AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಬ್​ನಲ್ಲಿ ಟೆಸ್ಟ್ ಆದರೆ ವಿಡಿಯೋದ ಸತ್ಯಾಸತ್ಯತೆ ತಿಳಿಯಲಿದೆ; ಬಾಲಚಂದ್ರ ಜಾರಕಿಹೊಳಿ

Ramesh Jarkiholi CD Controversy: ‘ದಿನೇಶ್ ಕಲ್ಲಹಳ್ಳಿ ಬಗ್ಗೆ ಸಾಫ್ಟ್​ ಕಾರ್ನರ್​ನಿಂದ ಮಾತಾಡ್ತಿಲ್ಲ. ಜನರಿಗೆ ತೊಂದರೆ ಆಗಬಾರದು ಅಂತ ಗೋಕಾಕ ಭಾಗದಲ್ಲಿ ಹೋರಾಟ ನಿಲ್ಲಿಸಲು ಮನವಿ ಮಾಡಿದ್ದೇನೆ ಅಷ್ಟೇ.‘ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಲ್ಯಾಬ್​ನಲ್ಲಿ ಟೆಸ್ಟ್ ಆದರೆ ವಿಡಿಯೋದ ಸತ್ಯಾಸತ್ಯತೆ ತಿಳಿಯಲಿದೆ; ಬಾಲಚಂದ್ರ ಜಾರಕಿಹೊಳಿ
ದಿನೇಶ್ ಕಲ್ಲಹಳ್ಳಿ (ಎಡ), ಬಾಲಚಂದ್ರ ಜಾರಕಿಹೊಳಿ
guruganesh bhat
| Edited By: |

Updated on: Mar 07, 2021 | 5:46 PM

Share

ಬೆಂಗಳೂರು: ‘ಇದು ಫೇಕ್ ವಿಡಿಯೊ, ಲ್ಯಾಬ್​ನಲ್ಲಿ ಟೆಸ್ಟ್ ಆದ್ರೆ ನಿಜ ಏನು ಅಂತ ಗೊತ್ತಾಗುತ್ತದೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ವಿಡಿಯೋ ನಿಜವೋ ಅಲ್ಲವೋ ಎಂಬುದು ತಿಳಿಯಲಿದೆ. ₹ 15  ಕೋಟಿ ಖರ್ಚು ಮಾಡಿ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ತೆಗೆಯಬೇಕು ಎಂಬ ಒಂದೇ ಉದ್ದೇಶಕ್ಕೆ ಹೀಗೆ ಮಾಡಿದ್ದಾರೆ. ಈ ಕುರಿತು ತನಿಖೆ ಆಗಬೇಕು ಎಂಬುದು ನಾನು ಪ್ರಬಲವಾಗಿ ಒತ್ತಾಯಿಸುತ್ತೇನೆ. ದಯವಿಟ್ಟು ಆ ಮಹಿಳೆಯನ್ನು ಸಂತ್ರಸ್ತ ಮಹಿಳೆ ಎನ್ನಬೇಡಿ. ರಷ್ಯಾದಲ್ಲಿ ಸರ್ವರ್ ಬುಕ್ ಮಾಡಿ ಯೂಟ್ಯೂಬ್​ನಲ್ಲಿ ನಕಲಿ ಸಿಡಿ ಬಿಡುಗಡೆ ಮಾಡಲಾಗಿತ್ತು. ದಿನೇಶ್ ಕಲ್ಲಹಳ್ಳಿಯೂ ಇದರಲ್ಲಿ ಮಿಸ್​ಗೈಡ್ ಆಗಿರಬಹುದು. ಅವರಿಗೆ ಸಂಪೂರ್ಣ ಮಾಹಿತಿ ಕೊಡದೇ ದಾರಿತಪ್ಪಿಸಿದ್ದಾರೆ ಆಂತ ನನಗೆ ಅನ್ನಿಸುತ್ತೆ. ದಿನೇಶ್ ಕಲ್ಲಹಳ್ಳಿಯನ್ನು ನಮ್ಮ ಮೇಲೆ ಕಣ್ಣಿಟ್ಟಿರುವ ಹಲವರು ತಮ್ಮ ಉದ್ದೇಶಕ್ಕೆ ಬಳಸಿಕೊಂಡಿರಬಹುದು’ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಕುಮಾರಸ್ವಾಮಿ ಹೇಳಿದಂತೆ ಈ ಪ್ರಕರಣ ಮುಚ್ಚಿಹಾಕಲು ಪ್ರಕರಣವೇ ದಾಖಲಾಗಿಲ್ಲ. ಮಹಿಳೆ ಪೊಲೀಸರ ಮುಂದೆ ಬಂದಿಲ್ಲ. ಹೀಗಾಗಿ ಪ್ರಕರಣವೇ ನಿಂತಿರಲಿಲ್ಲ, ಇನ್ನು ಮುಚ್ಚಿ ಹೋಗುವುದು ಎಲ್ಲಿಂದ ಎಂದು ಬಾಲಚಂದ್ರ ಜಾರಕಿಹೊಳಿ ವಾದಿಸಿದರು.

ದಿನೇಶ್ ಕಲ್ಲಹಳ್ಳಿ ಬಗ್ಗೆ ಸಾಫ್ಟ್​ ಕಾರ್ನರ್​ ಇಲ್ಲ ‘ದಿನೇಶ್ ಕಲ್ಲಹಳ್ಳಿ ಬಗ್ಗೆ ಸಾಫ್ಟ್​ ಕಾರ್ನರ್​ನಿಂದ ಮಾತಾಡ್ತಿಲ್ಲ. ಜನರಿಗೆ ತೊಂದರೆ ಆಗಬಾರದು ಅಂತ ಗೋಕಾಕ ಭಾಗದಲ್ಲಿ ಹೋರಾಟ ನಿಲ್ಲಿಸಲು ಮನವಿ ಮಾಡಿದ್ದೇನೆ ಅಷ್ಟೇ. ಇವತ್ತು ನಾನೇ ರಮೇಶ್​ ಜಾರಕಿಹೊಳಿಯನ್ನು ಭೇಟಿ ಮಾಡ್ತೀನಿ. ಧೈರ್ಯವಾಗಿ ಹೊರಗೆ ಬರಲು ಮನವೊಲಿಸ್ತೀನಿ. ದಿನೇಶ್ ಕಲ್ಲಹಳ್ಳಿ ವಿರುದ್ಧ ಕಾನೂನು ಹೋರಾಟ ನಡೆಸುವ ಬಗ್ಗೆ ನಂತರ ಯೋಚಿಸ್ತೀವಿ. ಲಾಯರ್ ಜೊತೆಗೆ ಚರ್ಚೆ ಮಾಡಿ ಮುಂದಿನ ನಿರ್ಧಾರ ತಗೊಳ್ತೀವಿ ಎಂದು ಬಾಲಚಂದ್ರ ಜಾರಕಿಹೊಳಿ ಮುಂದಿನ ತಮ್ಮ ನಡೆಗಳ ಬಗ್ಗೆ ಸುಳಿವು ನೀಡಿದರು.

ಮಹಿಳೆಗೆ ‘ನೀನು ಹೆದರಬೇಡ, ನಿನಗೆ ₹ 50 ಲಕ್ಷ ಹಣ, ದುಬೈನಲ್ಲಿ ಕೆಲಸ ಕೊಡಿಸ್ತೀವಿ’ ಅಂತ ಭರವಸೆ ಕೊಟ್ಟು ಈ ಕೆಲಸ ಮಾಡಿಸಿದ್ದಾರೆ ಆಂತ ನಮ್ಮ ಸೋರ್ಸ್​ ಹೇಳುತ್ತದೆ. ನಾಳೆ ಒಂದು ದಿನ ಬಿಟ್ಟು ನಮ್ಮ ಸೋರ್ಸ್​ ಮೂಲಕ ನಾವು ಕೆಲಸ ಮಾಡ್ತೀವಿ. ಮರ್ಯಾದೆ ಗೌರವ ಹೋದರೆ ಕಷ್ಟವಾಗುತ್ತೆ. ನಾವೂ ಈ ಕೇಸ್​ ಫಾಲೊ ಮಾಡ್ತೀವಿ. ನಮ್ಮ ಸೋರ್ಸ್ ಮೂಲಕ ಕೆಲಸ ಮಾಡುತ್ತೇವೆ. ಇದು ಹನಿಟ್ರ್ಯಾಪ್ ಆಗಿದೆ. ಪ್ರಶ್ನೆಗಳನ್ನು ಯಾರೋ ಬರೆದುಕೊಟ್ಟಿದ್ದಾರೆ. ಅದನ್ನು ಆಕೆ ಕೇಳಿದ್ದಾಳೆ. ಐದು ರಾಜ್ಯಗಳಲ್ಲಿ ಚುನಾವಣೆ ನಡೀತಿದೆ. ನಮ್ಮ ಪಕ್ಷಕ್ಕೆ ಕೆಟ್ಟ ಹೆಸರು ತರಲು ಈ ಕೆಲಸ ಮಾಡಿದ್ದಾರೆ’ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: Ramesh Jarkiholi CD Controversy: ರಮೇಶ್ ಜಾರಕಿಹೊಳಿ ವಿರುದ್ಧದ ದೂರು ಹಿಂಪಡೆಯಲು ದಿನೇಶ್ ಕಲ್ಲಹಳ್ಳಿ ನಿರ್ಧಾರ

ರಾಜಕೀಯ ವಿಶ್ಲೇಷಣೆ | ರಮೇಶ್ ಜಾರಕಿಹೊಳಿ ಮುಂದಿರುವ ಮೂರು ಆಯ್ಕೆಗಳು

Follow Us
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ