಳಿಯ ಯುವಕ

Bhagat Singh: ಇಂದಿನ ಯುವಕರು ಬರ್ಥ್​ಡೆ ಸೆಲೆಬ್ರೇಷನ್ ಅಂದ್ರೆ ಕೇಕ್ ಕತ್ತರಿಸುವುದು, ದುಂದು ವೆಚ್ಚ ಮಾಡುವ ಮೂಲಕ ಮೋಜು ಮಸ್ತಿ ಮಾಡುವುದನ್ನು ನೋಡಿದ್ದೇವೆ. ಆದರೆ ಈ ಅಭಿಮಾನಿ ಕ್ರಾಂತಿವೀರ ಭಗತಸಿಂಗ್ ಅವರ ಮೇಲಿನ ಅಪಾರ ಅಭಿಮಾನದಿಂದ ಹಾಗೂ ಮುಂಬರುವ ಪೀಳಿಗೆಗೆ ಭಗತಸಿಂಗ್ ಅವರನ್ನು ಪರಿಚಯಿಸುವ ಸದುದ್ದೇಶದಿಂದ ಇಂತಹ ಕಾರ್ಯಕ್ಕೆ ಮುಂದಾಗಿದ್ದಾರೆ.

ಪ್ರಧಾನಿ ಮೋದಿಗೆ ನೆತ್ತರಿನಲ್ಲಿ ಪತ್ರ! ಭಗತ್ ಸಿಂಗ್ ಅಭಿಮಾನಕ್ಕೆ ಜನ್ಮ ದಿನದಂದು ರಕ್ತ ಹರಿಸಿದ ಹುಬ್ಬಳ್ಳಿಯ ಯುವಕ
ಪ್ರಧಾನಿ ಮೋದಿಗೆ ನೆತ್ತರಿನಲ್ಲಿ ಪತ್ರ! ಭಗತ್ ಸಿಂಗ್ ಅಭಿಮಾನಕ್ಕೆ ಜನ್ಮ ದಿನದಂದು ರಕ್ತ ಹರಿಸಿದ ಹುಬ್ಬಳ್ಳಿಯ ಯುವಕ
TV9 Web
| Updated By: ಸಾಧು ಶ್ರೀನಾಥ್​|

Updated on: Apr 04, 2022 | 5:17 PM

Share

ಆತ ಒಬ್ಬ ಮಹಾನ್‌ ವ್ಯಕ್ತಿಯನ್ನು ರೋಲ್ ಮಾಡೆಲ್ ಆಗಿ ಇಟ್ಟುಕೊಂಡ ಅಭಿಮಾನಿ. ತನ್ನ ಹುಟ್ಟು ಹಬ್ಬಕ್ಕೆ ತನ್ನ ಆ ಅಭಿಮಾನವನ್ನು ವಿನೂತನವಾಗಿ ವ್ಯಕ್ತಪಡಿಸಿದ್ದಾನೆ. ಆತನ ಕಾರ್ಯ ನಿಜಕ್ಕೂ ಹುಬ್ಬಳ್ಳಿಯ ಕೀರ್ತಿಯನ್ನು ಮತ್ತಷ್ಟು ಇಮ್ಮಡಿಗೊಳಿಸುವುದು ಖಂಡಿತ. ಹೌದು.‌ ಹುಬ್ಬಳ್ಳಿಯ (Hubballi) ಯುವಕನೊಬ್ಬ ತನ್ನ ರಕ್ತದಲ್ಲಿ ಪತ್ರ ಬರೆದು ಸುದ್ದಿಯಾಗಿದ್ದಾನೆ.‌ ಅಂದಹಾಗೇ ಭಗತಸಿಂಗ್ ಯುವಕ ಮಂಡಳದ ಅಧ್ಯಕ್ಷರಾದ ಶ್ರೀಧರ ಸಾಂಗ್ಲಿಕರ್ ಎಂಬುವವರೇ ತಮ್ಮ ಜನ್ಮದಿನದ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವುದು. ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಹೊಸೂರಿನ ಗಾಳಿ ದುರ್ಗಮ್ಮ ದೇವಿಯ ದೇವಸ್ಥಾನದ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತಸಿಂಗ್ ಅವರ (Bhagat Singh) ಪುತ್ಥಳಿಯನ್ನು ನಿರ್ಮಾಣ ಮಾಡಬೇಕು ಎಂಬ ಮಹದಾಸೆಯಿದೆ. ಆದ್ರೆ ಅದು ಇಲ್ಲಿಯತನಕ ಸಾಧ್ಯವಾಗಿಲ್ಲ. ಇಲ್ಲಿನ ಸ್ಥಳೀಯ ಮಹಾನಗರ ಪಾಲಿಕೆಗೆ ಸಾಕಷ್ಟು ಬಾರಿ ಮನವಿ‌‌ ಮಾಡಿದ್ದರೂ ಭಗತ್ ಸಿಂಗ್ ಪುತ್ಥಳಿ ನಿರ್ಮಾಣ‌ ಮಾಡಿಲ್ಲವಂತೆ.‌ ಹೀಗಾಗೇ ಇದರಿಂದ‌‌ ನೊಂದಿರೋ ಈತ ತನ್ನ ನೆಚ್ಚಿನ‌ ಸ್ವಾತಂತ್ರ್ಯ ಯೋಧನ ಪುತ್ಥಳಿಯನ್ನ‌‌ ನಿರ್ಮಾಣ ಮಾಡಿಕೊಡಿ ಅಂತಾ ಪ್ರಧಾನಿ‌ ಮೋದಿಗೆ ತನ್ನ ರಕ್ತದಲ್ಲಿಯೇ ಪತ್ರ ಬರೆದಿದ್ದಾ‌ನೆ (Blood Letter)!

ಇಂದಿನ ಯುವಕರು ಬರ್ಥ್​ಡೆ ಸೆಲೆಬ್ರೇಷನ್ ಅಂದ್ರೆ ಕೇಕ್ ಕತ್ತರಿಸುವುದು, ದುಂದು ವೆಚ್ಚ ಮಾಡುವ ಮೂಲಕ ಮೋಜು ಮಸ್ತಿ ಮಾಡುವುದನ್ನು ನೋಡಿದ್ದೇವೆ. ಆದರೆ ಈ ಅಭಿಮಾನಿ ಕ್ರಾಂತಿವೀರ ಭಗತಸಿಂಗ್ ಅವರ ಮೇಲಿನ ಅಪಾರ ಅಭಿಮಾನದಿಂದ ಹಾಗೂ ಮುಂಬರುವ ಪೀಳಿಗೆಗೆ ಭಗತಸಿಂಗ್ ಅವರನ್ನು ಪರಿಚಯಿಸುವ ಸದುದ್ದೇಶದಿಂದ ಇಂತಹ ಕಾರ್ಯಕ್ಕೆ ಮುಂದಾಗಿದ್ದಾರೆ. ಈಗಾಗಲೇ ಗಾಳಿ ದುರ್ಗಮ್ಮ ದೇವಿಯ ದೇವಸ್ಥಾನದ ಹತ್ತಿರ, ಪೂರ್ವ ನಿಗದಿಯಂತೆ ಬೃಹತ್ ಗಾತ್ರದ ಭಗತಸಿಂಗ್ ಪುತ್ಥಳಿ ನಿರ್ಮಾಣ ಮಾಡುವಂತೆ ನೆತ್ತರಿನಲ್ಲಿ ಪತ್ರ ಬರೆದು ಗಮನ ಸೆಳೆದಿದ್ದಾನೆ. ಸದ್ಯಕ್ಕೆ ಯುವಕನ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿ ಸಾಕಷ್ಟು ಸದ್ದು ಮಾಡುತ್ತಿದೆ.

ಒಟ್ಟಿನಲ್ಲಿ ಇಂತಹದೊಂದು ಕಾರ್ಯಕ್ಕೆ ಮುಂದಾಗುವ ಮೂಲಕ ಸ್ವಾತಂತ್ರ್ಯ ಯೋಧ ಭಗತಸಿಂಗ್ ಗೆ ಗೌರವ ಸಲ್ಲಿಸಿದ್ದು, ತನ್ನ ಜನ್ಮದಿನವನ್ನು ವಿನೂತನವಾಗಿ ಆಚರಣೆ ಮಾಡಿಕೊಂಡಿರುವುದು ಸಾರ್ವಜನಿಕ ಪ್ರಶಂಸೆ ಪಾತ್ರವಾಗಿದ್ದಾನೆ. – ದತ್ತಾತ್ರೇಯ ಪಾಟೀಲ್, ಟಿವಿ 9, ಹುಬ್ಬಳ್ಳಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ