AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪತ್ತೆಯಾಯ್ತು ಡಿಜಿಟಲ್ ಐಟಿ ಅರೆಸ್ಟ್ ಕಚೇರಿ; ವಿದೇಶಿ ಪ್ರಜೆಗಳನ್ನೇ ಟಾರ್ಗೆಟ್ ಮಾಡಿ ಕರೆ, ಹಣ ವಸೂಲಿ

ಐಟಿ ಹಬ್, ಸಿಲಿಕಾನ್ ವ್ಯಾಲಿ, ದೇಶದ ಐಟಿ ರಾಜಧಾನಿ ಎಂದೆಲ್ಲಾ ಖ್ಯಾತಿ‌ ಪಡೆದ ಬೆಂಗಳೂರಿಗೆ ಈಗ ಒಂದು ಕಪ್ಪು ಚುಕ್ಕೆ ಅಂಟಿಕೊಂಡಿದೆ. ದೇಶದಲ್ಲಿ‌ ಇತ್ತೀಚಿಗೆ ಸಂಚಲನ ಸೃಷ್ಟಿಸಿರುವ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಜೊತೆಯಲ್ಲಿ ಡಿಜಿಟಲ್ ಅರೆಸ್ಟ್ ಕಚೇರಿಯೊಂದು ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿ ಪತ್ತೆಯಾಗಿದ್ದು, ಪೊಲೀಸರನ್ನು ನಿಬ್ಬೆರಗಾಗಿಸಿದೆ.

ಬೆಂಗಳೂರಿನಲ್ಲಿ ಪತ್ತೆಯಾಯ್ತು ಡಿಜಿಟಲ್ ಐಟಿ ಅರೆಸ್ಟ್ ಕಚೇರಿ; ವಿದೇಶಿ ಪ್ರಜೆಗಳನ್ನೇ ಟಾರ್ಗೆಟ್ ಮಾಡಿ ಕರೆ, ಹಣ ವಸೂಲಿ
ಸಿಲಿಕಾನ್ ಸಿಟಿಯಲ್ಲಿ ಪತ್ತೆಯಾಯ್ತು ಡಿಜಿಟಲ್ ಐಟಿ ಅರೆಸ್ಟ್ ಕಚೇರಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 15, 2025 | 11:47 AM

Share

ಬೆಂಗಳೂರು, ಅಕ್ಟೋಬರ್ 15: ಬೆಂಗಳೂರು ಐಟಿ ಕಂಪನಿಗಳ ತವರೂರು. ವಿಶ್ವದ ಟಾಪ್ ಐಟಿ ಸಿಟಿಗಳಲ್ಲಿ ಸಿಲಿಕಾನ್ ಸಿಟಿಯೂ ಸಹ ಅಗ್ರಮಾನ್ಯ ಪಟ್ಟಿಯಲ್ಲಿ ಇದೆ. ಹಲವು ಐಟಿ ಕಂಪನಿಗಳಿರುವ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಸೈಬರ್ ಕಂಪನಿ ಕೂಡ ಪತ್ತೆಯಾಗಿದೆ. ಡಿಜಿಟಲ್ ಅರೆಸ್ಟ್ (Digital Arrest) ಹೆಸರಲ್ಲಿ ದೇಶದ ಜನರಿಗೆ ಭಯ ಹುಟ್ಟಿಸಿ ಲಕ್ಷಲಕ್ಷ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಗಳು ಸಾಕಷ್ಟು ಬೆಳಕಿಗೆ ಬಂದಿವೆ. ಅದರೆ ಇದೇ ಮೊದಲ ಬಾರಿ ಭಾರತದಲ್ಲಿ ಕುಳಿತು ಅಮೆರಿಕ ಮತ್ತು ಕೆನಡಾ ಪ್ರಜೆಗಳನ್ನು ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಕಚೇರಿಯೊಂದನ್ನು ಪತ್ತೆ ಹಚ್ಚಲಾಗಿದೆ. ಈ ಕಚೇರಿಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ನಗರದ ಹೆಚ್ಎಸ್ಆರ್ ಲೇಔಟ್ ನಲ್ಲಿ ಬೆಳಕಿಗೆ ಬಂದಿದೆ.

ಅಮೆರಿಕದ ಸುಪ್ರೀಂ ಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯದ ನಕಲಿ ಆದೇಶಗಳನ್ನು ತೋರಿಸಿ ವಿದೇಶಿ ಪ್ರಜೆಗಳಿಗೆ ವಂಚನೆ

ಹೆಚ್ಎಸ್ಆರ್ ಲೇಔಟ್ನ 24ನೇ ಕ್ರಾಸ್ ನಲ್ಲಿ ದುಷ್ಕರ್ಮಿಗಳ ಗ್ಯಾಂಗ್ ಸಿಬೈಟ್ ಎಂಬ ಐಟಿ ಕಂಪನಿಯನ್ನ ತೆರೆದಿದ್ದರು. ನಿತ್ಯ ಸಂಜೆ ಆರು ಗಂಟೆಗೆ ಕಚೇರಿ ಶುರುವಾಗಿ ಅಮೆರಿಕ ಶಿಫ್ಟ್ನಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಅಮೆರಿಕ ಪ್ರಜೆಗಳನ್ನೇ ಟಾರ್ಗೆಟ್ ಮಾಡಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದರು. ‘ ನಾವು ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಹಾಗೂ ಇನ್ವೆಸ್ಟಿಗೇಷನ್ ಏಜೆನ್ಸಿಯವರು. ನಿಮ್ಮ ಐಡಿಗಳನ್ನು ಬಳಸಿ ಪಾರ್ಸಲ್ ಬಂದಿದೆ. ಅದರಲ್ಲಿ ನಾರ್ಕೊಟಿಕ್ಸ್ ಪತ್ತೆಯಾಗಿದೆ. ನಿಮ್ಮ ವಿರುದ್ದ ಕೇಸ್ ದಾಖಲಾಗಿದೆ.’ ಎಂದು ಬೆದರಿಸುತ್ತಿದ್ದರು.

ಅದಕ್ಕೆ ತಕ್ಕ ಹಾಗೆ ಅಮೆರಿಕದ ಸುಪ್ರೀಂ ಕೋರ್ಟ್ ಹಾಗೂ ಅಮೆರಿಕ ಜಿಲ್ಲಾ ನ್ಯಾಯಾಲಯದ ನಕಲಿ ಆದೇಶಗಳನ್ನು ತೋರಿಸುತ್ತಿದ್ದರು. ನಂತರ ಕರೆಯನ್ನು ಮತ್ತೊಂದು ಇನ್ವೆಸ್ಟಿಗೇಶನ್ ಟೀಮ್​ಗೆ ವರ್ಗಾಯಿಸುತ್ತೇವೆಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ಡಾಲರ್​ಗಳಿಗೆ ಡಿಮಾಂಡ್ ಮಾಡುತ್ತಿದ್ದರು ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಉತ್ತರ ಭಾರತ ಮೂಲದ 16 ಸಿಬ್ಬಂದಿ ಪೊಲೀಸ್ ವಶಕ್ಕೆ

ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಗ್ನೇಯ ಸೆನ್ ಪೊಲೀಸರು ಐಟಿ ಕಂಪನಿಗೆ ತೆರಳಿ ಪರಿಶೀಲನೆ ನಡೆಸಿ ಕಂಪನಿ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ 16 ಮಂದಿ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಗುಜರಾತ್ ಮೂಲದ 4 ಮಂದಿ, ಮಹಾರಾಷ್ಟ್ರದ 8, ಒರಿಸ್ಸಾ, ಜಾರ್ಖಂಡ್, ಮಧ್ಯಪ್ರದೇಶ ಮೂಲದ ತಲಾ ಒಬ್ಬ ಆರೋಪಿ ಇರುವುದು ಗೊತ್ತಾಗಿದೆ. ಕೆಲಸ ಮಾಡುತ್ತಿದ್ದ ನೌಕರರಿಗೆ 22 ಸಾವಿರ ಸಂಬಳ ಕೂಡ ನೀಡಲಾಗುತ್ತಿತ್ತು ಎಂದು ಪೊಲೀಸ್ ಕಮೀಷನರ್ ಹೇಳಿದ್ದಾರೆ.

Published On - 10:23 am, Wed, 15 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್