AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ: ಪರೋಕ್ಷವಾಗಿ ಮತ್ತೆ ಸಿಎಂ ಆಗೋ ಆಸೆ ವ್ಯಕ್ತಪಡಿಸಿದ್ರಾ ಡಿಕೆ ಶಿವಕುಮಾರ್?

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ನಾವು ರಾಜ್ಯಕ್ಕೆ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ ಎಂದಿದ್ದಾರೆ. ಆ ಮೂಲಕ ಮತ್ತೆ ಪರೋಕ್ಷವಾಗಿ ಸಿಎಂ ಆಗೋ ಆಸೆ ವ್ಯಕ್ತಪಡಿಸಿದ್ರಾ? ಎನ್ನಲಾಗುತ್ತಿದೆ. ಸಿಎಂ ಮೇಲೆ ಎಫ್​ಐಆರ್​ ದಾಖಲಾದ ಬೆನ್ನಲ್ಲೇ ಡಿಕೆ ಶಿವಕುಮಾರ್​ ಹೇಳಿಕೆ ಸದ್ಯ ಕುತೂಹಲ ಮೂಡಿಸಿದೆ.

ನಾವು ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ: ಪರೋಕ್ಷವಾಗಿ ಮತ್ತೆ ಸಿಎಂ ಆಗೋ ಆಸೆ ವ್ಯಕ್ತಪಡಿಸಿದ್ರಾ ಡಿಕೆ ಶಿವಕುಮಾರ್?
ನಾವು ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ: ಪರೋಕ್ಷವಾಗಿ ಮತ್ತೆ ಸಿಎಂ ಆಗೋ ಆಸೆ ವ್ಯಕ್ತಪಡಿಸಿದ್ರಾ ಡಿಕೆ ಶಿವಕುಮಾರ್?
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 28, 2024 | 4:04 PM

Share

ರಾಮನಗರ, ಸೆಪ್ಟೆಂಬರ್​​ 28: ನಾವು ರಾಜ್ಯಕ್ಕೆ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಹೇಳಿದ್ದಾರೆ. ಆ ಮೂಲಕ ಮತ್ತೆ ಪರೋಕ್ಷವಾಗಿ ಸಿಎಂ ಆಗೋ ಆಸೆ ವ್ಯಕ್ತಪಡಿಸಿದರಾ? ಎಂಬ ಅನುಮಾನಗಳು ಮೂಡಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಎಫ್​ಐಆರ್​ ದಾಖಲಾದ ಬೆನ್ನಲ್ಲೇ ಡಿಕೆ ಶಿವಕುಮಾರ್​ ಈ ಹೇಳಿಕೆ ಸದ್ಯ ಕುತೂಹಲ ಮೂಡಿಸಿದೆ.

ಜಿಲ್ಲೆಯ ಕನಕಪುರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕನಕಪುರ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯ ಸೇವೆ ಮಾಡಬೇಕು ಅಂತಾ ದೊಡ್ಡ ಪ್ರಯತ್ನ ನಡೆದಿದೆ. ಜೊತೆಗೆ ದೊಡ್ಡ ಹೋರಾಟವೂ ಕೂಡ ನಡೆಯುತ್ತಿದೆ. ಈಗ ಮಾತನಾಡಿದರೆ ವಿವಿಧ ರೀತಿಯಲ್ಲಿ ಬಿಂಬಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳ್ಳಂದೂರು ಟೆಕ್ಕಿಗಳಿಗೆ ಡಿಕೆ ಶಿವಕುಮಾರ್ ಗುಡ್​ ನ್ಯೂಸ್​​: ಟ್ರಾಫಿಕ್ ಸಮಸ್ಯೆ​ ನಿವಾರಣೆಗೆ ಜಮೀನು ಖರೀದಿ

ಸದ್ಯ ನಾನು ಇಲ್ಲಿಗೆ ಡಿಸಿಎಂ ಆಗಿ ಬಂದಿಲ್ಲ, ಶಾಸಕನಾಗಿ ಬಂದಿದ್ದೇನೆ. ಡಿಸಿಎಂ ಏನಿದ್ರೂ ವಿಧಾನಸೌಧದಲ್ಲಿ, ನೀವೆಲ್ಲ ನಮ್ಮ ಮನೆಯ ಮಕ್ಕಳು ಎಂದಿದ್ದಾರೆ. ಪ್ರತಿ ಶನಿವಾರ ರಜೆ ಇದ್ದಾಗ ಕನಕಪುರಕ್ಕೆ ಕಾರ್ಯಕ್ರಮ ರೂಪಿಸಿದ್ದೆ. ಅದೇ ಥರ ಕನಕಪುರಕ್ಕೆ ಬಂದಿದ್ದೇನೆ. ತಮಗೆ ಕಾಲೇಜು ಎಲ್ಲಿತ್ತು ಅಂತ ತಮಗೆ ಗೊತ್ತಿಲ್ಲ. ನಿಮ್ಮ‌ ಕಾಲೇಜು ನಗರಸಭೆ ಜಾಗದಲ್ಲಿತ್ತು. ಇದನ್ನು ನಾವಿಲ್ಲಿ ಹೊಸ ಕಾಲೇಜು ಕಟ್ಟಿ. ನಾನು ಕನಕಪುರದ‌ ಚಿತ್ರ ತಯಾರು ಮಾಡಿದ್ದೇನೆ. ನಾನು ಎಂಎಲ್​ಎ ಆಗುವುದಕ್ಕಿಂತ ಮುಂಚೆ ಕನಕಪುರ ಹೇಗಿತ್ತು. ಈಗ ಹೇಗಿದೆ ಅಂತ ಚಿತ್ರ ಮಾಡಿಸಿದ್ದೇನೆ. ರಸ್ತೆ, ಕಟ್ಟಡಗಳು ಹೇಗಿತ್ತು, ಈಗ ಹೇಗಿದೆ ಅನ್ನೋದನ್ನು ತೋರಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ FIR ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ: ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು

ಬೆಂಗಳೂರು-ಕನಕಪುರ ರಸ್ತೆ ಎಜುಕೇಶನ್ ಕಾರಿಡಾರ್ ಆಗಿ ಹೊರ ಹೊಮ್ಮಿದೆ. ಸುರೇಶ್​ವರರು ಶ್ರಮಪಟ್ಟು ಕೆಲಸ ಮಾಡಿದ್ದಾರೆ. ಕನಕೋತ್ಸವ ಪ್ರಾರಂಭ ಮಾಡಿ, ವಿದ್ಯಾರ್ಥಿಗಳಿಗೆ ನಮ್ಮ ಕಲೆ,‌ ನಮ್ಮ ಸಂಸ್ಕೃತಿ ಶುಭವನ್ನು ಹಾರೈಸಲಿಕ್ಕೆ ಇಲ್ಲಿ ಬಂದಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್