AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಗತ್ಯ ಸಿಸೇರಿಯನ್ ಹೆರಿಗೆ ತಡೆಗೆ ಹೊಸ ಯೋಜನೆ: ದಿನೇಶ್ ಗುಂಡೂರಾವ್ ಘೋಷಣೆ

ಕರ್ನಾಟಕದಲ್ಲಿ ಸಿಸೇರಿಯನ್ ಹೆರಿಗೆಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳ ಪಾತ್ರ ದೊಡ್ಡದಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಅನಗತ್ಯ ಸಿಸೇರಿಯನ್‌ಗಳನ್ನು ತಡೆಯಲು ರಾಜ್ಯ ಸರ್ಕಾರ ಜನವರಿಯಲ್ಲಿ ವಿಶೇಷ ಕಾರ್ಯಕ್ರಮ ಆರಂಭಿಸಲಿದೆ. ತಾಲೂಕು ಆಸ್ಪತ್ರೆಗಳಲ್ಲಿ 24/7 ಹೆರಿಗೆ ಸೇವೆ ಒದಗಿಸುವ ಮೂಲಕ ಸಾಮಾನ್ಯ ಹೆರಿಗೆಯನ್ನು ಉತ್ತೇಜಿಸಲು ಯೋಜನೆ ರೂಪಿಸಲಾಗಿದೆ ಎಂದು ಅವರು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

ಅನಗತ್ಯ ಸಿಸೇರಿಯನ್ ಹೆರಿಗೆ ತಡೆಗೆ ಹೊಸ ಯೋಜನೆ: ದಿನೇಶ್ ಗುಂಡೂರಾವ್ ಘೋಷಣೆ
ಅನಗತ್ಯ ಸಿಸೇರಿಯನ್ ಹೆರಿಗೆ ತಡೆಗೆ ಹೊಸ ಯೋಜನೆ: ದಿನೇಶ್ ಗುಂಡೂರಾವ್ ಘೋಷಣೆ
ಗಣಪತಿ ಶರ್ಮಾ
|

Updated on: Dec 17, 2024 | 7:38 AM

Share

ಬೆಳಗಾವಿ, ಡಿಸೆಂಬರ್ 17: ಕರ್ನಾಟಕದಲ್ಲಿ ಸಿಸೇರಿಯನ್ ಹೆರಿಗೆಗಳ ಸಂಖ್ಯೆ ಹೆಚ್ಚಾಗಲು ಖಾಸಗಿ ಆಸ್ಪತ್ರೆಗಳೇ ಕಾರಣ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅನವಶ್ಯಕವಾಗಿ ಸಿಸೇರಿಯನ್ ಹೆರಿಗೆ ಮಾಡುವುದನ್ನು ತಡೆಯಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಘೋಷಿಸಲಿದೆ ಎಂದು ವಿಧಾನ ಪರಿಷತ್ತಿಗೆ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳು ಹೆಚ್ಚಾಗಿದ್ದು, ಒಟ್ಟಾರೆ ಹೆರಿಗೆಗಳ ಪೈಕಿ ಅವುಗಳ ಪಾಲು ಶೇ 46 ರಷ್ಟಿದೆ. ಒಟ್ಟು ಸಿಸೇರಿಯನ್ ಹೆರಿಗೆಗಳಲ್ಲಿ ಶೇಕಡಾ 61 ರಷ್ಟು ಖಾಸಗಿ ಆಸ್ಪತ್ರೆಗಳನ್ನು ನಡೆಯುತ್ತವೆ. ಶೇಕಡಾ 36 ರಷ್ಟು ಸರ್ಕಾರಿ ಆಸ್ಪತ್ರೆಗಳಿಂದ ವರದಿಯಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಎಂಎಲ್ಸಿ ಜಗದೇವ್ ಗುತ್ತೇದಾರ್ ಪ್ರಶ್ನೆಗೆ ಉತ್ತರಿಸುವಾಗ ಸಚಿವರು ಈ ವಿವರ ನೀಡಿದ್ದಾರೆ.

ಅನಗತ್ಯ ಸಿಸೇರಿಯನ್ ಹೆರಿಗೆಗಳನ್ನು ತಡೆಯುವ ಅಗತ್ಯವನ್ನು ಒತ್ತಿ ಹೇಳಿದ ಅವರು, ಅದರ ತಡೆಗಾಗಿ ಇಲಾಖೆಯು ಪ್ರತ್ಯೇಕ ಕಾರ್ಯಕ್ರಮವನ್ನು ಜನವರಿಯಲ್ಲಿ ಪ್ರಾರಂಭಿಸಲಿದೆ ಎಂದು ಸದನಕ್ಕೆ ತಿಳಿಸಿದರು.

‘ಹಣದ ಉದ್ದೇಶದಿಂದ ಸಿಸೇರಿಯನ್’

ಕೆಲವು ಖಾಸಗಿ ಆಸ್ಪತ್ರೆಗಳು ಕೇವಲ ಹಣದ ಉದ್ದೇಶದಿಂದ ಶೇಕಡಾ 80 ರಿಂದ 90 ರಷ್ಟು ಪ್ರಕರಣಗಳಲ್ಲಿ ಸಿಸೇರಿಯನ್ ಹೆರಿಗೆಗಳನ್ನು ಮಾಡಿಸುತ್ತವೆ. ಸಾಮಾನ್ಯ ಹೆರಿಗೆಗೆ ಹೋಲಿಸಿದರೆ ಇದು ಸುಲಭವಾಗಿರುವುದೂ ಆ ಆಸ್ಪತ್ರೆಗಳ ನಡೆಗೆ ಕಾರಣ ಇರಬಹುದು ಎಂದು ಸಚಿವರು ಗಮನಸೆಳೆದರು.

ಗರ್ಭಿಣಿಯರಿಗೆ ಮಾನಸಿಕ ಸಿದ್ಧತೆಯೂ ಅಗತ್ಯ: ಗುಂಡೂರಾವ್

ಗರ್ಭಿಣಿಯರನ್ನು ಸಾಮಾನ್ಯ ಹೆರಿಗೆಗೆ ಮಾನಸಿಕವಾಗಿ ಸಿದ್ಧಪಡಿಸುವ ಅಗತ್ಯವಿದೆ ಎಂದು ಸಚಿವರು ಹೇಳಿದ್ದಾರೆ. ಜತೆಗೆ, ವೈದ್ಯರ ನಿರ್ಧಾರದ ಹಿಂದಿನ ಅಗತ್ಯ ಮತ್ತು ಕಾರಣವನ್ನು ತಿಳಿಯಲು ನಾವು ಈಗಾಗಲೇ ಪ್ರತಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಗಳ ಲೆಕ್ಕಪರಿಶೋಧನೆಯನ್ನು ನಡೆಸುತ್ತಿದ್ದೇವೆ ಎಂದೂ ತಿಳಿಸಿದ್ದಾರೆ.

ತಾಲೂಕು ಆಸ್ಪತ್ರೆಗಳಲ್ಲಿ 24/7 ಹೆರಿಗೆ ಸೇವೆ

ಸಿಸೇರಿಯನ್ ಹೆರಿಗೆಯನ್ನು ತಪ್ಪಿಸಲು ತಾಲೂಕು ಆಸ್ಪತ್ರೆಗಳಲ್ಲಿ 24/7 ಹೆರಿಗೆ ಸೇವೆ ಒದಗಿಸುವ ಸರ್ಕಾರದ ಯೋಜನೆಯ ಬಗ್ಗೆಯೂ ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ, ರಾತ್ರಿ 1 ಗಂಟೆವರೆಗೂ ನಡೆದ ಅಧಿವೇಶನ: ದಶಕದ ಬಳಿಕ ದಾಖಲೆ

ರಾಜ್ಯದಲ್ಲಿ ಭ್ರೂಣಹತ್ಯೆ ಪ್ರಕರಣಗಳ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, 2023-24 ಮತ್ತು 2024-25 ರಲ್ಲಿ 45 ಜನರನ್ನು ಎಂದು ತಿಳಿಸಿದ್ದಾರೆ. ಬೆಳಗಾವಿ ಕೋಲಾರ ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಪ್ರಕರಣಗಳು ದಾಖಲಾಗಿವೆ ಎಂದೂ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ