ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಯೊಬ್ಬರಿಂದ ಕೋಟಿ ಕೋಟಿ ರೂ. ಸುಲಿಗೆ ಮಾಡಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ಈ ಬೃಹತ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಹಣ ವರ್ಗಾವಣೆ ಹೆಸರಲ್ಲಿ ಭಯ ಹುಟ್ಟಿಸಿದ್ದ ಖದೀಮರು, ಕಳೆದ ಜನವರಿಯಿಂದ ಮೇ ತಿಂಗಳವರೆಗೆ ಒಟ್ಟು 24 ಕೋಟಿ ರೂಪಾಯಿ ಹಣವನ್ನು ಅವರಿಂದ ಪೀಕಿದ್ದಾರೆ.

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ
ಸಾಂದರ್ಭಿಕ ಚಿತ್ರ
Image Credit source: AI Image
Edited By:

Updated on: May 24, 2026 | 11:26 AM

ಬೆಂಗಳೂರು, ಮೇ 24: ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯೋರ್ವರಿಂದ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಖದೀಮರ ಹಣದ ದಾಹಕ್ಕೆ ತನ್ನ ಬಳಿ ಇದ್ದ ಬಂಗಾರದ ಒಡವೆಗಳನ್ನು ಬ್ಯಾಂಕ್​​ನಲ್ಲಿ ಅಡ ಇಡಲು ಬಂದು ವೃದ್ಧೆ ಬಚಾವ್​​ ಆಗಿದ್ದು, ಕಳೆದ ಜನವರಿಯಿಂದಲೇ ಆರೋಪಿಗಳು ಹಣ ವಸೂಲಿಗೆ ಇಳಿದಿದ್ದರು ಎಂಬುದು ಗೊತ್ತಾಗಿದೆ. ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಆಕೆ ಹೆಚ್ಚಿನ ಹಣ ಕಳೆದುಕೊಳ್ಳುವುದು ತಪ್ಪಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ಮತ್ತೊಂದು ಡಿಜಿಟಲ್​​ ಅರೆಸ್ಟ್​​ ಪ್ರಕರಣ ಬಯಲು
  • ವೃದ್ಧೆಯಿಂದ ಕೋಟಿ ಕೋಟಿ ಸುಲಿಗೆ ಮಾಡಿರುವ ಖದೀಮರು
  • ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಶಿವಾಜಿನಗರ ನಿವಾಸಿಯಾಗಿರುವ ವೃದ್ಧೆ ಲಕ್ಷ್ಮೀ ಎಂಬವರಿಗೆ ಪ್ರಾಪರ್ಟಿ ಮಾರಿದ್ದರಿಂದ ಕೋಟ್ಯಾಂತರ ರೂಪಾಯಿ ಹಣ ಬಂದಿತ್ತು. ಇವರ ಬ್ಯಾಂಕ್​​ ವಹಿವಾಟು ಮಾಹಿತಿ ಪಡೆದ ಆರೋಪಿಗಳು ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ಅವರನ್ನು ಬೆದರಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಹೆಸರಲ್ಲಿ ಲಕ್ಷ್ಮೀ ಅವರಿಗೆ ಭಯ ಹುಟ್ಟಿಸಿದ್ದ ಖದೀಮರು, ಕಳೆದ ಜನವರಿಯಿಂದ ಮೇ ತಿಂಗಳವರೆಗೆ ಒಟ್ಟು 24 ಕೋಟಿ ರೂಪಾಯಿ ಹಣವನ್ನು ಅವರಿಂದ ಪೀಕಿದ್ದಾರೆ. ಹೀಗಿದ್ದರೂ ಇವರ ಹಣದಾಹ ಮಾತ್ರ ತೀರಿರಲಿಲ್ಲ. ಹೀಗಾಗಿ ಮನೆಯಲ್ಲಿದ್ದ 1 ಕೆಜಿ 300 ಗ್ರಾಂ ಚಿನ್ನವನ್ನ ಅಡಿಟ್ಟು ಹಣ ಪಡೆಯಲು ಲಕ್ಷೀ ಬ್ಯಾಂಕ್​​ಗೆ ತೆರಳಿದ್ದರು. ಇದನ್ನು ಗಮನಿಸಿದ ಬ್ರಾಂಚ್ ಮ್ಯಾನೇಜರ್​​, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ; 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ, ಓರ್ವನ ಬಂಧನ!

ಇನ್ನು ಕೂಡಲೇ ಬ್ಯಾಂಕ್​​ಗೆ ಬಂದ ಸಿಸಿಬಿ ಸೈಬರ್​​ ಪೊಲೀಸರು, ಲಕ್ಷ್ಮೀ ಅವರನ್ನು ಈ ಸಂಬಂಧ ವಿಚಾರಿಸಿದ್ದಾರೆ. ಆದರೆ ಆರಂಭದಲ್ಲಿ ಏನನ್ನೂ ಅವರು ಬಾಯು ಬಿಟ್ಟಿರಲಿಲ್ಲ. ಹೀಗಾಗಿ ತಮ್ಮದೇ ಸ್ಟೈಲ್​​ನಲ್ಲಿ ಪೊಲೀಸರು ಕೇಳಿದಾಗ ಡಿಜಿಟಲ್​​ ಅರೆಸ್ಟ್​​ ಸತ್ಯ ಹೊರಬಂದಿದೆ. ಕೂಡಲೇ ಸಂತ್ರಸ್ತೆಯಿಂದ ದೂರು ಪಡೆದಿರುವ ಪೊಲೀಸರು, ವಿದೇಶದಲ್ಲಿರುವ ಅವರ ಮಕ್ಕಳಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪ್ರಕರಣ ಸಂಬಂಧ ತನಿಖೆಗಿಳಿದ ಖಾಕಿ ಮುಂಬೈ ,ಅಲಹಬಾದ್, ದೆಹಲಿ ಮೂಲದ ಆರೋಪಿಗನ್ನು ಹೆಡೆಮುರಿ ಕಟ್ಟಿದೆ. ಗೌರವ್ ಕುಮಾರ್ , ಓಂ ಪ್ರಕಾಶ್ ರಾಜ್ ಪುತ್ ಸೇರಿದಂತೆ ಐವರನ್ನು ಅರೆಸ್ಟ್ ಮಾಡಲಾಗಿದೆ. ಸುಲಿಗೆ ಮಾಡಿದ್ದ ಹಣವನ್ನು ಆರೋಪಿಗಳು ಒಟ್ಟು 22 ಖಾತೆಗಳಿಗೆ ವರ್ಗಾಯಿಸಿದ್ದು, 60 ಲಕ್ಷ ಹಣ ಇರುವ ಅಕೌಂಟ್​​ನ ಪೊಲೀಸರು ಸೀಜ್​​ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Published On - 11:25 am, Sun, 24 May 26

Shivaprasad B
Follow Us