ನವೆಂಬರ್​ 30 ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳು ಬಂದ್​, ಸರ್ಕಾರದ ವಿರುದ್ಧ ಸಿಬ್ಬಂದಿ ಧರಣಿ​​​

ರಾಜ್ಯಾದ್ಯಂತ 202 ಡಯಾಲಿಸಿಸ್​ ಕೇಂದ್ರಗಳಿದ್ದು, ಒಂದ ವೇಳೆ ಬಂದ್​ ಆದರೆ ರೋಗಿಗಳು ಪರದಾಡಲಿದ್ದಾರೆ. ಸರ್ಕಾರ ಕೊರೊನಾ ಕಾರಣ ಹೇಳಿ ಸಂಬಳಕ್ಕೆ ಕತ್ತರಿ ಹಾಕಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡುವರೆ ವರ್ಷಗಳಿಂದ ಸಿಬ್ಬಂದಿ ಅರ್ಧ ಸಂಬಳ ಪಡೆದು ಕೆಲಸ ಮಾಡುತ್ತಿದ್ದಾರೆ. ಇದು ಕನಿಷ್ಠ ಜೀವನಕ್ಕೂ ಸಾಲುತ್ತಿಲ್ಲ. ಹೀಗಾಗಿ ಡಯಾಲಿಸಿಸ್​ ಸಿಬ್ಬಂದಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

ನವೆಂಬರ್​ 30 ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳು ಬಂದ್​, ಸರ್ಕಾರದ ವಿರುದ್ಧ ಸಿಬ್ಬಂದಿ ಧರಣಿ​​​
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Nov 28, 2023 | 9:46 AM

ಬೆಂಗಳೂರು ನ.28: ವೇತನ ಸಮಸ್ಯೆ ಹಿನ್ನೆಲೆ ಡಯಾಲಿಸಿಸ್ (Dialysis) ಸಿಬ್ಬಂದಿ ನವೆಂಬರ್​ 30 ರಿಂದ ಸಂಪೂರ್ಣ ಕೆಲಸ ಬಂದ್ ಮಾಡಿ ರಾಜ್ಯ ಸರ್ಕಾರದ (Karnataka Government) ವಿರುದ್ಧ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ರಾಜ್ಯಾದ್ಯಂತ 202 ಡಯಾಲಿಸಿಸ್​ ಕೇಂದ್ರಗಳಿದ್ದು, ಒಂದ ವೇಳೆ ಬಂದ್​ ಆದರೆ ರೋಗಿಗಳು ಪರದಾಡಲಿದ್ದಾರೆ. ಸರ್ಕಾರ ಕೊರೊನಾ ಕಾರಣ ಹೇಳಿ ಸಂಬಳಕ್ಕೆ ಕತ್ತರಿ ಹಾಕಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡುವರೆ ವರ್ಷಗಳಿಂದ ಸಿಬ್ಬಂದಿ ಅರ್ಧ ಸಂಬಳ ಪಡೆದು ಕೆಲಸ ಮಾಡುತ್ತಿದ್ದಾರೆ. ಇದು ಕನಿಷ್ಠ ಜೀವನಕ್ಕೂ ಸಾಲುತ್ತಿಲ್ಲ.

ಅಲ್ಲದೇ ಕಳೆದ ಎರಡುವರೆ ತಿಂಗಳ ವೇತನ ಕೂಡ ಹೋಲ್ಡ್ ಮಾಡಲಾಗಿದ್ದು, ಅರ್ಧ ಸಂಬಳ ಕೂಡ ಸಿಗದೆ ಸಿಬ್ಬಂದಿ ಪರದಾಡುತ್ತಿದ್ದಾರೆ. ಈ ಹಿಂದೆ ಡಯಾಲಿಸಿಸ್ ಕೇಂದ್ರ ನಿರ್ವಹಣೆ ಮಾಡುತ್ತಿದ್ದ ಬಿಆರ್​​ಎಸ್ ಸಂಸ್ಥೆ 2021ರಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗದ ಕಾರಣ ನಿರ್ವಹಣೆಯಿಂದ ಹಿಂದೆ ಸರಿಯಿತು. ನಂತರದಲ್ಲಿ ಯಾವುದೇ ಟೆಂಡರ್ ಆಗದೇ ಕೋಲ್ಕತ್ತ ಮೂಲದ ESKAG ಸಂಜೀವಿನಿಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ.

ಈ ಹಿಂದೆ 45 ಕೇಂದ್ರ​​ಗಳ ಜವಬ್ದಾರಿ ಹೊತ್ತಿದ್ದ ESKAG ಸಂಜೀವಿನಿಗೆ ಈಗ 202 ಕೇಂದ್ರ​​ಗಳ ಜವಾಬ್ದಾರಿ ನೀಡಲಾಗಿದೆ. ಈ ಡಯಾಲಿಸಿಸ್​ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 650 ಸಿಬ್ಬಂದಿಗಳ ಸಂಬಳದ ಬಗ್ಗೆ ಸರ್ಕಾರ ಅಸಡ್ಡೆ ತೋರಿದೆ. ವೇತನ ಸಿಗದೇ, ಪಿಎಫ್, ಇಎಸ್ಐ ಇಲ್ಲದೇ 650 ಸಿಬ್ಬಂದಿಗಳು ಪರದಾಡುತ್ತಿದ್ದಾರೆ.

ಇದನ್ನೂ ಓದಿ: Health: ‘ಒನ್ ನೇಷನ್ ಒನ್​ ಡಯಾಲಿಸಿಸ್’ ಯೋಜನೆ ಸದ್ಯದಲ್ಲೇ ಚಾಲನೆ

ತಮ್ಮ ಕಷ್ಟಕ್ಕೆ ಸ್ಪಂದಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮೂರು ಬಾರಿ ಭೇಟಿ ಮಾಡಿದರೂ ಸಚಿವರು ಸ್ಪಂದಿಸಿಲ್ಲ. ರಾಜ್ಯದಲ್ಲಿ ಒಟ್ಟು 202 ಡಯಾಲಿಸಿಸ್ ಕೇಂದ್ರ​​​ಗಳಿವೆ. ಈ ಪೈಕಿ ಬೆಂಗಳೂರು, ತುಮಕೂರು, ರಾಮನಗರ, ಗದಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ಸೆಂಟರ್​ಗಳಿವೆ. ಇಲ್ಲಿ ಗ್ರೂಪ್ ಡಿ, ಸ್ಟಾಫ್, ಡಯಾಲಿಸಿಸ್ ಟೆಕ್ನಿಶಿಯನ್ಸ್ ಸೇರಿ ಒಟ್ಟು 650 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿದಿನ 2500 ಜನರು ಡಯಾಲಿಸಿಸ್​ ಮಾಡಿಸಿಕೊಳ್ಳುತ್ತಾರೆ.

ಹಾಸನ ಜಿಲ್ಲೆಯ ಅರಸೀಕೆರೆಯ ತಂತ್ರಜ್ಞ ಚಂದ್ರಶೇಖರ್ ಮಾತನಾಡಿ, ಹೊಸ ಏಜೆನ್ಸಿಯು ಈ ಹಿಂದೆ ನೀಡುತ್ತಿದ್ದ ಸಂಬಳಕ್ಕಿಂತ ಕಡಿಮೆ ವೇತನವನ್ನು ನೀಡುತ್ತಿದೆ. “ನಾನು ಈ ಹಿಂದೆ 25,000 ರೂ. ಮಾಸಿಕ ವೇತನವನ್ನು ಪಡೆಯುತ್ತಿದ್ದೆ. ಆದರೆ, ಹೊಸ ಸಂಸ್ಥೆ ಅಧಿಕಾರ ವಹಿಸಿಕೊಂಡ ನಂತರ ನನ್ನ ವೇತನ 13,800 ರೂ.ಗೆ ಇಳಿಕೆಯಾಗಿದೆ. ಮೇಲಾಗಿ, ಹಿಂದಿನ ಏಜೆನ್ಸಿಯು ಜೂನ್ ಮತ್ತು ಜುಲೈ ತಿಂಗಳ ವೇತನವನ್ನು ನೀಡಿಲ್ಲ. ನಮ್ಮ ಇತರ ಪ್ರಯೋಜನಗಳಾದ ಪಿಎಫ್ ಮತ್ತು ಇಎಸ್‌ಐ ಕೊಡುಗೆಗಳನ್ನು ಸಹ ಹೊಸ ಏಜೆನ್ಸಿ ಪಾವತಿಸುತ್ತಿಲ್ಲ, ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ