AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ್ನಾಟಕಕ್ಕೆ 5 ಕೋಟಿ ರೂ. ವ್ಯಾಜ್ಯ ಶುಲ್ಕ ಪಾವತಿಸಲು ತಮಿಳುನಾಡು ಸರ್ಕಾರಕ್ಕೆ ಆದೇಶ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಅಕ್ರಮ ಆಸ್ತಿ ಜಪ್ತಿ ಮಾಡಲಾಗಿದೆ. ಇದರ ವಿವರಗಳನ್ನು ಎಸ್​ಪಿಪಿ ಕಿರಣ್ ಎಸ್ ಜವಳಿ ಅವರು ಬೆಂಗಳೂರು ವಿಶೇಷ ಕೋರ್ಟ್​ಗೆ ಸಲ್ಲಿಸಿದ್ದಾರೆ. ಅದರಂತೆ, ವ್ಯಾಜ್ಯ ಶುಲ್ಕವಾಗಿ ಕರ್ನಾಟಕಕ್ಕೆ ಐದು ಕೋಟಿ ರೂಪಾಯಿ ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ವಿಶೇಷ ಕೋರ್ಟ್ ಆದೇಶಿಸಿದೆ.

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ್ನಾಟಕಕ್ಕೆ 5 ಕೋಟಿ ರೂ. ವ್ಯಾಜ್ಯ ಶುಲ್ಕ ಪಾವತಿಸಲು ತಮಿಳುನಾಡು ಸರ್ಕಾರಕ್ಕೆ ಆದೇಶ
ಜೆ.ಜಯಲಲಿತಾImage Credit source: PTI
Ramesha M
| Edited By: |

Updated on:Jan 22, 2024 | 9:37 PM

Share

ಬೆಂಗಳೂರು, ಜ.22: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ (J.Jayalalithaa) ಅವರ ಅಕ್ರಮ ಆಸ್ತಿ ಜಪ್ತಿ ಮಾಡಲಾಗಿದೆ. ಇದರ ವಿವರಗಳನ್ನು ಎಸ್​ಪಿಪಿ ಕಿರಣ್ ಎಸ್ ಜವಳಿ ಅವರು ಬೆಂಗಳೂರು (Bengaluru) ವಿಶೇಷ ಕೋರ್ಟ್​ಗೆ ಸಲ್ಲಿಸಿದ್ದಾರೆ. ಅದರಂತೆ, ವ್ಯಾಜ್ಯ ಶುಲ್ಕವಾಗಿ ಕರ್ನಾಟಕಕ್ಕೆ ಐದು ಕೋಟಿ ರೂಪಾಯಿ ಪಾವತಿಸುವಂತೆ ತಮಿಳುನಾಡು (Tamil Nadu) ಸರ್ಕಾರಕ್ಕೆ ವಿಶೇಷ ಕೋರ್ಟ್ ಆದೇಶಿಸಿದೆ.

ಡಿಡಿ ರೂಪದಲ್ಲಿ ಐದು ಕೋಟಿ ರೂಪಾಯಿಯನ್ನು ಕರ್ನಾಟಕ ಸರ್ಕಾರಕ್ಕೆ ನೀಡಲು ಸೂಚನೆ ನೀಡಲಾಗಿದೆ. ಜಯಲಲಿತಾ ಅವರಿಗೆ ಸೇರಿದ ಒಡವೆ ತನ್ನ ವಶದಲ್ಲಿರುವ ಹಿನ್ನೆಲೆ ಒಡವೆ ಹರಾಜು ಬದಲು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡಲು ವಿಶೇಷ ಕೋರ್ಟ್ ನಿರ್ಧಾರ ಮಾಡಿದೆ.

ಇದನ್ನೂ ಓದಿ: ಶಿವರಾಮ ಕಾರಂತ ಬಡಾವಣೆಯಲ್ಲಿ ಸದ್ಯಕ್ಕಿಲ್ಲ ನಿವೇಶನ ಹಂಚಿಕೆ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ

ಅಲ್ಲದೆ, ತಮಿಳುನಾಡಿನ ಗೃಹ ಕಾರ್ಯದರ್ಶಿ ಪೊಲೀಸರೊಂದಿಗೆ ಕೋರ್ಟ್​​ಗೆ ಹಾಜರಾಗಬೇಕು. ಒಡವೆಗಳನ್ನು ಗುರುತಿಸಿ ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳುವಂತೆ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಮೋಹನ್‌ ಅವರು ಸೂಚಿಸಿದ್ದಾರೆ.

1996ರಲ್ಲಿ ಜಯಲಲಿತಾ ಅವರು ಅಕ್ರಮ ಆಸ್ತಿಗಳಿಸಿದ್ದಾರೆಂಬ ಆರೋಪದಲ್ಲಿ ಸಿಬಿಐ ದಾಳಿ ನಡೆಸಿದ್ದರು. 1997ರಲ್ಲಿ ಪ್ರಕರಣದ ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿತ್ತು. ಇದರ ವಿಚಾರಣೆ ನಡೆದು ಶಿಕ್ಷೆ ಪ್ರಕಟವಾಗುವ ಮುನ್ನವೇ ಜಯಲಲಿತಾ ಅವರು 2016 ರಲ್ಲಿ‌ ಮೃತಪಟ್ಟಿದ್ದರು.

ಜಯಲಲಿತಾ ಅವರು 1991ರಿಂದ 96 ನಡುವೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಚೆನ್ನೈನಲ್ಲಿ ಐಷಾರಾಮಿ ಬಂಗಲೆಗಳನ್ನು ಹೊಂದಿದ್ದರು, ಹೈದರಾಬಾದ್‌ ಬಳಿ ಫಾರ್ಮ್‌ ಹೌಸ್‌, ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ಭಾರಿ ಚಹಾ ತೋಟ, ಬೆಲೆಬಾಳುವ ಆಭರಣ, ಕಾರ್ಖಾನೆಗಳು, ಬ್ಯಾಂಕ್‌ ಖಾತೆಗಳಲ್ಲಿ ಸಂಪತ್ತು ಕ್ರೋಡೀಕರಣ, ಐಷಾರಾಮಿ ಕಾರುಗಳನ್ನು ಹೊಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Mon, 22 January 24

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ