ನಾವು ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ: ಪರೋಕ್ಷವಾಗಿ ಮತ್ತೆ ಸಿಎಂ ಆಗೋ ಆಸೆ ವ್ಯಕ್ತಪಡಿಸಿದ್ರಾ ಡಿಕೆ ಶಿವಕುಮಾರ್?

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ನಾವು ರಾಜ್ಯಕ್ಕೆ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ ಎಂದಿದ್ದಾರೆ. ಆ ಮೂಲಕ ಮತ್ತೆ ಪರೋಕ್ಷವಾಗಿ ಸಿಎಂ ಆಗೋ ಆಸೆ ವ್ಯಕ್ತಪಡಿಸಿದ್ರಾ? ಎನ್ನಲಾಗುತ್ತಿದೆ. ಸಿಎಂ ಮೇಲೆ ಎಫ್​ಐಆರ್​ ದಾಖಲಾದ ಬೆನ್ನಲ್ಲೇ ಡಿಕೆ ಶಿವಕುಮಾರ್​ ಹೇಳಿಕೆ ಸದ್ಯ ಕುತೂಹಲ ಮೂಡಿಸಿದೆ.

ನಾವು ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ: ಪರೋಕ್ಷವಾಗಿ ಮತ್ತೆ ಸಿಎಂ ಆಗೋ ಆಸೆ ವ್ಯಕ್ತಪಡಿಸಿದ್ರಾ ಡಿಕೆ ಶಿವಕುಮಾರ್?
ನಾವು ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ: ಪರೋಕ್ಷವಾಗಿ ಮತ್ತೆ ಸಿಎಂ ಆಗೋ ಆಸೆ ವ್ಯಕ್ತಪಡಿಸಿದ್ರಾ ಡಿಕೆ ಶಿವಕುಮಾರ್?
Edited By:

Updated on: Sep 28, 2024 | 4:04 PM

ರಾಮನಗರ, ಸೆಪ್ಟೆಂಬರ್​​ 28: ನಾವು ರಾಜ್ಯಕ್ಕೆ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಹೇಳಿದ್ದಾರೆ. ಆ ಮೂಲಕ ಮತ್ತೆ ಪರೋಕ್ಷವಾಗಿ ಸಿಎಂ ಆಗೋ ಆಸೆ ವ್ಯಕ್ತಪಡಿಸಿದರಾ? ಎಂಬ ಅನುಮಾನಗಳು ಮೂಡಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಎಫ್​ಐಆರ್​ ದಾಖಲಾದ ಬೆನ್ನಲ್ಲೇ ಡಿಕೆ ಶಿವಕುಮಾರ್​ ಈ ಹೇಳಿಕೆ ಸದ್ಯ ಕುತೂಹಲ ಮೂಡಿಸಿದೆ.

ಜಿಲ್ಲೆಯ ಕನಕಪುರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕನಕಪುರ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯ ಸೇವೆ ಮಾಡಬೇಕು ಅಂತಾ ದೊಡ್ಡ ಪ್ರಯತ್ನ ನಡೆದಿದೆ. ಜೊತೆಗೆ ದೊಡ್ಡ ಹೋರಾಟವೂ ಕೂಡ ನಡೆಯುತ್ತಿದೆ. ಈಗ ಮಾತನಾಡಿದರೆ ವಿವಿಧ ರೀತಿಯಲ್ಲಿ ಬಿಂಬಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳ್ಳಂದೂರು ಟೆಕ್ಕಿಗಳಿಗೆ ಡಿಕೆ ಶಿವಕುಮಾರ್ ಗುಡ್​ ನ್ಯೂಸ್​​: ಟ್ರಾಫಿಕ್ ಸಮಸ್ಯೆ​ ನಿವಾರಣೆಗೆ ಜಮೀನು ಖರೀದಿ

ಸದ್ಯ ನಾನು ಇಲ್ಲಿಗೆ ಡಿಸಿಎಂ ಆಗಿ ಬಂದಿಲ್ಲ, ಶಾಸಕನಾಗಿ ಬಂದಿದ್ದೇನೆ. ಡಿಸಿಎಂ ಏನಿದ್ರೂ ವಿಧಾನಸೌಧದಲ್ಲಿ, ನೀವೆಲ್ಲ ನಮ್ಮ ಮನೆಯ ಮಕ್ಕಳು ಎಂದಿದ್ದಾರೆ. ಪ್ರತಿ ಶನಿವಾರ ರಜೆ ಇದ್ದಾಗ ಕನಕಪುರಕ್ಕೆ ಕಾರ್ಯಕ್ರಮ ರೂಪಿಸಿದ್ದೆ. ಅದೇ ಥರ ಕನಕಪುರಕ್ಕೆ ಬಂದಿದ್ದೇನೆ. ತಮಗೆ ಕಾಲೇಜು ಎಲ್ಲಿತ್ತು ಅಂತ ತಮಗೆ ಗೊತ್ತಿಲ್ಲ. ನಿಮ್ಮ‌ ಕಾಲೇಜು ನಗರಸಭೆ ಜಾಗದಲ್ಲಿತ್ತು. ಇದನ್ನು ನಾವಿಲ್ಲಿ ಹೊಸ ಕಾಲೇಜು ಕಟ್ಟಿ. ನಾನು ಕನಕಪುರದ‌ ಚಿತ್ರ ತಯಾರು ಮಾಡಿದ್ದೇನೆ. ನಾನು ಎಂಎಲ್​ಎ ಆಗುವುದಕ್ಕಿಂತ ಮುಂಚೆ ಕನಕಪುರ ಹೇಗಿತ್ತು. ಈಗ ಹೇಗಿದೆ ಅಂತ ಚಿತ್ರ ಮಾಡಿಸಿದ್ದೇನೆ. ರಸ್ತೆ, ಕಟ್ಟಡಗಳು ಹೇಗಿತ್ತು, ಈಗ ಹೇಗಿದೆ ಅನ್ನೋದನ್ನು ತೋರಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ FIR ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ: ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು

ಬೆಂಗಳೂರು-ಕನಕಪುರ ರಸ್ತೆ ಎಜುಕೇಶನ್ ಕಾರಿಡಾರ್ ಆಗಿ ಹೊರ ಹೊಮ್ಮಿದೆ. ಸುರೇಶ್​ವರರು ಶ್ರಮಪಟ್ಟು ಕೆಲಸ ಮಾಡಿದ್ದಾರೆ. ಕನಕೋತ್ಸವ ಪ್ರಾರಂಭ ಮಾಡಿ, ವಿದ್ಯಾರ್ಥಿಗಳಿಗೆ ನಮ್ಮ ಕಲೆ,‌ ನಮ್ಮ ಸಂಸ್ಕೃತಿ
ಶುಭವನ್ನು ಹಾರೈಸಲಿಕ್ಕೆ ಇಲ್ಲಿ ಬಂದಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us