AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಯಡಿಯೂರಪ್ಪ 79ನೇ ಜನ್ಮದಿನಕ್ಕೆ ಕರೆ ಮಾಡಿ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಟ್ವಿಟರ್​ನಲ್ಲಿ ಶುಭ ಕೋರಿದ ಗಣ್ಯರು

Happy Birthday BS Yediyurappa: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ. ಎಸ್​. ಯಡಿಯೂರಪ್ಪನವರು ಇಂದು 79ನೇ ವಸಂತಕ್ಕೆ ಕಾಲಿರಿಸಿದ್ದು, ಬಿಎಸ್​ವೈ ಜನುಮ ದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ರಾಜ್ಯದ ಹಲವು ಗಣ್ಯರು ಹಾಗೂ ಇತರೆ ಪಕ್ಷದ ಮುಖಂಡರು ಟ್ವಿಟರ್​ನಲ್ಲಿ ಶುಭಾಶಯ ಕೋರಿದ್ದಾರೆ

ಮುಖ್ಯಮಂತ್ರಿ ಯಡಿಯೂರಪ್ಪ 79ನೇ ಜನ್ಮದಿನಕ್ಕೆ ಕರೆ ಮಾಡಿ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಟ್ವಿಟರ್​ನಲ್ಲಿ ಶುಭ ಕೋರಿದ ಗಣ್ಯರು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಪೃಥ್ವಿಶಂಕರ
| Edited By: |

Updated on:Feb 27, 2021 | 1:21 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ. ಎಸ್​. ಯಡಿಯೂರಪ್ಪನವರು ಇಂದು 79ನೇ ವಸಂತಕ್ಕೆ ಕಾಲಿರಿಸಿದ್ದು, ಬಿಎಸ್​ವೈ ಜನುಮ ದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ರಾಜ್ಯದ ಹಲವು ಗಣ್ಯರು ಹಾಗೂ ಇತರೆ ಪಕ್ಷದ ಮುಖಂಡರು ಟ್ವಿಟರ್​ನಲ್ಲಿ ಶುಭಾಶಯ ಕೋರಿದ್ದಾರೆ. ಜೊತೆಗೆ ದೇಶದ ಪ್ರಧಾನಿ ಮೋದಿ ಟ್ವೀಟ್​ ಮಾಡಿ ಶುಭ ಕೋರಿದಲ್ಲದೆ, ಸ್ವತಃ ಬಿಎಸ್​ವೈಗೆ ಕರೆ ಮಾಡಿ ವಿಷ್​ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಕೂಡ ಬಿಎಸ್​ವೈಗೆ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿ (chief secretary) ರವಿಕುಮಾರ್ ಸಹ ಬಿಎಸ್​ವೈ ಅವರಿಗೆ ಶುಭ ಕೋರಿದರು.

ಬಿ. ಎಸ್​. ಯಡಿಯೂರಪ್ಪನವರಿಗೆ ಟ್ವಿಟರ್​ನಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ, ರಾಜ್ಯದ ಮುಖ್ಯಮಂತ್ರಿ, ರಾಜಕೀಯ ಮುತ್ಸದ್ಧಿ ಶ್ರೀ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ, ಆಯುರಾರೋಗ್ಯ ಕರುಣಿಸಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿಗಳಾದ ಹೆಚ್. ಡಿ. ದೇವೆಗೌಡ ಸಹ ಬಿಎಸ್‌ವೈಗೆ ಅಭಿನಂದನೆ ತಿಳಿಸಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಶ್ರೀ. ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಕರುಣಿಸಿ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ ಎಂದು ಹಾರೈಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಪ್ರಯುಕ್ತ ಟ್ವಿಟರ್​ನಲ್ಲಿ ಗಣ್ಯ ನಾಯಕರು ಶುಭಕೋರಿದ್ದಾರೆ.

ಇದನ್ನೂ ಓದಿ: karnataka budget 2021 | ಉಳಿದೆರಡು ವರ್ಷ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Published On - 11:29 am, Sat, 27 February 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ