AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನು ಯಡಿಯೂರಪ್ಪ ಪರ ಎಂದು ಘೋಷಿಸಿದ ಬಳಿಕ ಸಚಿವ ಯೋಗೇಶ್ವರ್ ತಮ್ಮ ಪ್ರವಾಸೋದ್ಯಮ ಇಲಾಖೆ ಕಾರ್ಯಗಳಲ್ಲಿ ಇಂದು ಫುಲ್​ ಬ್ಯುಸಿ!

CP Yogeshwar: ಇಂದು ವಿಧಾನಸೌಧದಲ್ಲೂ ಇಲಾಖೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಪ್ರವಾಸೋದ್ಯಮ ಸಚಿವ ಯೋಗೇಶ್ವರ್, ವೃಷಭಾವತಿ ಕಣಿವೆಯ ಮಾಲಿನ್ಯ ತಪಾಸಣೆಗೆ 4 ತುರ್ತು ಸ್ಪಂದನೆ ವಾಹನಗಳ‌ನ್ನು ಲೋಕಾರ್ಪಣೆಗೊಳಿಸಿದರು. ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ತಾನು ಯಡಿಯೂರಪ್ಪ ಪರ ಎಂದು ಘೋಷಿಸಿದ ಬಳಿಕ ಸಚಿವ ಯೋಗೇಶ್ವರ್ ತಮ್ಮ ಪ್ರವಾಸೋದ್ಯಮ ಇಲಾಖೆ ಕಾರ್ಯಗಳಲ್ಲಿ ಇಂದು ಫುಲ್​ ಬ್ಯುಸಿ!
ತಾನು ಯಡಿಯೂರಪ್ಪ ಪರ ಎಂದು ಘೋಷಿಸಿದ ಬಳಿಕ ಸಚಿವ ಯೋಗೇಶ್ವರ್ ಇಂದು ತಮ್ಮ ಪ್ರವಾಸೋದ್ಯಮ ಇಲಾಖೆ ಕಾರ್ಯಗಳಲ್ಲಿ ಫುಲ್​ ಬ್ಯುಸಿ!
TV9 Web
| Edited By: |

Updated on:Jul 01, 2021 | 10:36 AM

Share

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಭಾರೀ ಚಚರ್ಚೆ ಮತ್ತು ವಿವಾದಕ್ಕೆ ಆಸ್ಪದವಾಗಿರುವ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ನಿನ್ನೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ನಾವೇ ಸುಟ್ಟುಹೋಗುತ್ತೇವೆ ಎಂದು ಘೋಷಿಸುವ ಮೂಲಕ ತಾವು ಯಡಿಯೂರಪ್ಪ ಪರ ಎಂಬುದನ್ನು ಘೋಷಿಸಿದ್ದರು.

ಈ ಮಧ್ಯೆ, ದಿಢೀರನೆ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡು ಅಲ್ಲಿಂದ ನಿನ್ನೆ ರಾತ್ರಿ ವಾಪಸಾದವರೆ ಇಂದು ಸೀದಾ ವಿಧಾನಸೌಧಕ್ಕೆ ತೆರಳಿ, ತಮ್ಮ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಆಸಕ್ತಿ ತೋರತೊಡಗಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಭೇಟಿ ಬಳಿಕ ಸಚಿವ ಸಿಪಿ ಯೋಗೇಶ್ವರ್ ತಮ್ಮ ಖಾತೆಯ ಬಗ್ಗೆ ಹೆಚ್ಚು ಕೆಲಸ ಪ್ರಾರಂಭಿಸಿರುವುದು ಎದ್ದುಕಾಣುತ್ತಿದೆ.

ಕಳೆದ ವಾರ ಸುದ್ದಿಗೋಷ್ಠಿ ಹಮ್ಮಿಕೊಂಡು ಪ್ರವಾಸೋದ್ಯಮ ಇಲಾಖೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೂ ತೆರಳಿ, ಇಲಾಖಾ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬರೀ ಭಿನ್ನಮತೀಯ ಚಟುವಟಿಕೆ ಮಾತ್ರ ಮಾಡುತ್ತಿಲ್ಲವೆಂದು ಸಾಬೀತುಪಡಿಸಿಕೊಂಡು, ತನ್ನ ಇಲಾಖೆಯ ಕೆಲಸದಲ್ಲೂ ನಾನು ಸೈ ಎಂದು ತೋರಿಸಿಕೊಳ್ಳುವ ತುರ್ತು ಅನಿವಾರ್ಯತೆಯಲ್ಲಿದ್ದಾರೆ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್.

ಇಂದು ವಿಧಾನಸೌಧದಲ್ಲೂ ಇಲಾಖೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಪ್ರವಾಸೋದ್ಯಮ ಸಚಿವ ಯೋಗೇಶ್ವರ್, ವೃಷಭಾವತಿ ಕಣಿವೆಯ ಮಾಲಿನ್ಯ ತಪಾಸಣೆಗೆ 4 ತುರ್ತು ಸ್ಪಂದನೆ ವಾಹನಗಳ‌ನ್ನು ಲೋಕಾರ್ಪಣೆಗೊಳಿಸಿದರು. ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಚಿವ ಯೋಗೇಶ್ವರ್ ಆ ಮೂಲಕ ಕೇವಲ ಭಿನ್ನಮತೀಯ ಚಟುವಟಿಕೆಯಲ್ಲಿ ಮಾತ್ರ ತೊಡಗಿಸಿಕೊಂಡಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನದಲ್ಲಿದ್ದಾರೆ. (ರಾಮನಗರ) ಜಿಲ್ಲಾ ಉಸ್ತುವಾರಿ ಸಚಿವ ಹಂಚಿಕೆ ಸಂದರ್ಭದಲ್ಲಿ ತಮ್ಮನ್ನು ತಾವು ಪ್ರೂವ್ ಮಾಡಿಕೊಳ್ಳಲು ಯೋಗೇಶ್ವರ್ ಯತ್ನಿಸುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

(disgruntled tourism minister cp yogeshwar fully indulge in his department works)

ಕೊವಿಡ್ ನಿಯಮ ಉಲ್ಲಂಘಿಸಿದ ಸಚಿವ ಸಿ.ಪಿ.ಯೋಗೇಶ್ವರ್; ದೇವಸ್ಥಾನದಲ್ಲಿ ಕೇಕ್ ಕತ್ತರಿಸಿ ಪತ್ನಿ ಹುಟ್ಟುಹಬ್ಬ ಆಚರಣೆ

Published On - 10:28 am, Thu, 1 July 21

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ