AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲಿ ಸದ್ದು ಮಾಡಿದ ಉಡುಪಿಯ ಪರಶುರಾಮ ಥೀಮ್​ ಪಾರ್ಕ್​ ಹಗರಣ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಮ್​ ಪಾರ್ಕ್​ನಲ್ಲಿ ಪರಶುರಾಮನ ಕಂಚಿನ ಪ್ರತಿಮೆಯಲ್ಲಿ ಅರ್ಧ ಭಾಗ ಕಂಚು, ಇನ್ನರ್ಧ ಭಾಗ ಫೈಬರ್‌ನಲ್ಲಿ ನಿರ್ಮಾಣ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ವಿಚಾರ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಸುದ್ದು ಮಾಡಿತು. ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದರು.

ಸದನದಲ್ಲಿ ಸದ್ದು ಮಾಡಿದ ಉಡುಪಿಯ ಪರಶುರಾಮ ಥೀಮ್​ ಪಾರ್ಕ್​ ಹಗರಣ
ವಿಧಾನ ಪರಿಷತ್ ಅಧಿವೇಶನದಲ್ಲಿ ಸದ್ದು ಮಾಡಿದ ಉಡುಪಿಯ ಪರಶುರಾಮ ಥೀಮ್​ ಪಾರ್ಕ್​ ಹಗರಣ
Sunil MH
| Updated By: Rakesh Nayak Manchi|

Updated on: Feb 13, 2024 | 8:49 PM

Share

ವಿಧಾನ ಪರಿಷತ್, ಫೆ.13: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಮ್​ ಪಾರ್ಕ್​ನಲ್ಲಿ (Parashurama Theme Park, Karkala) ಪರಶುರಾಮನ ಕಂಚಿನ ಪ್ರತಿಮೆಯಲ್ಲಿ ಅರ್ಧ ಭಾಗ ಕಂಚು, ಇನ್ನೂ ಅರ್ಧ ಭಾಗ ಫೈಬರ್‌ನಲ್ಲಿ ನಿರ್ಮಾಣ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ವಿಚಾರ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಸುದ್ದು ಮಾಡಿತು. ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿಕೆಗೆ ಬಿಜೆಪಿ (BJP) ಸದಸ್ಯರು ಆಕ್ರೋಶ ಹೊರಹಾಕಿದರು.

ಕಾರ್ಕಳದಲ್ಲಿ ಪರಶುರಾಮ ವಿಗ್ರಹ ದೋಷ ಪೂರಿತವಾಗಿರುವ ಬಗ್ಗೆ ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯ ಯು.ಬಿ.ವೆಂಕಟೇಶ್​ ಪ್ರಸ್ತಾಪ ಮಾಡಿದರು. ಅಲ್ಲದೆ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಹಿಂದಿನ ಸರ್ಕಾರದಲ್ಲಾದ ಎಡವಟ್ಟನ್ನು ಸರ್ಕಾರ ಬಯಲು ಮಾಡಿದೆ ಎಂದರು.

ಪ್ರತಿಮೆ ನಿರ್ಮಾಣದಲ್ಲಿನ ಅಕ್ರಮದ ಬಗ್ಗೆ ಆ ಊರಿನ ಯುವಕರು ದೂರು ನೀಡಿದ್ದರು. ಪ್ರತಿಮೆ ಅರ್ಧ ಭಾಗ ಕಂಚು, ಇನ್ನರ್ಧ ಭಾಗ ಫೈಬರ್‌ನದ್ದಾಗಿತ್ತು. ಪರಶುರಾಮನ ಮೇಲೆ ಆ ಊರಿನ ಭಾಗದ ಜನರಿಗೆ ನಂಬಿಕೆ ಇದೆ. ಆದರೆ ದೇವರ ಹೆಸರು ಹೇಳಿ ಹಣ ಕಬಳಿಸುವ ಕೆಲಸ ಆಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಕ್ರಿಕೆಟ್​ ಬೆಟ್ಟಿಂಗ್ ಸುದ್ದು; ಬೆಟ್ಟಿಂಗ್ ಬ್ಯಾನ್​ಗೆ ಪಕ್ಷಾತೀತವಾಗಿ ಒತ್ತಾಯಿಸಿದ ಶಾಸಕರು

ಈ ವೇಳೆ ಬಿಜೆಪಿ ಸದಸ್ಯರು ತನಿಖೆ ಮಾಡಿ, ಪೇಪರ್​ನಲ್ಲಿರೋದನ್ನ ಹೇಳಬೇಡಿ ಎಂದರು. ಇದಕ್ಕೆ, ಇದು ನಮ್ಮ ಸರ್ಕಾರದಲ್ಲಿ ಆಗಿದ್ದಲ್ಲ, ಹಿಂದಿನ ಸರ್ಕಾರದಲ್ಲಿ ಆಗಿದ್ದು. ನ್ಯಾ.ನಾಗಮೋಹನ ದಾಸ್ ಸಮಿತಿ ಸ್ಥಳಕ್ಕೆ ಭೇಟಿ ನೀಡಿತ್ತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ದೂರು ನೀಡಿದ್ದರು ಎಂದು ತಂಗಡಗಿ ಹೇಳಿದಾಗ ಪ್ರಕರಣದ ಬಗ್ಗೆ ತನಿಖೆ ಮಾಡಿ ಎಂದು ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಹೇಳಿದರು.

ಮತ್ತೆ, ಬಿಜೆಪಿ ಅವಧಿಯಲ್ಲೇ ಆಗಿದ್ದು ಎಂದು ತಂಗಡಗಿ ಹೇಳಿದಾಗ ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದರು. ಜವಾಬ್ದಾರಿಯಿಂದ ಹೇಳಿಕೆ‌ ಕೊಡಿ ಎಂದು ಬಿಜೆಪಿ ಸದಸ್ಯರು ಹೇಳಿದರು. ದೇವರ ತಲೆ ಮೇಲೆ ಹೊತ್ತು ಅಂದರೆ ಏನರ್ಥ ಎಂದು ಕೇಶವ ಪ್ರಸಾದ್ ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ್ ಹೊರಟ್ಟಿ, ಎರಡೂ ಕಡೆಯ ಸದಸ್ಯರನ್ನ ಸಮಾಧಾನ ಮಾಡಿದರು.

ಪರಶುರಾಮ್ ಥೀಮ್ ಪಾರ್ಕ್ ಹಗರಣ ಸಿಐಡಿ ಹೆಗಲಿಗೆ

ಪರಶುರಾಮ್ ಪ್ರತಿಮೆ ನಿರ್ಮಾಣದಲ್ಲಾದ ಅಕ್ರಮದ ಬಗ್ಗೆ ಸಿಐಡಿ ತನಿಖೆ ಮಾಡಿಸುತ್ತೇವೆ ಎಂದು ಶಿವರಾಜ್ ತಂಗಡಗಿ ಹೇಳಿದರು. ಮಂಗಳೂರು ಭಾಗದವರು ಬಹಳ‌ ದೈವ ಭಕ್ತರು. ಸಿಐಡಿ ತನಿಖೆಗೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಸಿಐಡಿ ತನಿಖೆ ಮಾಡಿಸೇ ಮಾಡಿಸ್ತೇವೆ. ಕೆಳಗೆ ಕಂಚು, ಮೇಲೆ ಫೈಬರ್ ಇಟ್ಟ ಗುತ್ತಿಗೆದಾರರ ವಿಚಾರಣೆ ಮಾಡಲಾಗುತ್ತದೆ. ನಿಜವಾದ ಕಳ್ಳರಿಗೆ ಶಿಕ್ಷೆ ಕೊಡುತ್ತೇವೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!