AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ ದಿನೇಶ್​ ಕಲ್ಲಹಳ್ಳಿ ವಿರುದ್ಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ದೂರು ದಾಖಲು

Ramesh Jarkiholi CD Controversy: ದಿನೇಶ್ ಕಲ್ಲಹಳ್ಳಿಗೂ ರಾಸಲೀಲೆ ಪ್ರಕರಣಕ್ಕೂ ಸಂಬಂಧವಿಲ್ಲ. ಯುವತಿಗೆ ಅನ್ಯಾಯವಾಗಿದ್ದರೆ ಅವರೇ ಏಕೆ ದೂರು ನೀಡಿಲ್ಲ? ಇದೊಂದು ಬ್ಲ್ಯಾಕ್​ಮೇಲ್​ ರಾಜಕಾರಣ ಎಂದು ಆರೋಪಿಸಿ ಕರ್ನಾಟಕ ಕನ್ನಡ ಪರ ಒಕ್ಕೂಟದ ಅಧ್ಯಕ್ಷ ಪುಟ್ಟೇಗೌಡ ದೂರು ನೀಡಿದ್ದಾರೆ.

ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ ದಿನೇಶ್​ ಕಲ್ಲಹಳ್ಳಿ ವಿರುದ್ಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ದೂರು ದಾಖಲು
ದಿನೇಶ್ ಕಲ್ಲಹಳ್ಳಿ
Skanda
|

Updated on:Mar 03, 2021 | 4:38 PM

Share

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್​ ಜಾರಕಿಹೊಳಿ ರಾಜಿನಾಮೆಗೂ ಕಾರಣವಾದ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ವಿರುದ್ಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡ ಪರ ಒಕ್ಕೂಟದಿಂದ ದಿನೇಶ್​ ಕಲ್ಲಹಳ್ಳಿ ವಿರುದ್ಧ ದೂರು ದಾಖಲಿಸಲಾಗಿದ್ದು, ರಾಜಕೀಯ ಷಡ್ಯಂತ್ರದಿಂದ ಸಚಿವರ ತೇಜೋವಧೆ ಮಾಡಲಾಗಿದೆ ಎಂದು ಆರೋಪ ಹೊರಿಸಲಾಗಿದೆ. ದಿನೇಶ್ ಕಲ್ಲಹಳ್ಳಿಗೂ ರಾಸಲೀಲೆ ಪ್ರಕರಣಕ್ಕೂ ಸಂಬಂಧವಿಲ್ಲ. ಯುವತಿಗೆ ಅನ್ಯಾಯವಾಗಿದ್ದರೆ ಅವರೇ ಏಕೆ ದೂರು ನೀಡಿಲ್ಲ? ಇದೊಂದು ಬ್ಲ್ಯಾಕ್​ಮೇಲ್​ ರಾಜಕಾರಣ ಎಂದು ಆರೋಪಿಸಿ ಕರ್ನಾಟಕ ಕನ್ನಡ ಪರ ಒಕ್ಕೂಟದ ಅಧ್ಯಕ್ಷ ಪುಟ್ಟೇಗೌಡ ದೂರು ನೀಡಿದ್ದಾರೆ.

ಆ ವಿಡಿಯೋವನ್ನು ಸಂಪೂರ್ಣ ಎಡಿಟ್​ ಮಾಡಿಸಲಾಗಿದೆ. ರಾಸಲೀಲೆ ದೃಶ್ಯ ಚಿತ್ರೀಕರಿಸಿದ್ದು, ಎಡಿಟ್​ ಮಾಡಿದ್ದು ಯಾರು? ಇಷ್ಟಕ್ಕೂ ಆ ದೃಶ್ಯವನ್ನು ನೋಡಿದರೆ ಸಮ್ಮತಿ ಲೈಂಗಿಕ ಕ್ರಿಯೆ​ ಥರ ಕಾಣುತ್ತಿದೆ. ಆದರೆ, ಇದನ್ನ ಬಳಸಿಕೊಂಡು ಸಚಿವರ ತೇಜೋವಧೆ ಮಾಡುತ್ತಿರುವುದು ಸರಿಯಲ್ಲ. ಈ ಬ್ಲ್ಯಾಕ್​ಮೇಲ್ ರಾಜಕಾರಣಕ್ಕೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿಯನ್ನ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಸಂತ್ರಸ್ತೆ ಕುಟುಂಬದವರು ಭಯದಲ್ಲಿ ಬದುಕುತ್ತಿದ್ದಾರೆ ಈ ಬಗ್ಗೆ ನಿನ್ನೆ ಮಾತನಾಡಿದ್ದ ದಿನೇಶ್​ ಕಲ್ಲಹಳ್ಳಿ, ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ. ಸಂತ್ರಸ್ತೆ ಕುಟುಂಬದ ಸದಸ್ಯರೊಬ್ಬರು ಸಂಪರ್ಕಿಸಿದ್ದರು. ನಿನ್ನೆ ನನ್ನನ್ನು ಸಂಪರ್ಕಿಸಿದ್ದ ಸಂತ್ರಸ್ತೆ ಕುಟುಂಬ ಸದಸ್ಯರು ಹಾಗೂ ವಕೀಲರ ಜೊತೆ ಚರ್ಚಿಸಿ ಪೊಲೀಸರಿಗೆ ದೂರು ನೀಡಿದ್ದೇನೆ. ಇದೊಂದು ಬಹಳ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಸಂತ್ರಸ್ತೆ, ಕುಟುಂಬದ ಬಗ್ಗೆ ವಿವರಣೆ ನೀಡಲಾಗುವುದಿಲ್ಲ ಎಂದು ಹೇಳಿದ್ದರು. ಅಂತೆಯೇ, ನಾನು ನೀಡಿರುವ ದೂರಿನ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ದೂರನ್ನು ಸ್ವೀಕರಿಸಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ ಸೆಕ್ಸ್​​ ವಿಡಿಯೋ ಬಗ್ಗೆ ಕಬ್ಬನ್​ಪಾರ್ಕ್​ ಠಾಣೆ ಸಮೀಪ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪ್ರತಿಕ್ರಿಯೆ ನೀಡಿದ್ದರು. ಇದು ಅಧಿವೇಶನದ ಸಂದರ್ಭವೆಂದು ನಾನು ದೂರು ನೀಡಿಲ್ಲ. ಅಧಿವೇಶನ ಯಾವಾಗ ಇದೆ ಎಂಬುದೇ ನನಗೆ ಗೊತ್ತಿಲ್ಲ. ಸಂತ್ರಸ್ತೆ ಕುಟುಂಬಸ್ಥರ ಮಾಹಿತಿ ಮೇರೆಗೆ ದೂರು ನೀಡಿದ್ದೇನೆ ಅಷ್ಟೇ ಎಂದು ತಿಳಿಸಿದ್ದರು.

ಇದನ್ನೂ ಓದಿ:  ‘ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ; ಅಧಿವೇಶನದ ಸಂದರ್ಭವೆಂದು ನಾನು ದೂರು ನೀಡಿಲ್ಲ’

ಅಣ್ಣನ ರಾಜೀನಾಮೆ ಅಂಗೀಕರಿಸಿದ್ರೆ ನಿಮ್ಮ(ಯಡಿಯೂರಪ್ಪ) ಸಿ.ಡಿ. ರಿಲೀಸ್ ಮಾಡ್ತೀನಿ ಅಂತಿದ್ದಾನಂತೆ: ಇಂಥಾ ಮಾನಗೆಟ್ಟ ಸರ್ಕಾರ ಬೇಕಾ? -ಸಿದ್ದರಾಮಯ್ಯ

Published On - 4:29 pm, Wed, 3 March 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ